ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಒಂದು ಕೋಟಿ ರು. ದೀರ್ಘಾವಧಿ ಸಾಲ

KannadaprabhaNewsNetwork |  
Published : May 27, 2026, 03:00 AM IST
ಶಿಗ್ಗಾಂವಿ ತಾಲೂಕಿನ ಎನ್.ಎಂ. ತಡಸ (ನೀರಲಗಿ) ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನೂತನ ಸದಸ್ಯರನ್ನು ಕೆಸಿಸಿ ಬ್ಯಾಂಕ್ ನಿರ್ದೇಶಕ ಸಂಗಮೇಶ್ವರ ಕಂಬಾಳಿಮಠ ಸನ್ಮಾನಿಸಿ ಗೌರವಿಸಿದರು. | Kannada Prabha

ಸಾರಾಂಶ

ಪ್ರತಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಒಂದು ಕೋಟಿ ರು.ಗಳನ್ನು ದೀರ್ಘಾವಧಿ ಸಾಲವನ್ನು ನೀಡುವ ಉದ್ದೇಶವಿದ್ದು, ಅದರ ಕುರಿತು ಪ್ರಯತ್ನವನ್ನು ಮಾಡುತ್ತಿದ್ದು ಸದ್ಯದಲ್ಲಿಯೇ ಮಂಜೂರಾತಿಯನ್ನು ಮಾಡುವ ಭರವಸೆಯಿದೆ ಎಂದು ಕೆಸಿಸಿ ಬ್ಯಾಂಕ್ ನಿರ್ದೇಶಕ ಸಂಗಮೇಶ್ವರ ಕಂಬಾಳಿಮಠ ಹೇಳಿದರು.

ಶಿಗ್ಗಾಂವಿ: ಪ್ರತಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಒಂದು ಕೋಟಿ ರು.ಗಳನ್ನು ದೀರ್ಘಾವಧಿ ಸಾಲವನ್ನು ನೀಡುವ ಉದ್ದೇಶವಿದ್ದು, ಅದರ ಕುರಿತು ಪ್ರಯತ್ನವನ್ನು ಮಾಡುತ್ತಿದ್ದು ಸದ್ಯದಲ್ಲಿಯೇ ಮಂಜೂರಾತಿಯನ್ನು ಮಾಡುವ ಭರವಸೆಯಿದೆ ಎಂದು ಕೆಸಿಸಿ ಬ್ಯಾಂಕ್ ನಿರ್ದೇಶಕ ಸಂಗಮೇಶ್ವರ ಕಂಬಾಳಿಮಠ ಹೇಳಿದರು.ತಾಲೂಕಿನ ಎನ್. ಎಂ. ತಡಸ (ನೀರಲಗಿ) ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನೂತನ ಸದಸ್ಯರನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿದರು. ನೀರಲಗಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡಕ್ಕೆ ಎರಡು ಲಕ್ಷ ರು.ಗಳ ಅನುದಾನವನ್ನು ನೀಡುವುದಾಗಿ ಭರವಸೆಯನ್ನು ನೀಡಿದರು.ಈಗಾಗಲೇ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬಡ್ಡಿ ರಹಿತವಾಗಿ ಬೆಳೆ ಸಾಲವನ್ನು ನೀಡಲಾಗುತ್ತಿದೆ. ಅಲ್ಲದೆ ಕೆಸಿಸಿ ಬ್ಯಾಂಕ್‌ನಿಂದಲೂ ಹಲವಾರು ಸಾಲ ಸೌಲಭ್ಯಗಳನ್ನು ನೀಡುತ್ತಿದ್ದು, ರೈತರು ಸೌಲಭ್ಯವನ್ನು ಪಡೆದುಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದರ ಮೂಲಕ ಮರುಪಾವತಿಗೂ ಮುಂದಾಗಬೇಕು ಎಂದು ಮನವಿ ಮಾಡಿದರು.ಅಪೆಕ್ಸ ಬ್ಯಾಂಕ್‌ನಿಂದ ನಮಗೆ ಬರುವ ಸಣ್ಣ ಮೊತ್ತದ ಅನುದಾನವನ್ನು ಹೊಸೂರ, ಹುನಗುಂದ, ಸುರಪಗಟ್ಟಿ, ಇದೀಗ ನೀರಲಗಿ ಸಂಘಗಳಿಗೆ ನೀಡಲಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್.ಎಂ. ತಡಸ (ನೀರಲಗಿ) ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಿರೂಪಾಕ್ಷಪ್ಪ ಹಿಂದಿನಮನಿ ವಹಿಸಿದ್ದರು. ಕೆಎಂಎಫ್ ನಿರ್ದೇಶಕ ತಿಪ್ಪಣ್ಣಾ ಸಾತಣ್ಣವರ ಮಾತನಾಡಿ, ಸಹಕಾರಿ ಸಂಘಗಳು ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಹೊಂದುವುದರ ಮೂಲಕ ರೈತರಿಗೆ ಸಾಕಷ್ಟು ಪ್ರಮಾಣದಲ್ಲಿ ಸಹಕಾರಿಯಾಗಲಿದ್ದು, ಆ ದಿಸೆಯಲ್ಲಿ ಕೆಎಂಎಫ್‌ ಹಾಲಿನ ಡೈರಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರಾರಂಭಿಸುವುದರ ಮೂಲಕ ಇದೀಗ ಹಾಲಿನ ದರದಲ್ಲಿ ಹಾಲಿನ ಗುಣಮಟ್ಟವನ್ನು ಗುರ್ತಿಸಲು ಸಂಬಂಧಿಸಿದ ಯಂತ್ರಗಳನ್ನು ಅಳವಡಿಸಲಾಗಿದೆ. ಇದೀಗ ೨೦ ದಿನಕ್ಕೆ ಹಾಲಿನ ಬಟವಡೆ ಮಾಡುತ್ತಿದ್ದು ತಿಮ್ಮಾಪೂರ ಹಾಗೂ ನೀರಲಗಿ ಗ್ರಾಮಗಳಲ್ಲಿ ಪುನರ್ ಪ್ರಾರಂಭಿಸಬೇಕು ಎಂದರು.

ಪ್ರಾಸ್ತಾವಿಕವಾಗಿ ಸಂಘದ ಕಾರ್ಯನಿರ್ವಾಹಕ ಎಂ.ಎಸ್. ಪಾಟೀಲ ಮಾತನಾಡಿ, ನಮ್ಮ ಸಂಘಕ್ಕೆ ಕಟ್ಟಡದ ಅವಶ್ಯಕತೆಯಿದ್ದುಸ ಅದನ್ನು ಮಂಜೂರಾತಿ ಮಾಡುವ ಮೂಲಕ ಸಹಕಾರವನ್ನು ನೀಡಬೇಕು ಎಂದರು.ಇದೇ ಸಂದರ್ಭದಲ್ಲಿ ಸಹಕಾರಿ ಸಂಘಗಳ ನಿಬಂಧಕ ಎಸ್.ಬಿ. ಸುಣಗಾರ ಅವರನ್ನು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಯಲ್ಲಪ್ಪ ಹಂಚಿನಮನಿ, ವೀರಪ್ಪ ಮಿರ್ಜಿ, ಗಣಪತಿ ಗುಣೋಜಿ, ಹೊನ್ನಪ್ಪ ಮುಂದಿನಮನಿ, ಬಸನಗೌಡ ಪಾಟೀಲ, ಶಿವಾನಂದ ಮಾನ್ವಿ, ಗಂಗಪ್ಪ ತಾಂಡೋಳ್ಕರ, ಹನುಮಂತಪ್ಪ ಹರಿಜನ, ಗಂಗವ್ವ ಸುಲ್ತಾನಪೂರಮಠ, ಬೀಬಿಜಾನ ಹುಲಗೂರ, ಶಿವಾಜಿ ತಮ್ಮಣ್ಣವರ ಸೇರಿದಂತೆ ಹಲವರು ಇದ್ದರು.ಕೋಟೆಪ್ಪ ಹಡಪದ ಸ್ವಾಗತಿಸಿದರು. ಸಂಘದ ಯಲ್ಲೊಪ್ಪ ಹಂಚಿನಮನಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಹೆಯಲ್ಲಿ ಜು. 22ರಿಂದ ‘ಯುಕೆ-ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’
‘ತುಡುವೆ ಜೇನು’ ರಕ್ಷಣೆ ಚಿಂತನೆ: ಗಿರಿಜನರಿಗೆ ಚಿಂತೆ!