ಗಾಂಜಾ ಸಹಿತ ಓರ್ವನ ಬಂಧನ

KannadaprabhaNewsNetwork |  
Published : Sep 18, 2025, 01:10 AM IST
17ಎಚ್ಎಸ್ಎನ್9 : ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೋರ್ವನನ್ನು ಸಕಲೇಶಪುರ ಪಟ್ಟಣ ಠಾಣೆ ಪೋಲಿಸರು ಅಬಕಾರಿ ಇಲಾಖೆ ಸಹಯೋಗದಲ್ಲಿ ಬಂಧಿಸಿರುವ ಘಟನೆ ಬುಧವಾರ ನಡೆದಿದೆ. | Kannada Prabha

ಸಾರಾಂಶ

ಹೊರವಲಯದ ಆನೆಮಹಲ್ ಗ್ರಾಮದ ಬಡಾವಣೆಯೊಂದರಲ್ಲಿ ಹಸೈನಾರ್ ಆಲಿಯಾಸ್ ಹ್ಯಾರೀಸ್ ಸಹಚರರು ಕಾರೊಂದರಲ್ಲಿ ಬಂದು ಗಾಂಜಾ ಸೊಪ್ಪನ್ನು ಮಾರಾಟ ಮಾಡುವಾಗ ಪ್ರಜ್ವಲ್ ಎಂಬುವನನ್ನು ಪೊಲೀಸರು ಬಂಧಿಸಿದ್ದು , ಹಸೈನಾರ್, ಶೋಯಬ್ ಪರಾರಿಯಾಗಿರುತ್ತಾರೆ. ಆರೋಪಿಗಳು ಕಾರಿನಲ್ಲಿ ಬಂದು ಗಾಂಜಾ ಸೊಪ್ಪನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಸಕಲೇಶಪುರ ನಗರ ಠಾಣೆಯ ಇನ್ಸ್‌ಪೆಕ್ಟರ್‌ ಎಂ.ಜಗದೀಶ್ ಅವರ ತಂಡ ದಾಳಿ ಮಾಡಿ ಸುಮಾರು ೭೫೦ ಗ್ರಾಂ ಗಾಂಜಾವನ್ನು ವಶಪಡಿಸಿ ಒಬ್ಬ ಆರೋಪಿಯನ್ನು ಬಂಧಿಸಿರುತ್ತಾರೆ.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೋರ್ವನನ್ನು ಪಟ್ಟಣ ಠಾಣೆ ಪೊಲೀಸರು ಅಬಕಾರಿ ಇಲಾಖೆ ಸಹಯೋಗದಲ್ಲಿ ಬಂಧಿಸಿರುವ ಘಟನೆ ಬುಧವಾರ ನಡೆದಿದೆ.

ತಾಲೂಕಿನ ಹೊರವಲಯದ ಆನೆಮಹಲ್ ಗ್ರಾಮದ ಬಡಾವಣೆಯೊಂದರಲ್ಲಿ ಹಸೈನಾರ್ ಆಲಿಯಾಸ್ ಹ್ಯಾರೀಸ್ ಸಹಚರರು ಕಾರೊಂದರಲ್ಲಿ ಬಂದು ಗಾಂಜಾ ಸೊಪ್ಪನ್ನು ಮಾರಾಟ ಮಾಡುವಾಗ ಪ್ರಜ್ವಲ್ ಎಂಬುವನನ್ನು ಪೊಲೀಸರು ಬಂಧಿಸಿದ್ದು , ಹಸೈನಾರ್, ಶೋಯಬ್ ಪರಾರಿಯಾಗಿರುತ್ತಾರೆ. ಆರೋಪಿಗಳು ಕಾರಿನಲ್ಲಿ ಬಂದು ಗಾಂಜಾ ಸೊಪ್ಪನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಸಕಲೇಶಪುರ ನಗರ ಠಾಣೆಯ ಇನ್ಸ್‌ಪೆಕ್ಟರ್‌ ಎಂ.ಜಗದೀಶ್ ಅವರ ತಂಡ ದಾಳಿ ಮಾಡಿ ಸುಮಾರು ೭೫೦ ಗ್ರಾಂ ಗಾಂಜಾವನ್ನು ವಶಪಡಿಸಿ ಒಬ್ಬ ಆರೋಪಿಯನ್ನು ಬಂಧಿಸಿರುತ್ತಾರೆ.

ದಾಳಿಯಲ್ಲಿ ಇನ್ಸ್‌ಪೆಕ್ಟರ್ ಎಂ.ಜಗದೀಶ್, ಸಬ್ ಇನ್ಸ್‌ಪೆಕ್ಟರ್ ಮಹೇಶ್ ಮತ್ತು ಕ್ರೈಂ ಸಿಬ್ಬಂದಿಯಾದ ಪೃಥ್ವಿ, ಶ್ರೀಧರ್, ಚಾಲಕ ಮಧು, ಅಬಕಾರಿ ಇನ್ಸ್‌ಪೆಕ್ಟರ್‌ ವೆಂಕಟೇಶ್ ಸೇರಿದಂತೆ ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ