ಅಧಿಕ ಆಧಾಯದ ಹಿಂದೂ ದೇಗುಲಗಳು ಮಾತ್ರ ಧಾರ್ಮಿಕ ದತ್ತಿ ಇಲಾಖೆ ಸುಪರ್ದಿಗೆ ಚಿಂತನೆ ಸಲ್ಲ

KannadaprabhaNewsNetwork |  
Published : Jan 02, 2024, 02:15 AM IST
ಹಿಂದೂ ದೇವಾಲಯಗಳನ್ನು ಧಾರ್ಮಿಕ ದತ್ತಿ ಇಲಾಖೆಗೆ ವಶಪಡಿಸಿಕೊಳ್ಳಲು ಚಿಂತನೆ ನಡೆಸುತ್ತಿರುವ ಸರ್ಕಾರ ಕೂಡಲೇ ಕೈಬಿಡುವಂತೆ ಒತ್ತಾಯಿಸಿ ತಹಸೀಲ್ದಾರ್ ಮೂಲಕ ತಾ.ವೀರಶೈವ ಜಂಗಮ ಪುರೋಹಿತ ಅರ್ಚಕ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಜನರ ದೇವರ ಮೇಲಿನ ನಂಬಿಕೆಯಿಂದ ನೀಡುವ ಕಾಣಿಕೆ, ಹರಕೆ ವಸ್ತುಗಳು ಅದೇ ದೇಗುಲ, ಕ್ಷೇತ್ರ ಅಭಿವೃದ್ಧಿಗೆ ಬಳಸಿದರೆ ಉತ್ತಮ. ಆದರೆ, ಸರ್ಕಾರ ದೇಗುಲಗಳ ಕೋಟ್ಯಂತರ ರು. ಆದಾಯ ಅನ್ಯ ಸಮುದಾಯದ ಅಭಿವೃದ್ಧಿಗೆ ಬೇಕಾಬಿಟ್ಟಿ ಬಳಸೋದಕ್ಕೆ ಶಿಕಾರಿಪುರ ವೀರಶೈವ ಜಂಗಮ ಪುರೋಹಿತರು ಅಸಮಾಧಾನ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದಾರೆ.

ಶಿಕಾರಿಪುರ: ಹೆಚ್ಚಿನ ಆದಾಯದ ಹಿಂದೂ ದೇವಾಲಯಗಳನ್ನು ಮಾತ್ರ ಧಾರ್ಮಿಕ ದತ್ತಿ ಇಲಾಖೆ ಸುಪರ್ದಿಗೆ ಪಡೆದುಕೊಳ್ಳುವ ಸರ್ಕಾರದ ಚಿಂತನೆ ಬಗ್ಗೆ ಶಿಕಾರಿಪುರದ ವೀರಶೈವ ಜಂಗಮ ಪುರೋಹಿತ ಅರ್ಚಕರ ಸಂಘ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರ ಚಿಂತನೆ ವಾಪಸ್ ಪಡೆಯುವಂತೆ ಆಗ್ರಹಿಸಿ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘದ ಅಧ್ಯಕ್ಷ ಪ್ರಭುಸ್ವಾಮಿ ಮಾತನಾಡಿ, ರಾಜ್ಯಾದ್ಯಂತ ಪ್ರಸಿದ್ಧ ಹಿಂದೂ ದೇವಾಲಯಗಳು ಈಗಾಗಲೇ ಧಾರ್ಮಿಕ ದತ್ತಿ ಇಲಾಖೆಯ ಸುಪರ್ದಿಯಲ್ಲಿವೆ. ದೇವಾಲಯದ ವಾರ್ಷಿಕ ಕೋಟ್ಯಂತರ ಆದಾಯವನ್ನು ಇತರೇ ಸಮುದಾಯದ ಅಭಿವೃದ್ಧಿಗೆ ಬೇಕಾಬಿಟ್ಟಿ ವಿನಿಯೋಗಿಸಲಾಗುತ್ತಿದೆ. ಇದೀಗ ಪುನಃ ಹೆಚ್ಚಿನ ಆದಾಯ ಹೊಂದಿದ 150ಕ್ಕೂ ಅಧಿಕ ದೇವಾಲಯಗಳನ್ನು ಇಲಾಖೆಯ ಸುಪರ್ದಿಗೆ ಪಡೆಯುವ ಚಿಂತನೆ ನಡೆಸಿದೆ. ಸರ್ಕಾರದ ಈ ಧೋರಣೆ ಸಂಪೂರ್ಣ ಹಿಂದೂ ವಿರೋಧಿಯಾಗಿದ್ದು, ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ದೇವಾಲಯದಲ್ಲಿ ಸಂಗ್ರಹವಾಗುವ ಎಲ್ಲ ಕಾಣಿಕೆ ಹಣ, ದೇಣಿಗೆ ಹಣ, ಹರಕೆ ಹಣವನ್ನು ದೇವಾಲಯದ ಅಭಿವೃದ್ಧಿಗೆ ವಿನಿಯೋಗಿಸುವ ಕಾಯ್ದೆ ಜಾರಿಗೊಳಿಸಬೇಕು. ಮುಜರಾಯಿ ಆಡಳಿತ ದೇವಾಲಯದಲ್ಲಿನ ರಥೋತ್ಸವ ಮತ್ತಿತರ ಧಾರ್ಮಿಕ ಕಾರ್ಯಕ್ಕೆ ಹೆಚ್ಚಿನ ಅನುದಾನ ನೀಡದೇ ಕಡೆಗಣಿಸಿದ ಪರಿಣಾಮ ದೇವಾಲಯದಲ್ಲಿನ ಧಾರ್ಮಿಕ ಕಾರ್ಯಗಳಿಗೆ ಹಿನ್ನಡೆ ಆಗುತ್ತಿದೆ. ಈ ಕೂಡಲೇ ಎಲ್ಲ ದೇವಾಲಯಗಳಿಗೆ ಸ್ಥಳೀಯ ಭಕ್ತರ ನೇತ್ತೃತ್ವದಲ್ಲಿ ಸಮಿತಿ ರಚಿಸಿ ಎಲ್ಲ ಅಧಿಕಾರ ನೀಡಬೇಕು ಎಂದು ಆಗ್ರಹಿಸಿದರು.

ಅನಂತರದಲ್ಲಿ ಹಿಂದೂ ದೇವಾಲಯಗಳನ್ನು ಮುಜರಾಯಿ ಇಲಾಖೆಗೆ ಒಳಪಡಿಸುವ ಚಿಂತನೆ ಕೈಬಿಡುವಂತೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸಂಘದ ಮುಖಂಡ ಶಿವಯ್ಯ ಶಾಸ್ತ್ರಿ, ಮಹಾಂತಯ್ಯ ಗಾಮ, ಪುಟ್ಟಯ್ಯ, ಯೋಗೀಶ್ವರಯ್ಯ, ಶಿವಕುಮಾರ ಕವಲಿ, ಪ್ರದೀಪ್, ಮೃತ್ಯುಂಜಯ, ಈರಯ್ಯ, ಚನ್ನವೀರಯ್ಯ ಮತ್ತಿತರರು ಹಾಜರಿದ್ದರು.

- - - (** ಈ ಪೋಟೋ-ಕ್ಯಾಪ್ಷನ್‌ ಪ್ಯಾನೆಲ್‌ಗೆ ಬಳಸಬಹುದು) -31ಕೆಎಸ್.ಕೆಪಿ2:

ಹಿಂದೂ ದೇವಾಲಯಗಳನ್ನು ಧಾರ್ಮಿಕ ದತ್ತಿ ಇಲಾಖೆಗೆ ವಶಪಡಿಸಿಕೊಳ್ಳುವ ಚಿಂತನೆ ಸರ್ಕಾರ ಕೂಡಲೇ ಕೈಬಿಡುವಂತೆ ಒತ್ತಾಯಿಸಿ ತಹಸೀಲ್ದಾರ್ ಮೂಲಕ ಶಿಕಾರಿಪುರ ತಾಲೂಕು ವೀರಶೈವ ಜಂಗಮ ಪುರೋಹಿತ ಅರ್ಚಕ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಅಧ್ಯಕ್ಷ ಪ್ರಭುಸ್ವಾಮಿ, ಶಿವಯ್ಯ ಶಾಸ್ತ್ರಿ, ಮಹಾಂತಯ್ಯ ಗಾಮ, ಪುಟ್ಟಯ್ಯ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾ.1ರಿಂದ ಸೇವೆ ಬಂದ್‌ ಸರ್ಕಾರಿ ವೈದ್ಯರಿಂದ ಎಚ್ಚರಿಕೆ
ಚರಿತ್ರೆ ತಿಳಿದಿದ್ದರಷ್ಟೇ ಚರಿತ್ರೆ ಸೃಷ್ಟಿಸಲು ಸಾಧ್ಯ: ಸಿಎಂ