ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಗರ ಗೋಪಿಶೆಟ್ಟಿಕೊಪ್ಪ ಹಾಗೂ ಗೋವಿಂದಪುರದಲ್ಲಿ ಮನೆ ಹಂಚಿಕೆ ಪ್ರಕ್ರಿಯೆ ವಿಳಂಬವಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲು ಶಿವಮೊಗ್ಗಕ್ಕೆ ಆಗಮಿಸುವುದಾಗಿ ಸಚಿವ ಜಮೀರ್ ಅಹಮ್ಮದ್ ತಿಳಿಸಿದ್ದಾರೆ. ಆದರೆ, ಇದೂವರೆಗೆ ಅವರು ಬಂದು ಪರಿಶೀಲನೆ ಮಾಡಿಲ್ಲ. ಮನೆಗಾಗಿ ಸಾಲ ಮಾಡಿ ಹಣ ಕಟ್ಟಿರುವ ಪಲಾನುಭವಿಗಳಿಗೆ ಇನ್ನೂ ಮನೆ ಸಿಕ್ಕಿಲ್ಲ. ಹೀಗಾಗಿ ಈ ಬಗ್ಗೆ ಗಮನಸೆಳೆದು ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಲಾ ಗುವುದು ಎಂದು ತಿಳಿಸಿದರು.
ಅದೇ ರೀತಿ, ಕಟ್ಟಡ ಕಾರ್ಮಿಕರ ಸಮಸ್ಯೆಗಳು ದುಪ್ಪಟ್ಟಿವೆ. ಇಲ್ಲಿ ಕಾರ್ಮಿಕರ ಕಲ್ಯಾಣಕ್ಕೆ ಮೀಸಲಿರಿಸಿದ್ದ ಹಣ ಸೇರಿದಂತೆ ಸೌಲಭ್ಯಗಳು, ಯೋಜನೆಗಳು ಕಳೆದು ಎರಡು ವರ್ಷದಿಂದ ಬಡವರಿಗೆ ಸೇರುತ್ತಿಲ್ಲ. ಕಟ್ಡಡ ಕಾರ್ಮಿಕರ ಮಕ್ಕಳಿಗೆ 2 ವರ್ಷದಿಂದ 10,632 ರು. ಶೈಕ್ಷಣಿಕ ಸಹಾಯ ಧನ ಲಭಿಸಿಲ್ಲ. ಹೀಗೆ ಅನೇಕ ಸವಲತ್ತು ಗಳು ಕಟ್ಟಡ ಕಾರ್ಮಿಕರ ಕೈ ಸೇರದೆ ಪರದಾಡುವಂತಾಗಿದೆ. ಆದ್ದರಿಂದ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿ ನೀಡಿ ಮನವಿ ಮಾಡಲಾಗುವುದು. ಈ ಬಗ್ಗೆ ಕರೆ ಮಾಡಿ ತಿಳಿಸಿದ್ದೇನೆ. ಬೆಂಗಳೂರಿಗೆ ಬರುವಂತೆ ತಿಳಿಸಿದ್ದಾರೆ ಎಂದರು.ಹಗರಣಗಳ ಸಿಬಿಐ ತನಿಖೆಯಾಗಲಿ:
ಮುಡಾ ಹಗರಣ ಹಾಗೂ ವಾಲ್ಮಿಕೀ ಅಭಿವೃದ್ಧಿ ನಿಗಮ ಹಗರಣ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಲ್ಲಿ ಆರೋಪ, ಪ್ರತ್ಯಾರೋಪಗಳು ದಿನೇ ದಿನೆ ಹೆಚ್ಚುತ್ತಿವೆ. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು. ಯಾವ ಸರ್ಕಾರದ ಅವಧಿಯಲ್ಲಿ ಹಗರಣ ನಡೆದಿದೆ ಪತ್ತೆ ಹಚ್ಚಬೇಕು. ಅದೇ ರೀತಿ, ಭೋವಿ ಅಭಿವೃದ್ಧಿ ನಿಗಮದಲ್ಲೂ ಹಗರಣ ನಡೆದಿರುವ ಬಗ್ಗೆ ಕೇಳಿ ಬರುತ್ತಿದೆ. ಆದ್ದರಿಂದ ಈ ಎಲ್ಲ ಹಗರಣಗಳನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.