ಕನ್ನಡಪ್ರಭ ವಾರ್ತೆ ಬೆಂಗಳೂರು
ಮೊದಲ ಹಂತದಲ್ಲಿ ಬುಧವಾರ ಬೆಂಗಳೂರಿನ ಎರಡು ಕಡೆ ''''''''ಆಪರೇಷನ್ ಅಭ್ಯಾಸ್''''''''(ಮಾಕ್ ಡ್ರಿಲ್) ಅಣುಕು ಪ್ರದರ್ಶನ ನಡೆಯಲಿದ್ದು, ಎರಡನೇ ಹಂತದಲ್ಲಿ ಮೈಸೂರು, ಮಂಡ್ಯ, ರಾಯಚೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಡೆಯಲಿದೆ.
ಕಾಶ್ಮೀರದ ಪಹಲ್ಗಾಂ ಭಯೋತ್ಪಾದನಾ ದಾಳಿ ನಂತರ ಪಾಕಿಸ್ತಾನದ ಜತೆಗೆ ಸಮರದ ಪರಿಸ್ಥಿತಿ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಗರಿಕರ ರಕ್ಷಣಾ ತಾಲೀಮು ನಡೆಸುವಂತೆ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿತ್ತು. ಅಂತೆಯೇ ರಾಜ್ಯದಲ್ಲಿ ಮಾಲ್ ಡ್ರಿಲ್ಗೆ ಸಿದ್ಧತೆ ನಡೆದಿದೆ.ಬೆಂಗಳೂರಿನ ಹಲಸೂರು ಕೆರೆ ಸಮೀಪದ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಕೇಂದ್ರ ಕಚೇರಿಯ ಮೈದಾನ ಹಾಗೂ ಡೈರಿ ವೃತ್ತದ ಅಗ್ನಿಶಾಮಕ ದಳದ ತರಬೇತಿ ಕೇಂದ್ರದ ಮೈದಾನದಲ್ಲಿ ಅಣುಕು ಪ್ರದರ್ಶನ ನಡೆಯಲಿದೆ.
ನಾಗರಿಕ ರಕ್ಷಣಾ ತಾಲೀಮು ಸಂಬಂಧ ಗೃಹ ಇಲಾಖೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿತು. ದೇಶದ ವ್ಯಾಪ್ತಿಯ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದ್ದು, ಈ ಪ್ರದರ್ಶನ ಮೂರು ಹಂತದಲ್ಲಿ ನಡೆಯಲಿದೆ. ಅಂತೆಯೇ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉತ್ತರ ಕನ್ನಡಜಿಲ್ಲೆಯ ಮಲ್ಲಪುರ, ರಾಯಚೂರು ಜಿಲ್ಲೆಯ ಶಾಂತಿನಗರ ಹಾಗೂ ಬೆಂಗಳೂರು ಅಣುಕು ಪ್ರದರ್ಶನಕ್ಕೆ ಆಯ್ಕೆಯಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರು ತಿಳಿಸಿದ್ದಾರೆ.
ಬಾಕ್ಸ್...
1.ವಾಯು ದಾಳಿ ಎಚ್ಚರಿಕೆಯ ಸೈರನ್
3.ತುರ್ತು ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ
5.ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ
ಬಾಕ್ಸ್...
ಸೈರನ್ಗಳ ಪರಿಶೀಲನೆಪ್ರಾಕೃತಿಕ ವಿಕೋಪ ಹಾಗೂ ಅಪರಾಧ ಘಟನೆಗಳು ಸೇರಿ ತುರ್ತು ಸಂದರ್ಧದಲ್ಲಿ ಜನರಿಗೆ ಎಚ್ಚರಿಕೆ ನೀಡಲು ಪೊಲೀಸ್ ಹಾಗೂ ಅಗ್ನಿಶಾಮಕ ಠಾಣೆಗಳಲ್ಲಿ ಅಳವಡಿಸಿರುವ ಸೈರನ್ಗಳನ್ನು ಅಧಿಕಾರಿಗಳು ಪರಿಶೀಲಿಸಿದರು. ಅಲ್ಲದೆ, ನಗರದಲ್ಲಿರುವ ರಕ್ಷಣಾ ಸಂಶೋಧನಾ ಕಚೇರಿ (ಡಿಆರ್ಡಿಓ) ಸೇರಿ ಪ್ರಮುಖ ಕಚೇರಿಗಳ ಕಟ್ಟಡಗಳಲ್ಲಿರುವ ಸೈರನ್ಗಳ ಕಾರ್ಯನಿರ್ವಹಣೆ ಕುರಿತು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ.