ಭೂ ರಹಿತರಿಗೆ ಜಮೀನು ನೀಡಲು ಅವಕಾಶ

KannadaprabhaNewsNetwork |  
Published : Apr 03, 2025, 12:35 AM IST
೨ಕೆಎಲ್‌ಆರ್-೩ಕೋಲಾರದ ತಾಲ್ಲೂಕು ಕಚೇರಿಯಲ್ಲಿ ದರ್ಖಾಸ್ತು ಸಮಿತಿ ಸಭೆಯಲ್ಲಿ ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ನಗರಸಭೆ (೫ ಕಿ.ಮೀ ವ್ಯಾಪ್ತಿ) ಹಾಗೂ ಪಟ್ಟಣ ಪಂಚಾಯಿತಿ (೩ ಕಿ.ಮೀ ವ್ಯಾಪ್ತಿ) ವ್ಯಾಪ್ತಿಯಲ್ಲಿ ಭೂಮಂಜೂರಾತಿ ಮಾಡುವಂತಿಲ್ಲ. ಹೆಚ್ಚಿನವರು ಪಟ್ಟಣ ಪಂಚಾಯಿತಿ ರೂಪುಗೊಳ್ಳುವ ಮುನ್ನವೇ ಬಹುತೇಕ ಮಂದಿ ಅರ್ಜಿ ಹಾಕಿಕೊಂಡಿದ್ದಾರೆ. ಅರ್ಜಿಗಳನ್ನು ವಿಲೇವಾರಿ ಮಾಡಿ ಪಟ್ಟಣ ಪಂಚಾಯಿತಿ ರೂಪಿಸಬೇಕಿತ್ತು

ಕನ್ನಡಪ್ರಭ ವಾರ್ತೆ ಕೋಲಾರವಿಧಾನಸಭಾ ಕ್ಷೇತ್ರವು ನಗರಸಭೆ ಹಾಗೂ ವೇಮಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಭೂ ಮಂಜೂರಾತಿಗೆ ಅವಕಾಶವಿಲ್ಲವಾಗಿದೆ, ಉಳಿದೆಡೆ ಕೊಡಲು ಜಮೀನೂ ಇಲ್ಲ, ಮಂಜೂರು ಮಾಡಲು ಬಹಳಷ್ಟು ನಿರ್ಬಂಧಗಳಿದ್ದು, ದರ್ಖಾಸ್ತು ಸಮಿತಿ ಇದ್ದು ಏನು ಪ್ರಯೋಜನವಿಲ್ಲವಾಗಿದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಹೇಳಿದರು. ನಗರದ ತಾಲೂಕು ಕಚೇರಿಯಲ್ಲಿ ಬುಧವಾರ ದರ್ಖಾಸ್ತು ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಗರಸಭೆ (೫ ಕಿ.ಮೀ ವ್ಯಾಪ್ತಿ) ಹಾಗೂ ಪಟ್ಟಣ ಪಂಚಾಯಿತಿ (೩ ಕಿ.ಮೀ ವ್ಯಾಪ್ತಿ) ವ್ಯಾಪ್ತಿಯಲ್ಲಿ ಭೂಮಂಜೂರಾತಿ ಮಾಡುವಂತಿಲ್ಲ ಎಂಬ ಕಾನೂನು ಇದೆ ಎಂದರು.

ಭೂ ಮಂಜೂರಾತಿ ಸಮಸ್ಯೆ

ಆದರೆ ಹೆಚ್ಚಿನವರು ಪಟ್ಟಣ ಪಂಚಾಯಿತಿ ರೂಪುಗೊಳ್ಳುವ ಮುನ್ನವೇ ಬಹುತೇಕ ಮಂದಿ ಅರ್ಜಿ ಹಾಕಿಕೊಂಡಿದ್ದಾರೆ. ಅರ್ಜಿಗಳನ್ನು ವಿಲೇವಾರಿ ಮಾಡಿ ಪಟ್ಟಣ ಪಂಚಾಯಿತಿ ರೂಪಿಸಬೇಕಿತ್ತು. ಈ ವಿಚಾರದ ಬಗ್ಗೆ ಕಂದಾಯ ಸಚಿವರು ಹಾಗೂ ಜಿಲ್ಲಾಧಿಕಾರಿ ಗಳೊಂದಿಗೆ ಜೊತೆ ಚರ್ಚಿಸುತ್ತೇನೆ. ಇದಕ್ಕೆ ಏನಾದರೂ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.ಭೂಮಂಜೂರಾತಿ ಸಭೆಗೆ ದರ್ಖಾಸ್ತು ಸಮಿತಿ ಸದಸ್ಯರೆಲ್ಲರೂ ಬಂದಿದ್ದರು. ದುರದೃಷ್ಟಕರ ಎಂದರೆ ದರ್ಖಾಸ್ತು ಸಮಿತಿಗೆ ಒಟ್ಟು ೧೭,೦೩೧ ಅರ್ಜಿಗಳು ಬಂದಿವೆ. ಈ ಪೈಕಿ ೧೬,೨೧೬ ಅರ್ಜಿ ವಜಾಗೊಂಡಿವೆ. ಬಾಕಿ ಇರುವ ಅರ್ಜಿಗಳು ೪೬೯. ಭೂಮಂಜೂರಾತಿಗೆ ಅರ್ಹ ಇರುವ ಪ್ರಕರಣ ೪೩. ಭೂಮಂಜೂರಾತಿ ನಿಯಮಾನುಸಾರ ಬಂದಿಲ್ಲದ ಅರ್ಜಿಗಳು ೫೦೮ ಎಂದು ಮಾಹಿತಿ ನೀಡಿದರು. ೧೨೮ ಅರ್ಜಿಗಳ ವಜಾ

ಸುಮಾರು ೩೦ ಗುಂಟೆ ಜಮೀನು ಮೇಲ್ಪಟ್ಟು ಇರುವ ಅಂದರೆ ಜಮೀನು ಇದ್ದೂ ಅರ್ಜಿ ಹಾಕಿರುವ ೧೨೮ ಅರ್ಜಿಗಳನ್ನು ವಜಾ ಮಾಡಲಾಗಿದೆ. ನಿರ್ಬಂಧಿತ ಅಂತರದಲ್ಲಿರುವುದು ಅಂದರೆ ನಗರಸಭೆ (೫ ಕಿ.ಮೀ ವ್ಯಾಪ್ತಿ), ಪಟ್ಟಣ ಪಂಚಾಯಿತಿ (೩ ಕಿ.ಮೀ ವ್ಯಾಪ್ತಿ) ವ್ಯಾಪ್ತಿಯಿಂದಲೇ ಭೂಮಂಜೂರಾತಿ ಕೋರಿ ೭,೯೮೭ ಅರ್ಜಿಗಳು ಬಂದಿವೆ. ಗೋಮಾಳ ಜಮೀನು ಲಭ್ಯವಿಲ್ಲ. ಆದರೂ ಅಂಥ ಪ್ರದೇಶದಲ್ಲಿ ಜಮೀನು ಕೋರಿ ೬,೬೯೨ ಅರ್ಜಿಗಳು ಬಂದಿವೆ. ಇವೆಲ್ಲಾ ವಜಾಗೊಂಡಿವೆ. ಅರ್ಜಿದಾರರು ವಾಸವಿಲ್ಲದ ಸ್ಥಳದಲ್ಲಿ ಜಮೀನು ಕೋರಿ ಬಂದಿದ್ದ ೨೪ ಅರ್ಜಿಗಳು ವಜಾಗೊಂಡಿವೆ. ೬೩೫ ಮಂದಿ ಅನುಭವದಲ್ಲಿ ಇಲ್ಲದವರು ಅರ್ಜಿ ಹಾಕಿದ್ದು, ವಜಾಗೊಂಡಿವೆ’ ಎಂದರು.ಸ್ಪೀಕರ್ ಪೇಪರ್ ಎಸೆಯುವುದು ಸರಿಯೇ, ಸದನದೊಳಗೆ ಜಾತಿ, ಧರ್ಮ ಎಂಬುದಿಲ್ಲ. ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಮುಸ್ಲಿಂ ಆಗಿದ್ದು, ತಮ್ಮ ಪಕ್ಷದವರನ್ನು ಸದನದಿಂದ ಅಮಾನತುಗೊಳಿಸಿದ್ದಾರೆ ಎಂಬ ಶಾಸಕ ಹರೀಶ್ ಪೂಂಜಾ ಮಾತು ಸರಿಯಲ್ಲ ಎಂದರು. ಧರ್ಮದ ಬಗ್ಗೆ ಟೀಕೆ ಬೇಡ

ವಕ್ಫ್ ಮಂಡಳಿಯನ್ನೇ ರದ್ದು ಮಾಡಲು ಸಾಧ್ಯವಿಲ್ಲ. ಹಾಗೆ ಮಾಡಲು ಮುಂದಾದರೆ ರಾಜ್ಯಗಳ ಒಪ್ಪಿಗೆಯೂ ಬೇಕಾಗುತ್ತದೆ. ಧರ್ಮಗಳಲ್ಲಿನ ಆಚರಣೆ ಪಾಲನೆ ಮಾಡಲು ಅಡ್ಡಿ ಮಾಡಬಾರದು. ಯಾವುದೇ ಧರ್ಮದ ಬಗ್ಗೆ ಟೀಕೆ ಮಾಡಬಾರದು. ತಾರತಮ್ಯ ಮಾಡಲು ಹೋಗಬಾರದು’ ಎಂದರು. ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ಹೆಚ್ಚಳದ ಬಗ್ಗೆ ಪ್ರತಿಕ್ರಿಯಿಸಿ, ‘ಹಾಲಿನ ದರ ೪ ಹೆಚ್ಚಳವಾಗಿದೆ. ಡೀಸೆಲ್, ಪೆಟ್ರೋಲ್ ದರ ಹೆಚ್ಚಿದೆ. ಖಂಡಿತ ಬಹಳ ಹೊರೆಯಾಗುತ್ತಿದೆ. ನೋಂದಣಿ ಶುಲ್ಕ, ಮುದ್ರಾಂಕ ಶುಲ್ಕ ಹೆಚ್ಚಳವಾಗಿದೆ. ನನಗೇ ಆ ಅನುಭವವಾಗಿದೆ. ಆದರೆ, ಹೆಚ್ಚಳವಾಗಿರುತ್ತಿರುವುದು ಒಳ್ಳೆಯ ಬೆಳವಣಿಗೆ. ಸರ್ಕಾರಕ್ಕೆ ತೆರಿಗೆ ಸಂಗ್ರಹವಾಗುತ್ತದೆ. ಅಭಿವೃದ್ಧಿಗೆ ಹಣ ಬೇಡವೇ ಎಂದು ಕೇಳಿದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಎಂ.ನಯನ, ಸಮಿತಿ ಸದಸ್ಯರಾದ ಸವಿತಾ ಮಂಜುನಾಥ್, ಖಾದ್ರಿಪುರ ಬಾಬು, ಕ್ಯಾಲನೂರು ಬಾಬಾಸಾಬ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ