ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ರಾಣಿ ಅಬ್ಬಕ್ಕ 500 ಜಯಂತಿ ಆಚರಣೆ

KannadaprabhaNewsNetwork |  
Published : Sep 20, 2025, 01:02 AM IST
19ಬೈಂದೂರು - ಬೈಂದೂರು ,ಪ್ರ ದರ್ಜೆ ಕಾಲೇಜಿನಲ್ಲಿ ರಾಣಿ ಅಬ್ಬಕ್ಕರ 500ನೇ ಜಯಂತಿ ಕಾರ್ಯಕ್ರಮ | Kannada Prabha

ಸಾರಾಂಶ

ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ‌ನ ಸಭಾಂಗಣದಲ್ಲಿ ರಾಣಿ ಅಬ್ಬಕ್ಕ ಜಯಂತೋತ್ಸವ ಆಚರಣೆ ಸಮಿತಿ ವತಿಯಿಂದ ರಾಣಿ ಅಬ್ಬಕ್ಕ 500ನೇ ಜಯಂತೋತ್ಸವ ನಡೆಯಿತು

ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮದ ರ್ಜೆ ಕಾಲೇಜಿ‌ನ ಸಭಾಂಗಣದಲ್ಲಿ ರಾಣಿ ಅಬ್ಬಕ್ಕ ಜಯಂತೋತ್ಸವ ಆಚರಣೆ ಸಮಿತಿ ವತಿಯಿಂದ ರಾಣಿ ಅಬ್ಬಕ್ಕ 500ನೇ ಜಯಂತೋತ್ಸವ ನಡೆಯಿತು. ರಾಣಿ ಅಬ್ಬಕ್ಕನ ಧೀರತ್ವ, ಜೀವನ ಸಾಧನೆ, ಚರಿತ್ರೆ, ಯಶೋಗಾಥೆ ಮತ್ತು ಕೊಡುಗೆಯನ್ನು ವಿದ್ಯಾರ್ಥಿಗಳಿಗೆ ವಿವರಣಾತ್ಮಕವಾದ ಎಐ ವಿಡಿಯೋ ಪ್ರದರ್ಶನದ ಮೂಲಕ ಪ್ರಸ್ತುತಪಡಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾದ ಅಕ್ಷತಾ ಗಿರೀಶ್ ಅವರು ಮಾತನಾಡಿ, ರಾಣಿ ಅಬ್ಬಕ್ಕನ ತತ್ವ ಆದರ್ಶಗಳನ್ನು ವಿದ್ಯಾರ್ಥಿಗಳ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಹಾಗೂ ನಮ್ಮ ಕರಾವಳಿ ಭಾಗದ ಧೀಮಂತ ಮಹಿಳೆ ರಾಣಿ ಅಬ್ಬಕ್ಕಳ ಇತಿಹಾಸ ಮುಂದಿನ ಪೀಳಿಗೆಯವರಿಗೆ ಯಾವ ಕಾರಣಕ್ಕಾಗಿ ತಿಳಿದಿರಬೇಕು ಎಂಬುದರ ಬಗ್ಗೆ ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ನಾಗರಾಜ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಇಂತಹ ಐತಿಹಾಸಿಕ ಚಾರಿತ್ರ್ಯವುಳ್ಳ ಕರಾವಳಿ ಹೆಣ್ಣು ಮಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ರೂಪಿಸಿದ್ದನ್ನು ಶ್ಲಾಘಿಸಿದರು.ಜೆಸಿಐ ಬೈಂದೂರು ಸಿಟಿಯ ಪೂರ್ವ ಅಧ್ಯಕ್ಷೆ ಅನಿತಾ ಆರ್. ಕೆ., ಉದ್ಯಮಿಗಳಾದ ಗಣೇಶ ಗಾಣಿಗ ಉಪ್ಪುಂದ, ಗೋಪಾಲ್ ವಸ್ರೆ, ಯೋಗೇಂದ್ರ ಶೆಟ್ಟಿ, ರಾಜೇಂದ್ರ ಬಿಜೂರ್ ಉಪಸ್ಥಿತರಿದ್ದರು.

ಉಪನ್ಯಾಸಕ ನವೀನ್ ಎಚ್. ಜೆ. ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಇತರ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ
ಹಸೆಮಣೆ ಏರಬೇಕಿದ್ದ ಬಾಲ್ಯದ ಗೆಳತಿಯರು ಬೆಂಕಿಯಲ್ಲಿ ಭಸ್ಮ!