ಕನ್ನಡಪ್ರಭ ವಾರ್ತೆ ಮೈಸೂರು
ಜೆ.ಪಿ. ನಗರದ ಜೆಎಸ್ಎಸ್ ಪದವಿ ಪೂರ್ವ ಕಾಲೇಜಿನ ಶನಿವಾರ ನಡೆದ ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾಭ್ಯಾಸದ ಜೊತೆ ಜೊತೆಯಲ್ಲಿ ಕಲೆ, ಸಾಹಿತ್ಯ, ಸಂಗೀತ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಂಡು ಉಜ್ವಲ ಭವಿಷ್ಯವನ್ನು ಪಡೆಯಿರಿ ಎಂದು ಕಿವಿಮಾತು ಹೇಳಿದರು.
ವಿದ್ಯಾರ್ಥಿ ಜೀವನದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಆತನ ಭವ್ಯ ಜೀವನಕ್ಕೆ ಭದ್ರ ಬುನಾದಿಯನ್ನು ಹಾಕಿಕೊಡುತ್ತವೆ. ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಚೆಲ್ಲಿದಾಗ ಆತನು ಸರ್ವಾಂಗೀಣವಾಗಿ ಬೆಳವಣಿಗೆ ಹೊಂದಲು ಸಾಧ್ಯ ಎಂದು ಅವರು ತಿಳಿಸಿದರು.ಮೊಬೈಲ್ಗಳಿಗೆ ದಾಸರಾಗದೆ ಓದಿನತ್ತ ಗಮನ ಹರಿಸಿ. ಓದಿನ ಜೊತೆಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸರ್ವತೋಮುಖ ಬೆಳವಣಿಗೆ ಹೊಂದಬೇಕು. ವಿದ್ಯಾರ್ಥಿಗಳು ಪ್ರಕೃತಿ ನೀಡಿರುವ ಜೀವಕ್ಕೆ ಉತ್ತಮ ಸಂಸ್ಕೃತಿಯನ್ನು ನೀಡಿ, ಅದರಿಂದ ಉತ್ತಮ ಫಲವನ್ನು ಪಡೆದು, ಜ್ಞಾನದ ಬೆಳಕಿನಲ್ಲಿ ಸುಸಂಸ್ಕೃತರಾಗಿ ಮುನ್ನಡೆಯಬೇಕು ಎಂದು ಅವರು ಕರೆ ನೀಡಿದರು.
ವಿದ್ಯಾರ್ಥಿ ಜೀವನದಲ್ಲಿ ಗುರುಗಳನ್ನು ಗೌರವಿಸಬೇಕು. ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವ ಮೂಲಕ ತಾವು ಓದಿದ ಕಾಲೇಜಿಗೂ, ಕಲಿಸಿಕೊಟ್ಟ ಗುರುಗಳಿಗೂ ಕೀರ್ತಿ ತರಬೇಕು. ಉತ್ತಮ ಸಂಸ್ಕಾರಗಳನ್ನು ಅಳವಡಿಸಿಕೊಂಡು ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಹೊರಚೆಲ್ಲಿ ಜೀವನದಲ್ಲಿ ಯಶಸ್ಸನ್ನು ಪಡೆಯಿರಿ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಎಚ್.ಎನ್. ನಿರಂಜನ, ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಎಸ್. ಶ್ರುತಿ, ಕ್ರೀಡಾ ವೇದಿಕೆ ಸಂಚಾಲಕ ಎಚ್.ಎನ್. ನಾಗರಾಜ, ಉಪನ್ಯಾಸಕಿ ಎಸ್. ಅಮೂಲ್ಯ ಇದ್ದರು. ಎಸ್.ಎಂ. ಚಂದ್ರಶೇಖರ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸೋಮೇಶ ವಂದಿಸಿದರು. ಎನ್. ಶಕುಂತಳಾ ನಿರೂಪಿಸಿದರು.