ಆಪರೇಷನ್ ವಿಕ್ರಾಂತ್ ಕಾರ್ಯಾಚರಣೆ ವಿಫಲ

KannadaprabhaNewsNetwork |  
Published : Mar 19, 2025, 12:31 AM IST
18ಎಚ್ಎಸ್ಎನ್‌8: | Kannada Prabha

ಸಾರಾಂಶ

ಅಲೆಮಾರಿ ಕಾಡಾನೆ ವಿಕ್ರಾಂತ್‌ನನ್ನು ಹಿಡಿಯಲು ನಡೆಸಿದ ಆಪರೇಷನ್ ವಿಕ್ರಾಂತ್ ಕಾರ್ಯಾಚರಣೆ ವಿಫಲವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ಜೊತೆಗೆ ಏಳು ಸಾಕಾನೆಗಳು ಭಾಗವಹಿಸಿದ್ದವು. ವಿಕ್ರಾಂತ್ ಆನೆ ಗುಂಪಿನಲ್ಲಿ ಸೇರಿಕೊಂಡು ತಪ್ಪಿಸಿಕೊಂಡಿದೆ. ವೈದ್ಯರು ಕಾಡಾನೆಗೆ ಚುಚ್ಚುಮದ್ದು ನೀಡಲು ಸತತ ಆರು ಗಂಟೆಗಳ ಹರಸಾಹಸಪಟ್ಟರು. ಕಾಡಾನೆ ಗುಂಪಿನೊಳಗೆ ಸೇರಿಕೊಂಡಿದ್ದರಿಂದ, ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ.

ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕಿನ ಕಾನನಹಳ್ಳಿ ಗ್ರಾಮದಲ್ಲಿ ಅಲೆಮಾರಿ ಕಾಡಾನೆ ವಿಕ್ರಾಂತ್‌ನನ್ನು ಹಿಡಿಯಲು ನಡೆಸಿದ ಆಪರೇಷನ್ ವಿಕ್ರಾಂತ್ ಕಾರ್ಯಾಚರಣೆ ವಿಫಲವಾಗಿದೆ.

ವಿಕ್ರಾಂತ್ ಕಾಡಾನೆಯನ್ನು ಗುಂಪಿನಿಂದ ಬೇರ್ಪಡಿಸಲು ಅರಣ್ಯ ಇಲಾಖೆಯ ತಂಡ ಶ್ರಮಿಸಿದರೂ ಸಾಧ್ಯವಾಗದೆ ಕಾರ್ಯಾಚರಣೆ ಮುಂದೂಡಬೇಕಾಯಿತು. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ಜೊತೆಗೆ ಏಳು ಸಾಕಾನೆಗಳು ಭಾಗವಹಿಸಿದ್ದವು. ವಿಕ್ರಾಂತ್ ಆನೆ ಗುಂಪಿನಲ್ಲಿ ಸೇರಿಕೊಂಡು ತಪ್ಪಿಸಿಕೊಂಡಿದೆ. ವೈದ್ಯರು ಕಾಡಾನೆಗೆ ಚುಚ್ಚುಮದ್ದು ನೀಡಲು ಸತತ ಆರು ಗಂಟೆಗಳ ಹರಸಾಹಸಪಟ್ಟರು. ಕಾಡಾನೆ ಗುಂಪಿನೊಳಗೆ ಸೇರಿಕೊಂಡಿದ್ದರಿಂದ, ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ.ಬೆಳಿಗ್ಗೆಯಿಂದಲೇ ಕಾರ್ಯಾಚರಣೆಯಲ್ಲಿ ತೊಡಗಿದ್ದ ಹಾಸನ ವಿಭಾಗದ ಡಿಎಫ್‌ಒ ಸೌರಭ್‌ ಕುಮಾರ್‌ ಮತ್ತು ಅವರ ತಂಡ ಮಂಗಳವಾರ ಸಂಜೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ಇಂದಿನಿಂದ ಹೊಸ ತಂತ್ರಗಾರಿಕೆಯಲ್ಲಿ ಆಪರೇಷನ್ ಪುನರಾರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸ್ಥಳೀಯ ರೈತರು ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆ ತಂಡದ ಈ ಯತ್ನವನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ. ವಿಕ್ರಾಂತ್‌ ನಿಯಂತ್ರಣದ ಕುರಿತಾಗಿ ಇನ್ನೂ ಹೆಚ್ಚು ಪ್ರಯತ್ನ ನಡೆಸಬೇಕಾಗಿರುವುದರಿಂದ, ಇಂದಿನ ಕಾರ್ಯಾಚರಣೆ ಬಗ್ಗೆ ಹೆಚ್ಚಿನ ನಿರೀಕ್ಷೆ ಹುಟ್ಟಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಬದುಕಿಗೆ ಮೊಬೈಲ್ ಮಾರಕ: ಬಿಇಒ ತಿಮ್ಮೇಗೌಡ
ಕ್ಯಾನ್ಸರ್ ಜಾಗೃತಿಗಾಗಿ ಫೆ.8ರಂದು ಮ್ಯಾರಥಾನ್: ದರ್ಶನ್ ಪುಟ್ಟಣ್ಣಯ್ಯ