ಅಮೇರಿಕದಲ್ಲಿ ಮಾತ್ರ ಮಾಧ್ಯಮಕ್ಕೆ ಸಂವಿಧಾನದ ರಕ್ಷಣೆ ಇದೆ

KannadaprabhaNewsNetwork |  
Published : Jan 19, 2025, 02:16 AM IST
ತುಮಕೂರಿನಲ್ಲಿ ನಡೆಯುತ್ತಿರುವ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಜಿ.ಎನ್. ಮೋಹನ್ ವಿಚಾರ ಮಂಡಿಸಿದರು. | Kannada Prabha

ಸಾರಾಂಶ

ಸಂವಿಧಾನದ ಬೇರುಗಳಿಗೆ ಕೊಡಲಿ ಪೆಟ್ಟುಕೊಡುತ್ತಿರುವಂತಹ ಸನ್ನಿವೇಶಗಳು, ಘಟನೆಗಳು ವರದಿಯಾಗುತ್ತಿರುವ ಇಂತಹ ಸಂದರ್ಭದಲ್ಲಿ ಪತ್ರಕರ್ತರು ಐಪಿಲ್ ಭಾರತ ಬಿಟ್ಟು ಬಿಪಿಎಲ್ ಭಾರತದ ಕಡೆ ಗಮನ ಹರಿಸಬೇಕಾಗಿದೆ, ಪಿ.ಸಾಯಿನಾಥ್‌ ಪ್ರತಿ ಬಾರಿ ಪತ್ರಕರ್ತರಿಗೆ ಹೇಳುವ ಕಿವಿಮಾತಿದು ಎನ್ನುವ ಉಲ್ಲೇಖದೊಂದಿಗೆ ಹಿರಿಯ ಪತ್ರಕರ್ತ ಜಿ.ಎನ್ ಮೋಹನ್‌ ವಿಚಾರ ಮಂಡಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುಸಂವಿಧಾನದ ಬೇರುಗಳಿಗೆ ಕೊಡಲಿ ಪೆಟ್ಟುಕೊಡುತ್ತಿರುವಂತಹ ಸನ್ನಿವೇಶಗಳು, ಘಟನೆಗಳು ವರದಿಯಾಗುತ್ತಿರುವ ಇಂತಹ ಸಂದರ್ಭದಲ್ಲಿ ಪತ್ರಕರ್ತರು ಐಪಿಲ್ ಭಾರತ ಬಿಟ್ಟು ಬಿಪಿಎಲ್ ಭಾರತದ ಕಡೆ ಗಮನ ಹರಿಸಬೇಕಾಗಿದೆ, ಪಿ.ಸಾಯಿನಾಥ್‌ ಪ್ರತಿ ಬಾರಿ ಪತ್ರಕರ್ತರಿಗೆ ಹೇಳುವ ಕಿವಿಮಾತಿದು ಎನ್ನುವ ಉಲ್ಲೇಖದೊಂದಿಗೆ ಹಿರಿಯ ಪತ್ರಕರ್ತ ಜಿ.ಎನ್ ಮೋಹನ್‌ ವಿಚಾರ ಮಂಡಿಸಿದರು. 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ವಿಚಾರಗೋಷ್ಟಿಯಲ್ಲಿ ಸಂವಿಧಾನ ಮತ್ತು ಮಾಧ್ಯಮ ಕುರಿತು ವಿಷಯ ಮಂಡಿಸಿದ ಅವರು ಇಂದು ಮಾಧ್ಯಮ ಕೇವಲ ಮಾಧ್ಯಮವಾಗಿ ಉಳಿದಿಲ್ಲ, ಸಂವಿಧಾನ ಜನಸಾಮಾನ್ಯರಿಗೆ ನೀಡಿರುವ ಹಕ್ಕು ಮತ್ತು ಕರ್ತವ್ಯಗಳಂತೆಯೇ ಪತ್ರಕರ್ತರಿಗೂ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ ಎಂದರು.ಸಂವಿಧಾನ ಹೇಗೆ ಮಾಧ್ಯಮವನ್ನು ರಕ್ಷಿಸುತ್ತದೆಯೋ ಹಾಗೆಯೇ ಮಾಧ್ಯಮವೂ ಸಂವಿಧಾನವನ್ನು ರಕ್ಷಿಸಬೇಕು ಎಂದರು. ಇಡೀ ಜಗತ್ತಿನಲ್ಲಿ ಅಮೇರಿಕದಲ್ಲಿ ಮಾತ್ರ ಮಾಧ್ಯಮಕ್ಕೆ ಸಂವಿಧಾನದ ರಕ್ಷಣೆ ಇದೆ. ಬೇರೆ ರಾಷ್ಟ್ರಗಳಲ್ಲಿ ಇಲ್ಲ. ಜನರ ಪ್ರತಿನಿಧಿಯಾಗಿ ಕೆಲಸ ಮಾಡುವ ಮಾಧ್ಯಮಕ್ಕೆ ಸಾಮಾನ್ಯರಿಗೆ ಇರುವಂತೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಮತ್ತು ಶಾಸಕ ಬಿ.ಆರ್ . ಪಾಟೀಲ್‌ ಮಾತನಾಡಿ ಪತ್ರಿಕೆಗಳು ಚಳವಳಿಗಳಿಗೆ ಬೆಂಬಲವಾಗಿ ನಿಲ್ಲುತ್ತಿದ್ದವು. 80ರ ದಶಕದಲ್ಲಿ ರೈತ ಚಳವಳಿ, ದಲಿತ ಚಳವಳಿ ಸೇರಿದಂತೆ ಇತರೇ ಚಳವಳಿಗಳು ಬಹಳ ದೊಡ್ಡದಾಗಿ ಬೆಳೆಯಲು ಅನುಕೂಲಕರವಾಗಿತ್ತು. ಆದರೆ ಇಂದು ಪತ್ರಿಕೆಗಳು ಉದ್ಯಮವಾಗಿ ಬದಲಾದ ನಂತರ ಚಳವಳಿಗಳಿಗೆ ಮಾಧ್ಯಮಗಳಲ್ಲಿ ಅಂತಹ ಮಹತ್ವ ಸಿಗುತ್ತಿಲ್ಲ. ಇಂದು ಇಂತಹ ಚಳವಳಿಗಳು ಹೆಸರಿಲ್ಲದೆ ಹೋಗಿವೆ ಎಂದು ತಿಳಿಸಿದರು. ಎನ್‌ ರವಿಕುಮಾರ್‌, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಎ.ಎಸ್. ಪೊನ್ನಣ್ಣ ಮಾತನಾಡಿದರು. ಸಾ.ಚಿ ರಾಜ್‌ಕುಮಾರ್‌ ಸ್ವಾಗತಿಸಿ, ಶ್ಯಾ.ನ. ಪ್ರಸನ್ನ ಮೂರ್ತಿ ವಂದಿಸಿದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌