ಕಾರ್ಯಾಚರಣೆ; ಭಿಕ್ಷಾಟನೆಯಲ್ಲಿತೊಡಗಿದ್ದ 72 ಮಕ್ಕಳ ರಕ್ಷಣೆ

KannadaprabhaNewsNetwork |  
Published : Feb 15, 2026, 03:00 AM IST
CCB 1 | Kannada Prabha

ಸಾರಾಂಶ

ರಾಜಧಾನಿಯಲ್ಲಿ ಪ್ರೇಮಿಗಳ ದಿನಾಚರಣೆ ನಿಮಿತ್ತ ಭಿಕ್ಷಾಟನೆಯಲ್ಲಿ ತೊಡಗಿದ್ದ 72 ಮಕ್ಕಳನ್ನು ಸಿಸಿಬಿ ಪೊಲೀಸರು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಎನ್‌ಜಿಓ ಸಂಸ್ಥೆಗಳು ಜಂಟಿಯಾಗಿ ವಿಶೇಷ ಕಾರ್ಯಾಚರಣೆ ನಡೆಸಿ ಶನಿವಾರ ರಕ್ಷಣೆ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜಧಾನಿಯಲ್ಲಿ ಪ್ರೇಮಿಗಳ ದಿನಾಚರಣೆ ನಿಮಿತ್ತ ಭಿಕ್ಷಾಟನೆಯಲ್ಲಿ ತೊಡಗಿದ್ದ 72 ಮಕ್ಕಳನ್ನು ಸಿಸಿಬಿ ಪೊಲೀಸರು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಎನ್‌ಜಿಓ ಸಂಸ್ಥೆಗಳು ಜಂಟಿಯಾಗಿ ವಿಶೇಷ ಕಾರ್ಯಾಚರಣೆ ನಡೆಸಿ ಶನಿವಾರ ರಕ್ಷಣೆ ಮಾಡಿದ್ದಾರೆ.

ಈ ದಾಳಿ ವೇಳೆ 44 ಗಂಡು ಮಕ್ಕಳು ಹಾಗೂ 28 ಹೆಣ್ಣು ಮಕ್ಕಳು ಪತ್ತೆಯಾಗಿದ್ದು, ಇವರನ್ನು ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ. ಈ ಮಕ್ಕಳ ಪೋಷಕರನ್ನು ಪತ್ತೆ ಹಚ್ಚುವ ಕಾರ್ಯಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರದ ಕೆಲ ಪ್ರಮುಖ ಜಂಕ್ಷನ್‌ಗಳು ಹಾಗೂ ರಸ್ತೆಗಳು ಸೇರಿ ಜನಸಂದಣಿ ಪ್ರದೇಶಗಳಲ್ಲಿ ಅಪ್ರಾಪ್ತ ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆ ನಡೆಸುತ್ತಿರುವ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಪ್ರೇಮಿಗಳ ದಿನಾಚರಣೆ ಅಂಗವಾಗಿ ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ರಕ್ಷಣೆಗೆ ವಿಶೇಷ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಯಿತು. ಅಂತೆಯೇ ಸಮಾಜ ಕಲ್ಯಾಣ ಇಲಾಖೆ, ಎನ್‌ಜಿಓಗಳ ಜತೆ ಜಂಟಿ ಕಾರ್ಯಾಚರಣೆ ನಡೆಸಿ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಲ್ಲ ಕಲಾವಿದರಿಗೂ ಗೌರವಧನ ಕೊಡಿ: ಶಿವರಾಜ್‌ಕುಮಾರ್‌
ರಾಷ್ಟ್ರೀಯ ಹೆದ್ದಾರಿ, ಚರಂಡಿ ಕಾಮಗಾರಿ ಅವೈಜ್ಞಾನಿಕ