ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ತಾಲೂಕು ಆಡಳಿತಸೌಧದ ಒಳಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಾಗಮಂಗಲ ಪುರಸಭೆ ಹಾಗೂ ಬೆಳ್ಳೂರು ಪಟ್ಟಣ ಪಂಚಾಯ್ತಿಯ ಸಹಭಾಗಿತ್ವದಲ್ಲಿ ಗುರುವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ನಮ್ಮ ಸಂಸ್ಕೃತಿ, ಧಾರ್ಮಿಕತೆ, ಆಚಾರ ವಿಚಾರಗಳು ಇನ್ನೂ ಗಟ್ಟಿಯಾಗಿ ಉಳಿದುಕೊಳ್ಳಲು ವಾಲ್ಮೀಕಿಯಂತಹ ಮಹನೀಯರ ಕೊಡುಗೆ ಅಪಾರವಾಗಿದೆ. ಜಗತ್ತನ್ನೇ ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ಮಾಡಿದವರು ಮಹರ್ಷಿ ವಾಲ್ಮೀಕಿ ಎಂದರು.ಸಂಸ್ಕೃತದಲ್ಲಿ ಮೊಟ್ಟಮೊದಲು ರಚಿಸಿರುವ ರಾಮಾಯಣವೆಂಬ ಮಹಾಗ್ರಂಥದ ಚರಿತ್ರೆಯನ್ನು ಪ್ರತಿಯೊಬ್ಬರೂ ಅರ್ಥೈಸಿಕೊಂಡು ಪರಿವರ್ತನಾ ಜೀವನ ನಡೆಸುವ ಮೂಲಕ ಗುರಿಸಾಧನೆಗೆ ಮುಂದಾಗಬೇಕು. ಅವರು ರಚಿಸಿರುವ ಗ್ರಂಥಗಳು ದೇಶ, ವಿದೇಶಗಳಲ್ಲಿ ಖ್ಯಾತಿ ಪಡೆದು ಮಹರ್ಷಿ ವಾಲ್ಮೀಕಿ ಮಹಾಪುರಷ ಎನಿಸಿಕೊಂಡಿದ್ದಾರೆ. ಅವರ ತತ್ವ, ಆದರ್ಶ ಮತ್ತು ಮೌಲ್ಯಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡಿದರೆ ಉತ್ತಮ ಸಮಾಜ ನಿರ್ಮಾಣ ಮಾಡಬಹುದು ಎಂದರು.
ತಾಪಂ ಇಒ ಬಿ.ಎಸ್.ಸತೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೇಶ್, ಸಿಡಿಪಿಒ ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಎಸ್.ರಾಜೇಶ್, ತಾಲೂಕು ಕಸಾಪ ಅಧ್ಯಕ್ಷ ಸಿ.ಆರ್.ಚಂದ್ರಶೇಖರ್, ಜಿಪಂ ಮಾಜಿ ಸದಸ್ಯ ಮುತ್ತಣ್ಣ, ವಕೀಲ ಚಂದ್ರಶೇಖರ್, ದಸಂಸ ಮುಖಂಡರಾದ ಎಂ.ನಾಗರಾಜಯ್ಯ, ಕಂಚಿನಕೋಟೆ ಮೂರ್ತಿ, ಮುಳಕಟ್ಟೆ ಶಿವರಾಮಯ್ಯ ಸೇರಿದಂತೆ ಹಲವರು ಇದ್ದರು.