ಕನ್ನಡಪ್ರಭ ವಾರ್ತೆ ವಿಜಯಪುರ
ಪಂಚಮಸಾಲಿ ಜಗದ್ಗುರು ಸಾಥ್:
ಹೋರಾಟದಲ್ಲಿ ಪಂಚಮಸಾಲಿ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಸಾಥ್ ನೀಡಿದರು. ಅಹೋರಾತ್ರಿ ಹೋರಾಟಕ್ಕೆ ಯತ್ನಾಳ ಜೊತೆಗೆ ಭಾಗಿಯಾಗಿ ಧರಣಿಗೆ ಕುಳಿತ ಪಂಚಮಸಾಲಿ ಸ್ವಾಮೀಜಿಗಳು ಸಂಪೂರ್ಣ ಬೆಂಬಲ ನೀಡಿದರು. ನ.4ರಿಂದಲೂ ಭಾಗಿಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಲ್ಲಿಯೂ ಕದಲದೆ ಕಳೆದ ಮೂರು ದಿನಗಳಿಂದ ಅಹೋರಾತ್ರಿ ಹೋರಾಟದಲ್ಲಿದ್ದಾರೆ. ಶಾಸಕ ಯತ್ನಾಳಗೆ ಬೆಂಬಲವಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾತ್ರಿ ಇಡೀ ಪ್ರತಿಭಟನಾ ಸ್ಥಳದಲ್ಲೆ ಕಾಲ ಕಳೆಯುತ್ತಿದ್ದಾರೆ. ನ.7ರಂದು ಕೇಂದ್ರದಿಂದ ಜೆಪಿಸಿ ತಂಡದ ಅಧ್ಯಕ್ಷ ಜಗದಂಬಿಕಾ ಪಾಲ ಆಗಮನ ಹಿನ್ನೆಲೆ ಶಾಸಕ ಯತ್ನಾಳ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೋರಾಟ ಮತ್ತಷ್ಟು ತೀವ್ರಗೊಂಡಿದೆ.ನಿತ್ಯ ಸಾವಿರಾರು ಜನರ ಬೆಂಬಲ:
ಹೋರಾಟ ದಿನಗಳೆದಂತೆ ತೀವ್ರಗೊಳ್ಳುತ್ತಿದ್ದು, ಸ್ಥಳಕ್ಕೆ ರೈತರು, ಸ್ವಾಮೀಜಿಗಳು, ವಿವಿಧ ಪಕ್ಷಗಳ ಮುಖಂಡರು, ವ್ಯಾಪಾರಸ್ಥರ ಸಂಘ, ನೌಕರರ ಸಂಘ, ರೈತ ಸಂಘ, ಮರಾಠಾ ಸಮಾಜ, ಗೋಂಧಳಿ ಸಮಾಜ, ಹಿಂದೂ ಸಂಘಟನೆಗಳು ಸೇರಿ ಅನೇಕ ಸಂಘ-ಸಂಸ್ಥೆಗಳಿಂದ ಹೋರಾಟಕ್ಕೆ ಬೆಂಬಲ ಸಿಗುತ್ತಿದೆ. ನಿತ್ಯ ಸಾವಿರಾರು ಜನರು ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.