ಈರುಳ್ಳಿ ದರ ಕುಸಿತ: ರೈತರಿಂದ ಪ್ರತಿಭಟನೆ

KannadaprabhaNewsNetwork |  
Published : Dec 19, 2025, 03:15 AM IST
-------18ಬಿಎಸ್ವಿ01ಬಸವನಬಾಗೇವಾಡಿಯ ಎಪಿಎಂಸಿಯಲ್ಲಿ ಈರುಳ್ಳಿಗೆ ಸರಿಯಾದ ದರ ನೀಡುತ್ತಿಲ್ಲ ಎಂದು ಆಗ್ರಹಿಸಿ ರೈತರು, ಮನಗೂಳಿ- ಬಿಜ್ಜಳ ರಾಜ್ಯ ಹೆದ್ದಾರಿ ಮೇಲೆ ಈರುಳ್ಳಿ ಸುರಿದು ಗುರುವಾರ ಪ್ರತಿಭಟನೆ ನಡೆಸಿದರು.----18ಬಿಎಸ್ವಿ02ಬಸವನಬಾಗೇವಾಡಿಯ ಎಪಿಎಂಸಿಯಲ್ಲಿ ಈರುಳ್ಳಿಗೆ ಸರಿಯಾದ ದರ ಸಿಗುತ್ತಿಲ್ಲ ಎಂದು ಆಗ್ರಹಿಸಿ ರೈತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಎಪಿಎಂಸಿ ಕಾರ್ಯದರ್ಶಿ ಅಲ್ಲಾಭಕ್ಷ ಬಿಜಾಪುರ ಭೇಟಿ ನೀಡಿ, ಪ್ರತಿಭಟನಾಕಾರರ ಮನವಿ ಆಲಿಸಿದರು. | Kannada Prabha

ಸಾರಾಂಶ

ಈರುಳ್ಳಿ ದರ ಕುಸಿತಕ್ಕೆ ಬೇಸತ್ತ ರೈತರು ಗುರುವಾರ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು. ಮಾರುಕಟ್ಟೆ ಮುಂಭಾಗದ ಮನಗೂಳಿ-ಬಿಜ್ಜಳ ರಾಜ್ಯ ಹೆದ್ದಾರಿ ಮೇಲೆ ಈರುಳ್ಳಿ ಸುರಿದು ರಸ್ತೆ ತಡೆ ಮಾಡಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಈರುಳ್ಳಿ ದರ ಕುಸಿತಕ್ಕೆ ಬೇಸತ್ತ ರೈತರು ಗುರುವಾರ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು. ಮಾರುಕಟ್ಟೆ ಮುಂಭಾಗದ ಮನಗೂಳಿ-ಬಿಜ್ಜಳ ರಾಜ್ಯ ಹೆದ್ದಾರಿ ಮೇಲೆ ಈರುಳ್ಳಿ ಸುರಿದು ರಸ್ತೆ ತಡೆ ಮಾಡಿದರು. ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ, ಪಿಐ ಗುರುಶಾಂತ ದಾಶ್ಯಾಳ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮವಹಿಸಿದರು.

ಸ್ಥಳಕ್ಕೆ ಗ್ರೇಡ್-2 ತಹಸೀಲ್ದಾರ್‌ ಎಸ್.ಎಚ್.ಅರಕೇರಿ, ಎಪಿಎಂಸಿ ಕಾರ್ಯದರ್ಶಿ ಅಲ್ಲಾಭಕ್ಷ ಬಿಜಾಪುರ ಭೇಟಿ ನೀಡಿ ಪ್ರತಿಭಟನಾಕಾರರ ಮನವಿ ಆಲಿಸಿದರು. ಬೆಂಗಳೂರಿನಲ್ಲಿ ₹2500, ₹3000 ಸಿಗುವ ಈರುಳ್ಳಿಗೆ ಬಸವನಬಾಗೇವಾಡಿ ಮಾರುಕಟ್ಟೆಯಲ್ಲಿ ಕೇವಲ ₹500 ಕೇಳುತ್ತಿದ್ದಾರೆ. ಇದರಿಂದ ಕೂಲಿಯೂ ಸಿಗುತ್ತಿಲ್ಲ. ವಿಜಯಪುರದಲ್ಲಿ ಹೆಚ್ಚಿನ ದರಕ್ಕೆ ಈರುಳ್ಳಿ ಮಾರಾಟವಾಗಿದೆ. ಇಲ್ಲೂ ಸೂಕ್ತ ದರ ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸಿದರು.

ಎಪಿಎಂಸಿ ಕಾರ್ಯದರ್ಶಿ ಅಲ್ಲಾಭಕ್ಷ ಬಿಜಾಪುರ ಮಾತನಾಡಿ, ಎಪಿಎಂಸಿಯು ರೈತರ ಬೆಳೆದ ಬೆಳೆಗೆ ಮಾರುಕಟ್ಟೆ ಸ್ಥಳ ಮಾತ್ರ ಒದಗಿಸುತ್ತದೆ. ಎಪಿಎಂಸಿ ದರ ನಿಗದಿ ಪಡಿಸುವುದಿಲ್ಲ. ಯಾವುದೇ ವ್ಯಾಪಾರಸ್ಥರಿಂದ ರೈತರಿಗೆ ತೊಂದರೆಯಾದರೆ ಅಂತಹವರ ಮೇಲೆ ಕ್ರಮ ತೆಗೆದುಕೊಳ್ಳಬಹುದು. ದರವು ಬೇಡಿಕೆ ಮತ್ತು ಪೂರೈಕೆ ಮೇಲೆ ಅವಲಂಬಿಸಿದೆ. ಇಂದು ಈರುಳ್ಳಿ ಎಲ್ಲೆಡೆ ಹೆಚ್ಚು ಪೂರೈಕೆಯಾಗಿದ್ದರಿಂದ ಬೆಲೆ ಕಡಿಮೆಯಾಗಿದೆ. ಇಲ್ಲಿಯ ಖರೀದಿದಾರರು ಸಹ ದರ ಇಳಿಸಿದ್ದಾರೆ ಅಷ್ಟೇ. ಉತ್ತಮ ಈರುಳ್ಳಿಗೆ ಉತ್ತಮ ಬೆಲೆ ನೀಡುವಂತೆ ಖರೀದಿದಾರರಿಗೆ ನಾವು ಹೇಳುತ್ತೇನೆ ಎಂದು ಭರವಸೆ ನೀಡಿದ ಮೇಲೆ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು.

ನಂತರ ನಡೆದ ಬಹಿರಂಗ ಸವಾಲಿನಲ್ಲಿ ₹2500 ರವರೆಗೂ ಈರುಳ್ಳಿ ಮಾರಾಟವಾಯಿತು. ಸುಮಾರು 28 ಲೋಡ್ ವಾಹನಗಳು ಬಂದಿದ್ದವು.

ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಜು ರಾಠೋಡ, ಅಧೀಕ್ಷಕ ಆರ್‌.ಬಿ.ಬಿರಾದಾರ, ಮಾರುಕಟ್ಟೆ ಹಿರಿಯ ಮೇಲ್ವಿಚಾರಕ ಸುರೇಶ ಮೋಹಿತೆ, ಮೇಲ್ವಿಚಾರಕ ನವೀನ ಪಾಟೀಲ, ಮುಖಂಡರಾದ ಶೇಖರ ಗೊಳಸಂಗಿ, ಸಂಗಮೇಶ ಓಲೇಕಾರ ಇತರರು ಇದ್ದರು. ಪ್ರತಿಭಟನೆಯಲ್ಲಿ ದೇವೇಂದ್ರ ಅಂಬಳನೂರ, ಪ್ರಕಾಶ ರಾಠೋಡ, ತುಕ್ಕಪ್ಪ ಗೋಡಕಾರ, ಪ್ರವೀಣ ಪವಾರ, ಪರಶು ಗುಡನಾಳ, ಲಕ್ಷ್ಮಣ ಲಕ್ಕುಂಡಿ, ಬಾಳಪ್ಪ ಬೇವೂರ, ಸಿದ್ದು ಜಾಧವ, ದುಂಡಪ್ಪ ಅಂಬಳನೂರ ಸೇರಿದಂತೆ ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು