ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಜೈ ಭೀಮ್ ದಲಿತ ಜಾಗೃತಿ ಸಮಿತಿ, ಸಿ.ಎ.ಕೆರೆ ಹೋಬಳಿ ಒಕ್ಕೂಟ ಮತ್ತು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಜಿಲ್ಲಾ ಘಟಕದಿಂದ ಅಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದರು.
ಪವಾಡ ರಹಸ್ಯ ಬಯಲು ಕಾರ್ಯಕ್ರಮ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೆ ಅಭಿನಂದಾನೆ ಹಾಗೂ ಶಾಸಕ ಕೆ.ಎಂ. ಉದಯ್ ಅವರ ಸಾಧನೆ ಗುರುತಿಸಿ ಮೌನ ಸಾಧಕ ಪ್ರಶಸ್ತಿ ನೀಡಿ ಅಭಿನಂದಿಸಲಾಗುತ್ತಿದೆ ಎಂದರು.ನಮ್ಮ ಕೆಲಸಗಳು ಮಾತನಾಡಬೇಕೆ ಹೊರತು ಕೇವಲ ಮಾತೆ ಕೆಲಸವಾಗಬಾರದು ಎಂಬಂತೆ ಶಾಸಕರು ಯಾವುದೇ ಪ್ರಚಾರಕ್ಕೆ ಆಸ್ಪದ ನೀಡದೇ ತನ್ನ ತನ್ನ ಕೆಲಸಗಳ ಬಗ್ಗೆ ಹೆಚ್ಚು ಮಾತನಾಡದೆ ಮೌನವಾಗಿದ್ದುಕೊಂಡೇ ಕ್ಷೇತ್ರ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುತ್ತಿರುವುದನ್ನು ಕ್ಷೇತ್ರದ ಪ್ರಜ್ಞಾವಂತ ನಾಗರಿಕರು ಗಮನಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ನಮ್ಮ ಸಮಾಜ ಸೇವಾ ಸಂಸ್ಥೆಗಳ ವತಿಯಿಂದ ಮೌನ ಸಾಧಕ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದೇವೆ ಎಂದರು.
ಇದೇ ವೇಳೆ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ಅವರು ಪವಾಡ ರಹಸ್ಯ ಬಯಲು ಪ್ರದರ್ಶನ ನಡೆಸಿಕೊಡುವರು. ಈ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಸನ್ಮಾನಿಸಲಾಗುವುದು ಎಂದರು.
ಜಿ.ಎಸ್.ಸುಮಗೆ ಪಿಎಚ್.ಡಿ
ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎನ್. ಆನಂದಗೌಡರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಜೆ.ಎಸ್.ಎಸ್. ಮಹಿಳಾ ಕಾಲೇಜು ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಜಿ.ಎಸ್.ಸುಮ ಅವರು ಗ್ರಾಮೀಣಾಭಿವೃದ್ಧಿಯಲ್ಲಿ ಜನರ ಭಾಗವಹಿಸುವಿಕೆ ಹಾಗೂ ಕೇಂದ್ರ ಸರ್ಕಾರದ ಜನಪರ ಯೋಜನೆಗಳು, ದೊಡ್ಡಮೋಳೆ ಗ್ರಾಮ ಪಂಚಾಯ್ತಿಗೆ ಸಂಬಂಧಿಸಿದಂತೆ ವಿಶೇಷ ಅಧ್ಯಯನ ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆಂದು ಕುಲಸಚಿವರು(ಪರೀಕ್ಷಾಂಗ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.