ಕನ್ನಡಪ್ರಭ ವಾರ್ತೆ ಮಂಡ್ಯ
ಭಾನುವಾರ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಪಾಂಡವಪುರ ತಾಲೂಕಿನ ಮೇಲುಕೋಟೆಯ ಶ್ರೀ ಚೆಲುವನಾರಾಯಣಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದ್ದ ಕಾರಣ ಅವರ ಸ್ವಾಗತಕ್ಕೆ ಇಬ್ಬರೂ ನಾಯಕರು ಕಾದುನಿಂತಿದ್ದರು.
ಸೇನಾ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಉಪರಾಷ್ಟ್ರಪತಿಗಳಿಗೆ ಮೊದಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು. ನಂತರ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತ ಕೋರಿದರು. ಇದೇ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೂಡ ಹಾಜರಿದ್ದರು.ಎಚ್.ಡಿ.ಕುಮಾರಸ್ವಾಮಿ ಹಾಗೂ ಎನ್.ಚಲುವರಾಯಸ್ವಾಮಿ ಅವರು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರೊಂದಿಗೆ ಶ್ರೀಚೆಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು. ಅವರು ಪೂಜೆ ಸಲ್ಲಿಸುವಾಗಲೂ ಜೊತೆಯಾಗಿ ನಿಂತಿದ್ದರು. ಉಪರಾಷ್ಟ್ರಪತಿಗಳಿಗೆ ಸಾಂಪ್ರದಾಯಿಕವಾಗಿ ದೇವಾಲಯದ ವತಿಯಿಂದ ಅಭಿನಂದಿಸಿ, ಪ್ರಸಾದ ನೀಡಲಾಯಿತು.
ಇಂದು ನಾಗಮಂಗಲಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ
ಬೆಳಗ್ಗೆ 9.30ಕ್ಕೆ ತಾಲೂಕಿನ ಬಚ್ಚಿಕೊಪ್ಪಲು ಗ್ರಾಮದಲ್ಲಿ ನಿರ್ಮಿಸಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿದ ಬಳಿಕ ಮಣ್ಣಹಳ್ಳಿ ಗ್ರಾಮದ ಸಮೀಪ 9.5 ಎಕರೆ ಪ್ರದೇಶದಲ್ಲಿ ವಾಹನ ಚಾಲನಾ ತರಬೇತಿ ಕೇಂದ್ರ (ಡ್ರೈವಿಂಗ್ ಟ್ರೈನಿಂಗ್ ಟ್ರ್ಯಾಕ್) ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವರು.
ಸಂಜೆ 4 ಗಂಟೆಗೆ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗ ಮತ್ತು ಚೆಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗುವರು.