ಈರುಳ್ಳಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಒತ್ತಾಯ

KannadaprabhaNewsNetwork |  
Published : Oct 28, 2025, 12:33 AM IST
27ಎಚ್‌ಪಿಟಿ4- ಈರುಳ್ಳಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ರೈತರು ಬಳ್ಳಾರಿ, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರಿಗೆ ಮನವಿಪತ್ರ ಸಲ್ಲಿಸಿದರು. | Kannada Prabha

ಸಾರಾಂಶ

ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿದಿದ್ದು, ಈರುಳ್ಳಿ ಬೆಳೆದ ರೈತರು ವಿಷ ಕುಡಿಯುವ ಹಾಗಾಗಿದೆ.

ಹೊಸಪೇಟೆ: ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿದಿದ್ದು, ಈರುಳ್ಳಿ ಬೆಳೆದ ರೈತರು ವಿಷ ಕುಡಿಯುವ ಹಾಗಾಗಿದೆ. ಹಾಗಾಗಿ ಬೆಲೆ ವ್ಯತ್ಯಾಸ ಪಾವತಿ ಮೊತ್ತವನ್ನು ಶೀಘ್ರದಲ್ಲೇ ಜಾರಿಗೆ ತರಬೇಕು ಎಂದು ಈರುಳ್ಳಿ ಬೆಳೆಗಾರರರು ಬಳ್ಳಾರಿ, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರಿಗೆ ಮನವಿ ಸಲ್ಲಿಸಿದರು.

ಈರುಳ್ಳಿ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಈರುಳ್ಳಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈರುಳ್ಳಿ ಬೆಲೆ ವ್ಯತ್ಯಾಸ ಪಾವತಿ ಮೊತ್ತವನ್ನು ಶೀಘ್ರದಲ್ಲೇ ಜಾರಿಗೆ ತರಬೇಕು. ಈರುಳ್ಳಿಗೆ ಪಿಡಿಪಿಎಸ್ ಅಂದರೆ ಬೆಲೆ ವ್ಯತ್ಯಾಸ ಪಾವತಿ ಮೊತ್ತವನ್ನು ಜಾರಿಗೆ ತರಬೇಕು. ಇಲ್ಲವಾದಲ್ಲಿ ರೈತರಿಗೆ ವಿಷ ಕೊಡಿ ಎಂದು ಸಚಿವರಿಗೆ ಒತ್ತಾಯಿಸಿದರು.

ಇದಕ್ಕೆ ಸ್ಪಂದಿಸಿದ ಸಚಿವ ಜಮೀರ್‌ ಅಹಮದ್‌ ಖಾನ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಬಂಧಿಸಿದ ಸಚಿವರ ಜೊತೆಗೆ ಚರ್ಚಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಈರುಳ್ಳಿ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಎನ್‌.ಎಂ. ಸಿದ್ದೇಶ್ವರ ಉತ್ತಂಗಿ, ವಿಜಯನಗರ ಜಿಲ್ಲಾಧ್ಯಕ್ಷ ಮಂಜುನಾಥ ಕೋಚಾಲಿ, ಬಾಗಲಕೋಟೆ ಜಿಲ್ಲಾಧ್ಯಕ್ಷ ಲೋಕಣ್ಣ, ಹನುಮಂತಪ್ಪ, ನಾಗರಾಜ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''
ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ