ಕನ್ನಡಪ್ರಭ ವಾರ್ತೆ ಬೀದರ್
ಅವರು ಮಂಗಳವಾರ ಜಿಲ್ಲಾಡಳಿತ, ಜಿ.ಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ವಜ್ಞ ಅವರು ಹಾವೇರಿ ಜಿಲ್ಲೆಯ ಹಿರೆಕೇರುರ ತಾಲೂಕು ಮಾಸುರು ಗ್ರಾಮದಲ್ಲಿ ಜನಿಸಿ, ಜನರ ಅನುಭವಗಳನ್ನೆ ತಮ್ಮ ವಚನಗಳ ಮೂಲಕ ಪ್ರಚಾರ ಮಾಡಿ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದ್ದರು. ಅವರ 10 ಸಾವಿರಕ್ಕಿಂತಲೂ ಹೆಚ್ಚಿನ ವಚನಗಳು ದೊರೆತಿದ್ದು ಇನ್ನೂ ಹೆಚ್ಚಿನ ಸಂಶೋಧನೆ ಆಗಬೇಕಿದೆ ಎಂದರು.
ನಾವು ಚಿಕ್ಕವರಿದ್ದಾಗ ಸರ್ವಜ್ಞನ ವಚನಗಳನ್ನು ಹಾಡುತ್ತ ಮನೆಗಳಿಗೆ ಬರುತ್ತಿದ್ದ ಸ್ವಾಮಿಗಳು, ಅವರು ದವಸ ಧಾನ್ಯಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಸರ್ವಜ್ಞನವರೆ ಹೇಳಿದಂತೆ ಕೊಟ್ಟಿದ್ದು ತನಗೆ ಬಚ್ಚಿಟ್ಟಿದು ಪರರಿಗೆ ಎನ್ನುವಂತೆ ಅವರ ಹಲವಾರು ವಚನಗಳು ಬಹಳ ಅರ್ಥಪೂರ್ಣವಾಗಿ ಮತ್ತು ಅವು ಇಂದಿನ ಸಮಾಜಕ್ಕೆ ಬಹಳ ಪ್ರಸ್ತುತತೆ ಇವೆ ಎಂದರು.ಯುವ ಸಾಹಿತಿ ಬಾಲಾಜಿ ಕುಂಬಾರ ಚಟನಾಳ ಅವರು ಸರ್ವಜ್ಞ ಕುರಿತು ಅತಿಥಿ ಉಪನ್ಯಾಸ ನೀಡಿ, ಸರ್ವಜ್ಞ ಎಂಬುವರು ಗರ್ವದಿಂದ ಆದವನಲ್ಲ ಜನರ ಅನುಭಗಳನ್ನೆ ತಮ್ಮ ವಚನಗಳ ರೂಪದಲ್ಲಿ ಜನರಿಗೆ ತಿಳಿಸಿದ್ದರು. ಸಾಮಾಜಿಕ ಓರೆ ಕೋರೆ ತಿದ್ದಿದ್ದರು. ಜಾತೀಯತೆ, ಕಂದಾಚಾರ, ಮೌಢ್ಯಗಳ ನಿರ್ಮೂಲನೆ ಅವರ ತ್ರಿಪದಿಗಳಲ್ಲಿ ಕಾಣಬಹುದು ಎಂದರು.
ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರ್ವಜ್ಞ ಭಾವಚಿತ್ರಕ್ಮೆ ಪೂಜೆ ಸಲ್ಲಿಸಿದ ನಂತರ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬೀದರ ನಗರದ ವಿವಿಧ ವೃತ್ತಗಳ ಮೂಲಕ ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮಂದಿರದವರೆಗೆ ಸರ್ವಜ್ಞ ಭಾವಚಿತ್ರದ ಮೆರವಣಿಗೆ ನಡೆಯಿತು.