ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿಲುವಿನಿಂದ ಪಾಕಿಸ್ತಾನದ ಮೇಲೆ ಆಪರೇಷನ್ ಸಿಂದೂರ ಹೆಸರಿನಲ್ಲಿ ದಾಳಿ ನಡೆಸಿ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಕೈ ಬಲಪಡಿಸಲು ವಿಜಯೋತ್ಸವ ಆಚರಿಸಲಾಗುತ್ತದೆ. ಈ ಮೂಲಕ ಭಾರತೀಯ ಸೈನಿಕರಿಗೆ ಧೈರ್ಯ ತುಂಬೋಣ.
ಗಂಗಾವತಿ:ಪಾಕಿಸ್ತಾನ ವಿರುದ್ಧ ನಡೆಸಿದ ಆಪರೇಷನ್ ಸಿಂದೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಶ್ರೀಚನ್ನಬಸವಸ್ವಾಮಿ ಮಠದಲ್ಲಿ ಚನ್ನಬಸವ ಸ್ವಾಮಿಯ ಬೆಳ್ಳಿ ರಥೋತ್ಸವ ಜರುಗಿತು. ಚನ್ನಬಸವಸ್ವಾಮಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ತೇರನ್ನು ಮಠದ ಸುತ್ತಲೂ ಕಾರ್ಯಕರ್ತರು ಎಳೆದು ಜಯ ಘೋಷ ಹಾಕಿದರು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿಲುವಿನಿಂದ ಪಾಕಿಸ್ತಾನದ ಮೇಲೆ ಆಪರೇಷನ್ ಸಿಂದೂರ ಹೆಸರಿನಲ್ಲಿ ದಾಳಿ ನಡೆಸಿ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಕೈ ಬಲಪಡಿಸಲು ವಿಜಯೋತ್ಸವ ಆಚರಿಸಲಾಗುತ್ತದೆ. ಈ ಮೂಲಕ ಭಾರತೀಯ ಸೈನಿಕರಿಗೆ ಧೈರ್ಯ ತುಂಬೋಣ ಎಂದರು.ಈ ವೇಳೆ ಮಾಜಿ ಸಂಸದ ಶಿವರಾಮ ಗೌಡ, ವಿರೂಪಾಕ್ಷ ಸಿಂಗನಾಳ, ಎಚ್.ಎಂ. ಸಿದ್ದರಾಮಯ್ಯ ಸ್ವಾಮಿ, ನಗರಸಭೆ ಅಧ್ಯಕ್ಷೆ ಹೀರಾ ಬಾಯಿ, ವಾಸು ನವಲಿ. ಕಾಶಿನಾಥ್ ಚಿತ್ರ ಗಾರ ಸೇರಿದಂತೆ ಇತರರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.