ಶ್ರಮಪಟ್ಟರೆ ಮಾತ್ರ ಪ್ರತಿಫಲ ಸಿಗಬಲ್ಲದು: ಬಸವಂತಪ್ಪ

KannadaprabhaNewsNetwork |  
Published : Sep 15, 2025, 01:00 AM IST
ಕ್ಯಾಪ್ಷನ10ಕೆಡಿವಿಜಿ37, 38ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಉತ್ತರ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಚಾಲನೆ ನೀಡಿ ಮಾತನಾಡಿದರು. | Kannada Prabha

ಸಾರಾಂಶ

ಜೀವನದಲ್ಲಿ ಮನುಷ್ಯ ಶ್ರಮಪಡಬೇಕು. ಸೂಕ್ತ ರೀತಿಯಲ್ಲಿ ಶ್ರಮಪಟ್ಟರೆ ಮಾತ್ರ ಪ್ರತಿಫಲ ಸಿಗುತ್ತದೆ. ನಾನು ಶ್ರಮಪಟ್ಟಿದ್ದಕ್ಕೆ ಎಂಎಲ್‌ಎ ಆದೆ. ಶ್ರಮ ಪಡದೇ ಮನೆಯೊಳಗೆ ಕುಳಿತ್ತಿದ್ದರೆ ಎಂಎಲ್‌ಎ ಆಗುತ್ತಿರಲಿಲ್ಲ. ನೀವು ಸಹ ಕಠಿಣ ಶ್ರಮಪಟ್ಟರೆ ಮಾತ್ರ ಯಶಸ್ವಿ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.

- ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾಥಮಿಕ-ಪ್ರೌಢಶಾಲೆಗಳ ತಾಲೂಕುಮಟ್ಟದ ಕ್ರೀಡಾಕೂಟ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಜೀವನದಲ್ಲಿ ಮನುಷ್ಯ ಶ್ರಮಪಡಬೇಕು. ಸೂಕ್ತ ರೀತಿಯಲ್ಲಿ ಶ್ರಮಪಟ್ಟರೆ ಮಾತ್ರ ಪ್ರತಿಫಲ ಸಿಗುತ್ತದೆ. ನಾನು ಶ್ರಮಪಟ್ಟಿದ್ದಕ್ಕೆ ಎಂಎಲ್‌ಎ ಆದೆ. ಶ್ರಮ ಪಡದೇ ಮನೆಯೊಳಗೆ ಕುಳಿತ್ತಿದ್ದರೆ ಎಂಎಲ್‌ಎ ಆಗುತ್ತಿರಲಿಲ್ಲ. ನೀವು ಸಹ ಕಠಿಣ ಶ್ರಮಪಟ್ಟರೆ ಮಾತ್ರ ಯಶಸ್ವಿ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಉತ್ತರ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತಾಲೂಕುಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮನುಷ್ಯ ಸುಖದಲ್ಲಿಯೇ ಇರದೇ, ಕಷ್ಟಪಡಬೇಕು. ವಿದ್ಯಾರ್ಥಿಯಾಗಿದ್ದಾಗ ದೈಹಿಕ ಶಿಕ್ಷಕರು ಹೈಸ್ಕೂಲ್ ಮೈದಾನದಲ್ಲಿ ನಾಲ್ಕೈದು ತಾಸು ಕೂರಿಸುತ್ತಿದ್ದರು. ಬಿಸಿಲಿನಲ್ಲಿ ಸುಮ್ಮನೆ ಕುಳಿತುಕೊಳ್ಳುತ್ತಿದ್ದೆವು. ಆ ದಿನ ನಾವು ಶ್ರಮ ಹಾಕಿದ್ದರಿಂದ ಈಗಲೂ ಬಿಸಿಲಿಗೆ ಹೆದರುವುದಿಲ್ಲ. ನೀವು 5 ನಿಮಿಷ ಬಿಸಿಲಿಗೆ ಮೈಯೊಡ್ಡದಿದ್ದರೆ ಒಳ್ಳೆಯ ಕ್ರೀಡಾಪಟುಗಳಾಗಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಶ್ರಮಪಡಬೇಕು. ಬಿಸಿಲು ನಿಮ್ಮನ್ನು ನೋಡಿ ಹೆದರಬೇಕು. ಬಿಸಿಲು ನೋಡಿ ನೀವು ಹೆದರಿದರೆ, ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದಿಲ್ಲ ಎಂದು ಸಲಹೆ ನೀಡಿದರು.

ಜೀವನದಲ್ಲಿ ಎದ್ದು, ಬಿದ್ದು, ಎದ್ದು ಬರುವ ಮಕ್ಕಳು ಸಾಧನೆ ಮಾಡುತ್ತಾರೆ. ಸೂಕ್ಷ್ಮತೆಯಿಂದ ಇರುವವರಿಂದ ಸಾಧನೆ ಸಾಧ್ಯವಿಲ್ಲ. ಮಕ್ಕಳು ಎಷ್ಟು ಬಾರಿ ಬಿದ್ದರೂ ಅವರ ಮುಂದಿನ ಭವಿಷ್ಯದಲ್ಲಿ ಒಳ್ಳೆಯದೇ ಆಗುತ್ತದೆ. ಆ ರೀತಿಯಲ್ಲಿ ದೈಹಿಕ ಶಿಕ್ಷಕರು ಮಕ್ಕಳನ್ನು ತಯಾರು ಮಾಡಬೇಕು ಎಂದು ತಿಳಿಸಿದರು.

ಯಶಸ್ವಿ ಕ್ರೀಡಾಪಟುಗಳಿಗೆ ಉತ್ತಮ ಭವಿಷ್ಯವಿದೆ. ಸರ್ಕಾರ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸಲು ಕ್ರಮ ತೆಗೆದುಕೊಂಡಿದೆ. ನೀವು ಪ್ರಾಥಮಿಕ ಹಂತದಿಂದಲೇ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಿದರೆ ಮುಂದಿನ ದಿನಗಳಲ್ಲಿ ಉಜ್ವಲ ಭವಿಷ್ಯ ಅಡಗಿದೆ. ತೋಳಹುಣಿಸೆ ಗ್ರಾಮದ ಗ್ರಾಮೀಣ ಪ್ರತಿಭೆ ಕಬಡ್ಡಿ ಆಟಗಾರ್ತಿ ಶಶಿ ಬಹಳ ಕಷ್ಟಪಟ್ಟರು. ಇವತ್ತು ರೈಲ್ವೆಯಲ್ಲಿ ಉದ್ಯೋಗ ಪಡೆದು ಇಂದು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವಿಶಾಲಾಕ್ಷಿ, ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಕ್ರೀಡಾಧಿಕಾರಿಗಳು, ದೈಹಿಕ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಭಾಗವಹಿಸಿದ್ದರು.

- - -

(ಕೋಟ್‌) ವಿದ್ಯಾರ್ಥಿಗಳು ಬರೀ ಓದಿಗಷ್ಟೇ ಸೀಮಿತವಾಗದೇ, ಕ್ರೀಡೆಗಳಲ್ಲಿಯೂ ಭಾಗವಹಿಸಿ ಪ್ರತಿಭೆ ತೋರಬೇಕು. ಉತ್ತಮ ಆರೋಗ್ಯ ಕಾಪಾಡಿಕೊಂಡು ಹೋಗುವ ನಿಟ್ಟಿನಲ್ಲಿ ಶೈಕ್ಷಣಿಕ ಅವಧಿಗಳಲ್ಲಿ ಕ್ರೀಡೆಗೂ ಸಮಯ ನೀಡಲಾಗಿದೆ. ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಸಾಧ್ಯ. ನಿಯಮಿತ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹದ ತೂಕ ನಿರ್ವಹಣೆ, ಹೃದಯ ರಕ್ತನಾಳದ ಆರೋಗ್ಯ ಸುಧಾರಿಸುವುದು. ಮಧುಮೇಹ, ಅಧಿಕ ರಕ್ತದೊತ್ತಡದಂತಹ ದೀರ್ಘ ಕಾಲದ ಕಾಯಿಲೆಗಳ ಅಪಾಯ ಕಡಿಮೆ ಮಾಡಬಹುದು.

- ಕೆ.ಎಸ್.ಬಸವಂತಪ್ಪ, ಶಾಸಕ, ಮಾಯಕೊಂಡ ಕ್ಷೇತ್ರ.

- - -

-10ಕೆಡಿವಿಜಿ37, 38:

ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಉತ್ತರ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಚಾಲನೆ ನೀಡಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ