ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯ
ದೇವಳದ ರಥಬೀದಿ ಮತ್ತು ಅಡ್ಡಬೀದಿಯಲ್ಲಿ ನಡೆಯುವ ಕುಣಿತ ಭಜನೆಯಲ್ಲಿ ಭಾಗವಹಿಸಲು ಸಾರ್ವಜನಿಕ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಭಾಗವಹಿಸುವ ಕುಣಿತ ಭಜನಾ ತಂಡಗಳು ಡಿ. 9ರಂದು ಅಪರಾಹ್ನ 2ಗಂಟೆಯ ಒಳಗೆ ಶ್ರೀ ದೇವಳದ ಕಚೇರಿಯಲ್ಲಿ ಹೆಸರು ನೋಂದಾಯಿಸಬಹುದು ಅಥವಾ ಭಜನಾ ತಂಡಗಳು ಆನ್ಲೈನ್ ರಿಜಿಸ್ಟ್ರೇಷನ್ ಮೂಲಕ ಗೂಗಲ್ ಲೆನ್ಸ್ ಅಪ್ಲಿಕೇಶನ್ ಮೂಲಕ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482646275, 9632955406, 7676935342, 9448792977 ಕರೆ ಮಾಡಿ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.
ನಿಯಮಗಳು:ತಂಡದಲ್ಲಿ ಗರಿಷ್ಠ 10 ಮಂದಿ ಮಾತ್ರ ಇರತಕ್ಕದ್ದು. 10 ಕ್ಕಿಂತ ಅಧಿಕ ಮಂದಿ ಇದ್ದಲ್ಲಿ 1ಕ್ಕಿಂತ ಹೆಚ್ಚು ತಂಡ ರಚಿಸಬಹುದಾಗಿದೆ. ಭಾಗವಹಿಸುವ ಭಜನಾ ತಂಡಗಳು ಭಾರತೀಯ ಉಡುಗೆಗಳನ್ನು ಧರಿಸಿರಬೇಕು. ಭಜನಾ ತಂಡಗಳು ತಮ್ಮ ಸ್ವಂತ ವೆಚ್ಚದಲ್ಲಿ ಭಾಗವಹಿಸಬೇಕು. ಡಿ. 9ರಂದು ಅಪರಾಹ್ನ ಗಂಟೆ 2 ರ ಒಳಗಾಗಿ ತಂಡಗಳು ದೇವಳದ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಅಥವಾ ಇಲ್ಲಿ ನೀಡಿರುವ ಕ್ಯೂಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಿ ಲಿಂಕ್ ಮೂಲಕ ಆನ್ ಲೈನ್ ರಿಜಿಸ್ಟ್ರೇಶನ್ ಮಾಡಿಕೊಳ್ಳಬಹುದು. ಆನ್ಲೈನ್ ಮೂಲಕ ಮಾಡಿದಲ್ಲಿ ಕೊನೆಯಲ್ಲಿ ಸಬ್ಮೀಟ್ ನಂತರ ಬರುವ ರಿಜಿಸ್ಟ್ರೇಷನ್ ನಂಬರ್ ಬರೆದಿಟ್ಟುಕೊಳ್ಳಬೇಕು. ಒಂದು ಈ ಮೇಲ್ ಐ.ಡಿ ಯಿಂದ ಒಂದು ತಂಡದ ರಿಜಿಸ್ಟ್ರೇಷನ್ ಮಾತ್ರ ಮಾಡಬಹುದಾಗಿದೆ.