ಬಳ್ಳಾರಿ ಅಕ್ರಮದ ನೆನಪು ಮರೆಸಲು ವಿಪಕ್ಷ ಪಾದಯಾತ್ರೆ

KannadaprabhaNewsNetwork |  
Published : Sep 03, 2026, 01:30 AM IST
2ಕೆಡಿವಿಜಿ1-ದಾವಣಗೆರೆಯಲ್ಲಿ ಬುಧವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

Opposition march to forget the memory of Bellari illegality

-ಕೆಪಿಸಿಸಿ ನಾಯಕ ಡಿ. ಬಸವರಾಜ ವ್ಯಂಗ್ಯ । ರಾಜಕೀಯ ಲಾಭಕ್ಕಾಗಿ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಗಿಮಿಕ್‌ಕನ್ನಡಪ್ರಭ ವಾರ್ತೆ ದಾವಣಗೆರೆ

ಬಳ್ಳಾರಿ ಅಕ್ರಮದ ನೆನಪುಗಳನ್ನು ಮರೆಸಿ, ಮುಂಬರುವ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಬಿಜೆಪಿ-ಜೆಡಿಎಸ್ ಪಾದಯಾತ್ರೆ ಕೈಗೊಂಡಿದ್ದು, ಬಿಜೆಪಿ ರಾಜಕೀಯ ದಿವಾಳಿತನಕ್ಕೆ ಈ ಪಾದಯಾತ್ರೆಯೇ ಸಾಕ್ಷಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಕೈಗೊಂಡಿರುವ ಬಳ್ಳಾರಿ ಪಾದಯಾತ್ರೆ ಸಂಪೂರ್ಣ ಸತ್ವಹೀನವಾಗಿದ್ದು, ಮುಂದಿನ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಇಂತಹ ಪಾದಯಾತ್ರೆಗೆ ಜನತೆ ಸೊಪ್ಪು ಹಾಕುವುದಿಲ್ಲ, ಗಂಭೀರವಾಗಿಯೂ ಪರಿಗಣಿಸುವುದಿಲ್ಲ ಎಂದರು.

ಮುಂಬರುವ 2028ರ ವಿಧಾನಸಭೆ ಚುನಾವಣೆಗೆ ಹೋಗಲು, ಜನರ ಮುಂದೆ ಹೋಗುವುದಕ್ಕೆ ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಮುಖವೇ ಇಲ್ಲ. ಹಾಗಾಗಿಯೇ ಎರಡೂ ವಿಪಕ್ಷಗಳು ಬಳ್ಳಾರಿಗೆ ಪಾದಯಾತ್ರೆ ಕೈಗೊಂಡಿವೆ. ಇಂತಹ ಕುಂಟು ನೆಪದ, ವಾಮಮಾರ್ಗದ ನೆಪವನ್ನು ರಾಜ್ಯದ ಜನತೆ ಒಪ್ಪುವುದೂ ಇಲ್ಲ.

ಪಾದಯಾತ್ರೆ ಮಾಡಿ, ಏನೋ ಸಾಧಿಸಿಬಿಡುತ್ತೇವೆಂಬ ಭ್ರಮೆಯಲ್ಲಿ ಇರುವ ಬಿಜೆಪಿ-ಜೆಡಿಎಸ್ ನಾಯಕ ಅಂತಹ ಪ್ರಯತ್ನಗಳು ಫಲ ನೀಡುವುದಿಲ್ಲ ಎಂದು ಅವರು ಹೇಳಿದರು.

ಮುಂಬರುವ 2028ರ ವಿಧಾನ ಸಭಾ ಚುನಾವಣೆಗೆ ಹೋಗಲು ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಮುಖ ಇಲ್ಲದ ಕಾರಣ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಇಂತಹ ಕುಂಟುನೆಪದ ವಾಮಮಾರ್ಗದ ನೆಪ ರಾಜ್ಯದ ಜನತೆ ಒಪ್ಪುವುದಿಲ್ಲ. ಅಲ್ಲದೇ ಅವರ ಪ್ರಯತ್ನ ಫಲ ನೀಡುವುದಿಲ್ಲ. ಅಧಿಕಾರದಲ್ಲಿದ್ದಾಗ ಬಿಜೆಪಿ-ಜೆಡಿಎಸ್ ಪಕ್ಷಗಳು ಏನು ಮಾಡಿವೆಯೆಂಬುದನ್ನು ರಾಜ್ಯದ ಜನರು ಚೆನ್ನಾಗಿಯೆ ಅರಿತಿದ್ದಾರೆ. ಹಾಗಾಗಿ, ವಿಪಕ್ಷಗಳ ಪಾದಯಾತ್ರೆಗೆ ಅಷ್ಟಾಗಿ ಗಮನ ನೀಡಬೇಕಿಲ್ಲ ಎಂದು ಅವರು ತಿಳಿಸಿದರು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಕ್ಷೇತ್ರ ಗೆದ್ದಿದ್ದು, ಬಿಜೆಪಿ 66 ಹಾಗೂ ಜೆಡಿಎಸ್ 19 ಸ್ಥಾನಗಳಿಗೆ ಕುಸಿದಿವೆ. 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಶಕ್ತಿಯನ್ನು ವೃದ್ಧಿಸಿಕೊಂಡಿದೆ. ರಾಜ್ಯದಲ್ಲಿ ಭ್ರಷ್ಟಾಚಾರದ ಪಿತಾಮಹನೆಂದರೆ ಅದು ಬಿ.ಎಸ್.ಯಡಿಯೂರಪ್ಪ. ಮುಖ್ಯಮಂತ್ರಿಯಾಗಿದ್ದಾಗ ಚೆಕ್ ಮೂಲಕ ಲಂಚ ಸ್ವೀಕರಿಸಿ ಯಡಿಯೂರಪ್ಪ ಜೈಲಿಗೆ ಹೋಗಿದ್ದನ್ನು ರಾಜ್ಯದ ಜನ ಇಂದಿಗೂ ಮರೆತಿಲ್ಲ ಎಂದು ಅವರು ವಿವರಿಸಿದರು.

ಬಿಜೆಪಿ ನಾಯಕರು ರಾಜಕೀಯ ಪ್ರವೇಶ ಮಾಡಿದಾಗ ಇದ್ದ ಆಸ್ತಿ ಎಷ್ಟು, ಈಗ ಇರುವ ಆಸ್ತಿ ಎಷ್ಟು ಎಂಬುದನ್ನು ಬಿ.ಎಸ್.ಯಡಿಯೂರಪ್ಪ, ಆರ್.ಅಶೋಕ, ಬಿ.ವೈ.ವಿಜಯೇಂದ್ರ ಬಹಿರಂಗಪಡಿಸಲಿ. ಬಿಜೆಪಿ ಅವಧಿಯಲ್ಲಾದ ಗಣಿ ಅಕ್ರಮ, ಕೊರೋನಾ ವೇಳೆ ಉಪಕರಣ ಖರೀದಿ ಹಗರಣ, ಇತರೆ ಭ್ರಷ್ಟಾಚಾರ, ಹಗರಣಗಳ ಬಗ್ಗೆ ಪ್ರಶ್ನಿಸಲು ಕಾಂಗ್ರೆಸ್ ಪಕ್ಷವು ಸಿದ್ಧವಾಗಿದೆ. ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿರುವ ಬಿಜೆಪಿ ರಾಜಕೀಯ ನಾಟಕವನ್ನೆಲ್ಲಾ ಜನ ನಂಬುವುದೂ ಇಲ್ಲ ಎಂದು ಅವರು ತಿಳಿಸಿದರು.

ಪ್ರಜಾಪ್ರಭುತ್ವ ವಿರೋಧಿ:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಂತರ ಆ ಸ್ಥಳವನ್ನು ಶುಚಿಗೊಳಿಸಿದ್ದು, ಶುದ್ಧೀಕರಣ ಮಾಡಿದ್ದೇವೆಂದಿದ್ದು ಪ್ರಜಾಪ್ರಭುತ್ವ ವಿರೋಧಿ ವರ್ತನೆಯಾಗಿದೆ. ಇಂತಹ ಕಾರ್ಯ ಕೈಗೊಂಡ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬದಲಿಗೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮೇಲೆಯೇ ಎಫ್ಐಆರ್ ದಾಖಲು ಮಾಡಿದ್ದು ಸರಿಯಲ್ಲ ಎಂದು ಡಿ.ಬಸವರಾಜ ಆಕ್ಷೇಪಿಸಿದರು.

ಪಕ್ಷದ ಮುಖಂಡರಾದ ಎಂ.ಕೆ.ಲಿಯಾಖತ್ ಅಲಿ, ಡಿ.ಶಿವಕುಮಾರ, ಬಿ.ಎಸ್.ಸುರೇಶ, ಬಿ.ಎಚ್.ಉದಯಕುಮಾರ ಇದ್ದರು. ಫೋಟೊ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸವರಾಜ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿ.ಎ. ಸೈಟ್‌ ಶುಲ್ಕ ನಿಯಮ ಸರಳಗೊಳಿಸಿ: ಶಾಸಕರಾದ ಅರುಣ್‌, ಚನ್ನಬಸಪ್ಪ ಆಗ್ರಹ
ಕಸ್ತೂರಿ ರಂಗನ್‌ ವರದಿ ಗಂಭೀರತೆ ಅರಿಯದ ರಾಜಕಾರಣಿಗಳು: ಆರ್‌ಕೆ ಸಿದ್ದರಾಮಣ್ಣ