
ಕನ್ನಡಪ್ರಭ ವಾರ್ತೆ ವಿಜಯಪುರ
ತಾಜಬಾವಡಿ ಆವರಣದಲ್ಲಿ ಪ್ರಸ್ತುತ ಟಾಟಾ ಕನಲ್ಟನ್ಸಿ ಸರ್ವಿಸಿಸ್ ನವರ ಸಿಎಸ್ಆರ್ ಅನುದಾನದಲ್ಲಿ ನಿರ್ಮಿಸುತ್ತಿರುವ ಪುಷ್ಕರಣೆ/ಆಂಪಿ ಥಿಯೇಟರ್ ಕಾಮಗಾರಿ ಪ್ರಕಾರ ದೊಡ್ಡ ಗಾತ್ರದ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಅವಕಾಶವಿಲ್ಲದಿರುವುದರಿಂದ ಪಾಲಿಕೆಯಿಂದ ಸಾರ್ವಜನಿಕ ಗಣಪತಿ ವಿಸರ್ಜನೆಗಾಗಿ ನಗರದ ವಾಪ್ತಿಯಲ್ಲಿ ಕೆ.ಎಸ್.ಆರ್.ಟಿ.ಸಿ ಸ್ಯಾಟ್ಲೈಟ್ ಬಸ್ ಸ್ಟ್ಯಾಂಡ್ ಹತ್ತಿರ ಮತ್ತು ಜೈಲ್ ದರ್ಗಾ ಹತ್ತಿರದ ಜಾಗೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಸಾರ್ವಜನಿಕ ಗಣೇಶ ವಿಸರ್ಜನಾ ಹೊಂಡಗಳನ್ನು ನಿರ್ಮಿಸಲಾಗುತ್ತಿದೆ.
ತಾಜಬಾವಡಿ ಆವರಣದಲ್ಲಿ ಕಾಯಂ ಪುಷ್ಕರಣಿಯಲ್ಲಿ ಕೇವಲ ಮನೆಗಳಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಮಾತ್ರ (ಸುಮಾರು ಎರಡು ಅಡಿಗಳವರೆಗೆ) ವಿಸರ್ಜಿಸಲು ಹಾಗೂ ಕೆ.ಎಸ್.ಆರ್.ಟಿ.ಸಿ ಸ್ಯಾಟ್ಲೈಟ್ ಬಸ್ ಸ್ಟ್ಯಾಂಡ್ ಹತ್ತಿರ ಮತ್ತು ಜೈಲ್ ದರ್ಗಾ ಹತ್ತಿರದ ಜಾಗೆಯಲ್ಲಿ ನಿರ್ಮಿಸಲಾಗುತ್ತಿರುವ ಕೃತಕ ಗಣೇಶ ಮೂರ್ತಿ ವಿಸರ್ಜನಾ ಹೊಂಡಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ನಗರದ ಎಲ್ಲ ಗಣೇಶ ಮಂಡಳಿಗಳ ಪದಾಧಿಕಾರಿಗಳಿಗೆ ಹಾಗೂ ನಗರದ ಸಾರ್ವಜನಿಕರಿಗೆ ಸಹಕರಿಸುವಂತೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಕೋರಿದ್ದಾರೆ.