ಭಕ್ತರನ್ನು ಬೆರಗಾಗಿಸಿದ ಒನಕೆ, ಕಳಸ ಕರಗ ನೃತ್ಯ

KannadaprabhaNewsNetwork |  
Published : May 26, 2024, 01:30 AM IST
೨೫ಕೆಎಲ್‌ಆರ್-೬ಕೋಲಾರದ ಪಿ.ಸಿ.ಬಡಾವಣೆಯ ರೇಣುಕಾಂಭ ಸೇವಾ ಸಮಿತಿಯಿಂದ ರೇಣುಕಾ ಯಲ್ಲಮ್ಮ ದೇವಿಯ ಕರಗ ಮಹೋತ್ಸವದಲ್ಲಿ ಜನಮನ ಸೆಳೆದ ಒನಕೆ ಕರಗದ ನೃತ್ಯ. | Kannada Prabha

ಸಾರಾಂಶ

ಸುಮಾರು ೫ ಅಡಿ ಉದ್ದದ ಒನಕೆ ಮೇಲೆ ನೀರು ತುಂಬಿದ ತಾಮ್ರದ ಪಾತ್ರೆಯನ್ನಿಟ್ಟು ಒನಕೆಯನ್ನು ತಲೆಯ ಮೇಲಿಟ್ಟುಕೊಂಡು ಅದರಲ್ಲಿನ ವಸಂತದ ನೀರನ್ನು ನೃತ್ಯ ಪ್ರದರ್ಶನದ ಮೂಲಕ ಹೊರಚೆಲ್ಲುವ ಕರಗದ ಪೂಜಾರಿ ಮಂಜುನಾಥ್‌ರ ಕಲಾ ಪ್ರೌಢಿಮೆ ಮೆರೆದರು

ಕನ್ನಡಪ್ರಭ ವಾರ್ತೆ ಕೋಲಾರನಗರದ ಪಿ.ಸಿ.ಬಡಾವಣೆಯ ರೇಣುಕಾಂಭ ಸೇವಾ ಸಮಿತಿ ವತಿಯಿಂದ ರೇಣುಕಾ ಯಲ್ಲಮ್ಮ ದೇವಿಯ ಕರಗ ಮಹೋತ್ಸವದ ಅಂಗವಾಗಿ ಶನಿವಾರ ಸಂಜೆ ನಡೆದ ಒನಕೆ ಕರಗದ ನೃತ್ಯ ಜನಮನ ಸೂರೆಗೊಂಡಿತು.ಸುಮಾರು ೫ ಅಡಿ ಉದ್ದದ ಒನಕೆ ಮೇಲೆ ನೀರು ತುಂಬಿದ ತಾಮ್ರದ ಪಾತ್ರೆಯನ್ನಿಟ್ಟು ಒನಕೆಯನ್ನು ತಲೆಯ ಮೇಲಿಟ್ಟುಕೊಂಡು ಅದರಲ್ಲಿನ ವಸಂತದ ನೀರನ್ನು ನೃತ್ಯ ಪ್ರದರ್ಶನದ ಮೂಲಕ ಹೊರಚೆಲ್ಲುವ ಕರಗದ ಪೂಜಾರಿ ಮಂಜುನಾಥ್‌ರ ಕಲಾ ಪ್ರೌಢಿಮೆಯ ಸಾಹಸಕ್ಕೆ ಜನ ತಲೆದೂಗಿದರು.೩೨ನೇ ವರ್ಷದ ಮಹೋತ್ಸವ

ಒನಕೆಯನ್ನು ಕೈಯಿಂದ ಹಿಡಿಯದೇ ಒಂದು ತುದಿಯ ಮೇಲೆ ನೀರು ತುಂಬಿದ ಪಾತ್ರೆಯಿಟ್ಟು, ಮತ್ತೊಂದು ತುದಿಯನ್ನು ತಲೆ ಮೇಲಿಟ್ಟುಕೊಂಡು ನರ್ತಿಸುವ ಮೂಲಕ ಜನತೆ ನಿಬ್ಬೆರಗಾಗುವಂತೆ ಮಾಡಿದರು. ೩೨ನೇ ವರ್ಷದ ಕರಗ ಮಹೋತ್ಸವದ ಅಂಗವಾಗಿ ಒನಕೆ ಕರಗ ನೃತ್ಯಕ್ಕೂ ಮುನ್ನಾ ವಸಂತದ ನೀರು ತುಂಬಿದ ಏಳು ಕಳಸಗಳನ್ನು ಒಂದರ ಮೇಲೊಂದರಂತೆ ಜೋಡಿಸಿಕೊಂಡು ತಲೆಯ ಮೇಲಿಟ್ಟು ಮಾಡಿದ ನೃತ್ಯ ಮನಮೋಹಕವಾಗಿತ್ತು.

ಒನಕೆಯ ಮೇಲಿನ ತಾಮ್ರದ ಪಾತ್ರೆಯಲ್ಲಿರುವ ವಸಂತದ ನೀರು ನಮ್ಮ ಮೇಲೆ ಬಿದ್ದರೆ ಒಳಿತಾಗುತ್ತದೆ ಎಂಬ ನಂಬಿಕೆಯಿಂದ ನಾಗರೀಕರು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದು, ಸುಮಾರು ೧ ಗಂಟೆಗೂ ಹೆಚ್ಚು ಕಾಲ ನಡೆದ ಒನಕೆ, ಕಳಸಗಳನ್ನೊತ್ತ ನೃತ್ಯ ನಡೆಯಿತು. ರಸ್ತೆಯ ಇಕ್ಕೆಲಗಳು, ಮನೆಗಳ ಮೇಲೆ ಸಾವಿರಾರು ಜನ ನಿಂತು ಕರಗ ವೀಕ್ಷಿಸಿದರು.

ಹೂವಿನ ಕರಗ ಮಹೋತ್ಸವದಲ್ಲಿ ಒನಕೆ ಕರಗಕ್ಕೆ ಅತ್ಯಂತ ಮಹತ್ವದ ಸ್ಥಾನವಿದ್ದು, ಕರಗ ಮಹೋತ್ಸವದ ಸಮಾರೋಪವಾಗಿಯೂ ವಸಂತೋತ್ಸವವೂ ಇದೇ ಆಗಿರುತ್ತದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ