ಕುದುರೆಗುಂಡಿಯ ಗೆಳೆಯರ ಬಳಗದ ನೇತೃತ್ವದಲ್ಲಿ ರಕ್ತ ದಾನ ಶಿಬಿರ - 74 ಯೂನಿಟ್ ರಕ್ತ ಸಂಗ್ರಹ
ಒಬ್ಬರು ರಕ್ತ ದಾನ ಮಾಡಿದರೆ 3 ಜನರ ಜೀವ ಉಳಿಸಬಹುದು ಎಂದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಶಿಬಿರ ಆಯೋಜಕ ಎಸ್.ಎಚ್.ಹನುಮಂತಪ್ಪ ತಿಳಿಸಿದರು.
ಭಾನುವಾರ ಕುದುರೆಗುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕುದುರೆಗುಂಡಿ ಗೆಳಯರ ಬಳಗ ಹಾಗೂ ಶಿವಮೊಗ್ಗ ಮೆಗ್ಗಾನ್ ರಕ್ತ ನಿಧಿ ಕೇಂದ್ರ ಆಯೋಜನೆ ಮಾಡಿದ್ದ ರಕ್ತ ದಾನ ಶಿಬಿರದಲ್ಲಿ ರಕ್ತ ದಾನ ಮಾಡಿದವರಿಗೆ ಸರ್ಟಿಫಿಕೇಟ್ ವಿತರಿಸಿ ಮಾತನಾಡಿದರು.ಒಬ್ಬರಿಂದ 350 ಯೂನಿಟ್ ರಕ್ತ ಸಂಗ್ರಹ ಮಾಡುತ್ತೇವೆ. ಇದರಲ್ಲಿ ಕೆಂಪು ರಕ್ತ, ಬಿಳಿ ರಕ್ತ ಹಾಗೂ ಪ್ಲಾಸ್ಮಾ ಸೇರಿ 3 ವಿಭಾಗ ಮಾಡುತ್ತೇವೆ. ಇದರಿಂದ ಅಗತ್ಯವಿರುವ 3 ಜನರಿಗೆ ರಕ್ತ ನೀಡಬಹುದು. ಇದರಿಂದ ತುರ್ತು ಸಂದರ್ಭದಲ್ಲಿ 3 ಜನರ ಜೀವ ಉಳಿಯಲಿದೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ ಪ್ರತಿ ವರ್ಷ 10 ರಿಂದ 15 ಬಾರಿ ರಕ್ತ ದಾನ ಶಿಬಿರ ನಡೆಸುತ್ತೇವೆ. ಸಂಗ್ರಹವಾದ ರಕ್ತವನ್ನು ಕೊಪ್ಪ, ನರಸಿಂಹರಾಜಪುರ, ಶೃಂಗೇರಿ ಸೇರಿದಂತೆ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯವಿರುವ ಬಿಪಿಎಲ್ ಕಾರ್ಡು ಹೊಂದಿದ ಬಡ ರೋಗಿಗಳಿಗೆ, ಎಸ್.ಟಿ ಹಾಗೂ ಎಸ್ ಸಿ ಜನಾಂಗದವರಿಗೆ ರೋಗಿಗಳಿಗೆ ಉಚಿತವಾಗಿ ನೀಡುತ್ತೇವೆ.ಕುದುರೆಗುಂಡಿಯ ಗೆಳೆಯರ ಬಳಗದವರು ಸಹ ವರ್ಷಕ್ಕೆ 2 ರಿಂದ 3 ಬಾರಿ ರಕ್ತ ದಾನ ಶಿಬಿರ ಏರ್ಪಡಿಸಿ ರಕ್ತ ಸಂಗ್ರಹಿಸಿ ನಮಗೆ ನೀಡುತ್ತಾರೆ.
ರಕ್ತ ದಾನ ಶಿಬಿರದಲ್ಲಿ ಮೆಗ್ಗಾನ್ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ವೈದ್ಯರಾದ ಡಾ. ಮಂಜು, ಡಾ. ಶ್ರೀ ಲಕ್ಷ್ಮಿ, ಸ್ಪಾಪ್ ನರ್ಸ್ ಗಳಾದ ನಯನ, ಸುಷ್ಮಾ, ರಕ್ತ ಪರೀಕ್ಷೆಯ ಟೆಕ್ನಿಷನ್ ಸಾಂಡ್ರಾ , ಕುದುರೆಗುಂಡಿಯ ಗೆಳೆಯರ ಬಳಗದ ಸದಸ್ಯರು ಇದ್ದರು.