ಡಿ.೨೯ರಂದು ವಿಶ್ವಮಾನವ ಧರ್ಮದ ಮೊದಲ ಮಹಾ ಅಧಿವೇಶನ

KannadaprabhaNewsNetwork |  
Published : Dec 16, 2025, 01:15 AM IST
ಕುವೆಂಪು  | Kannada Prabha

ಸಾರಾಂಶ

ಬುದ್ಧ, ಬಸವ, ಅಂಬೇಡ್ಕರ್ ಆಶಯಗಳನ್ನೊಳಗೊಂಡ ಕುವೆಂಪು ಅವರ ಪಂಚತತ್ವಗಳೇ ವಿಶ್ವಮಾನವ ಧರ್ಮವಾಗಿದೆ. ಕಳೆದ ಸೆಪ್ಟೆಂಬರ್ ಮಾಹೆಯಲ್ಲಿ ನಡೆದ ಸಾಮಾಜಿಕ ಸಮೀಕ್ಷೆಯಲ್ಲಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ೫೦೦ಕ್ಕೂ ಹೆಚ್ಚು ಜನ ಧರ್ಮ ಕಾಲಂನಲ್ಲಿ ವಿಶ್ವಮಾನವ ಧರ್ಮ ಎಂದು ನಮೂದಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ವಿಶ್ವಮಾನವ ಧರ್ಮ ಜಾಗೃತಿ ವೇದಿಕೆ ವತಿಯಿಂದ ಡಿ.೨೯ರಂದು ‘ವಿಶ್ವಮಾನವ ಧರ್ಮದ ಮೊದಲ ಮಹಾ ಅಧಿವೇಶನ’ವನ್ನು ಮೈಸೂರಿನ ಟಿ.ನರಸೀಪುರ ತಾಲೂಕಿನ ಯಾಚೇನಹಳ್ಳಿಯ ಶ್ರೀರಾಮಕೃಷ್ಣ ಸೇವಾ ಕೇಂದ್ರ ಟ್ರಸ್ಟ್‌ನ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್‌ನ ವ್ಯವಸ್ಥಪಕ ಟ್ರಸ್ಟಿ ಶ್ರೀನಾದಾನಂದನಾಥ ಸ್ವಾಮೀಜಿ ತಿಳಿಸಿದರು.ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಸೇರಿದಂತೆ ಇತರೆ ವಿಚಾರವಂತರ ನೇತೃತ್ವದಲ್ಲಿ ಕುವೆಂಪು ತಾತ್ವಿಕ ಆಶಯಗಳ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.

ರಾಜ್ಯದ ಎಲ್ಲ ಸಮುದಾಯ ಪ್ರಗತಿಪರ ಸಂಘಟನೆಗಳು, ವಿಚಾರವಂತರು, ಕುವೆಂಪು ಅನುಯಾಯಿಗಳು, ನಾಗರಿಕರನ್ನೊಳಗೊಂಡ ಸ್ವಾಗತ ಸಮಿತಿ ರಚಿಸಿ ಮಹಾ ಅಧಿವೇಶನಕ್ಕೆ ಸಿದ್ಧತೆ ನಡೆಯುತ್ತಿದೆ. ನಾಡಿನ ಎಲ್ಲ ಜನರು ಅಧಿವೇಶನದಲ್ಲಿ ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ ಎಂದರು.

ಬುದ್ಧ, ಬಸವ, ಅಂಬೇಡ್ಕರ್ ಆಶಯಗಳನ್ನೊಳಗೊಂಡ ಕುವೆಂಪು ಅವರ ಪಂಚತತ್ವಗಳೇ ವಿಶ್ವಮಾನವ ಧರ್ಮವಾಗಿದೆ. ಕಳೆದ ಸೆಪ್ಟೆಂಬರ್ ಮಾಹೆಯಲ್ಲಿ ನಡೆದ ಸಾಮಾಜಿಕ ಸಮೀಕ್ಷೆಯಲ್ಲಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ೫೦೦ಕ್ಕೂ ಹೆಚ್ಚು ಜನ ಧರ್ಮ ಕಾಲಂನಲ್ಲಿ ವಿಶ್ವಮಾನವ ಧರ್ಮ ಎಂದು ನಮೂದಿಸಿದ್ದಾರೆ ಎಂದು ನುಡಿದರು.

ಪತ್ರಕರ್ತ ಚಂದ್ರಶೇಖರ್ ದ.ಕೋ.ಹಳ್ಳಿ ಮಾತನಾಡಿ, ಯಾಚನಹಳ್ಳಿಯ ಶ್ರೀರಾಮಕೃಷ್ಣ ಸೇವಾ ಕೇಂದ್ರದಲ್ಲಿ ಕುವೆಂಪು ಅವರ ಚಿತಾಭಸ್ಮವನ್ನು ಸಂರಕ್ಷಿಸಲಾಗುತ್ತಿದೆ. ಸರ್ಕಾರದ ೧.೫೦ ಕೋಟಿ ರು. ಅನುದಾನದಿಂದ ಸ್ಮಾರಕ ನಿರ್ಮಾಣವಾಗುತ್ತಿದೆ. ಕುವೆಂಪು ಅವರು ಮೈಸೂರಿಗೆ ಹತ್ತಿರದ ಸಂಪರ್ಕ ಹೊಂದಿದ್ದರು. ಮಂಡ್ಯ ಜಿಲ್ಲೆಯ ಜನ ಕುವೆಂಪು ಅವರನ್ನು ಹೆಚ್ಚು ಹಚ್ಚಿಕೊಂಡಿದ್ದರು ಆದ ಕಾರಣ ಹೆಚ್ಚಿನ ಕುವೆಂಪು ಅಭಿಮಾನಿಗಳು ಮಹಾಅವೇಶನದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ಕೆ.ಮಾಯಿಗೌಡ, ಎಂ.ವಿ.ಕೃಷ್ಣ, ಅಣ್ಣಯ್ಯ, ಟಿ.ಡಿ.ನಾಗರಾಜು ಇತರರಿದ್ದರು.

ರಾಜ್ಯ ಮಟ್ಟದ ಕ್ರಿಕೆಟ್: ಮಂಡ್ಯ ವೈದ್ಯರ ತಂಡಕ್ಕೆ ಜಯ

ಕನ್ನಡಪ್ರಭ ವಾರ್ತೆ ಮಂಡ್ಯ

ಹುಬ್ಬಳ್ಳಿ ನಗರದಲ್ಲಿ ಭಾನುವಾರ ನಡೆದ 2025ನೇ ಸಾಲಿನ ರಾಜ್ಯ ಮಟ್ಟದ ವೈದ್ಯರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಂಡ್ಯ ವೈದ್ಯರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.

ಮಂಡ್ಯ ತಂಡವನ್ನು ಮಂಡ್ಯ ವೈದ್ಯಕೀಯ ಕಾಲೇಜಿನ ಡಾ.ಮೋಹನ್, ತ್ರಿನೇತ್ರ ಕಣ್ಣಿನ ಆಸ್ಪತ್ರೆಯ ಡಾ.ಅವಿನಾಶ್, ಡಾ.ಶಶಾಂಕ್, ಡಾ.ಭರತ್, ಡಾ.ವಿವೇಕ್, ಡಾ.ಸುನಿಲ್, ಡಾ.ಕಿರಣ್, ಡಾ.ತೇಜಸ್ವಿ, ಡಾ.ಪ್ರವೀಣ್, ಡಾ.ಕಾರ್ತಿಕ್, ಡಾ.ಶ್ರೀನಿಧಿ, ಡಾ.ನಕುಲ್, ಡಾ.ಕೀರ್ತಿ ಸಾಗರ್ ಹಾಗೂ ಡಾ. ಸಚಿನ್ ಪ್ರತಿನಿಧಿಸಿದ್ದರು. ಪಂದ್ಯಾವಳಿಯಲ್ಲಿ ರಾಜ್ಯದಾದ್ಯಂತ ಒಟ್ಟು 32 ವೈದ್ಯರ ತಂಡಗಳು ಭಾಗವಹಿಸಿದ್ದವು. ವಿಜೇತ ಮಂಡ್ಯ ವೈದ್ಯರ ತಂಡಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಪಾರಿತೋಷಕ ಹಾಗೂ ಬಹುಮಾನ ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!