ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆಗೆ ವಿರೋಧ ಸರಿಯಲ್ಲ : ಎಚ್.ಡಿ. ರೇವಣ್ಣ

KannadaprabhaNewsNetwork |  
Published : Aug 26, 2025, 01:03 AM IST
25ಎಚ್ಎಸ್ಎನ್17 :  | Kannada Prabha

ಸಾರಾಂಶ

ಹಿಂದೂ, ಮುಸ್ಲಿಂ ಎಂದು ಬೇರ್ಪಡಿಸುವುದು ಸರಿಯಲ್ಲ. ನಾವೆಲ್ಲರೂ ಒಂದೇ. ಈ ಬಾರಿ ದಸರಾ ಮಹೋತ್ಸವ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಅವಕಾಶ ನೀಡಿರುವುದನ್ನು ಯಾರೂ ವಿರೋಧಿಸಬಾರದು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಬೆಂಬಲ ಸೂಚಿಸಿದರು. 

 ಹಾಸನ : ಹಿಂದೂ, ಮುಸ್ಲಿಂ ಎಂದು ಬೇರ್ಪಡಿಸುವುದು ಸರಿಯಲ್ಲ. ನಾವೆಲ್ಲರೂ ಒಂದೇ. ಈ ಬಾರಿ ದಸರಾ ಮಹೋತ್ಸವ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಅವಕಾಶ ನೀಡಿರುವುದನ್ನು ಯಾರೂ ವಿರೋಧಿಸಬಾರದು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಬೆಂಬಲ ಸೂಚಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ವಿಚಾರವಾಗಿ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಅವರು ನಮ್ಮ ಜಿಲ್ಲೆಯ ಮಹಿಳೆ, ಹೋರಾಟಗಾರ್ತಿ. ಅವರ ಕೈಯಲ್ಲಿ ಉದ್ಘಾಟನೆ ನಡೆಯುವುದು ನನಗೆ ಸಂತೋಷದ ವಿಷಯ. ಇದರಲ್ಲಿ ಹಿಂದೂ- ಮುಸ್ಲಿಂ ಬೇಧ ಮಾಡುವುದು ಸರಿಯಲ್ಲ. ನಾವು ಎಲ್ಲರೂ ಭಾರತೀಯರು. ನನಗೆ ಧಾರ್ಮಿಕ ಭೇದ- ಭಿನ್ನಭಿಪ್ರಾಯವಿಲ್ಲ ಎಂದರು.

ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಈಗಾದರೂ ಕೆಲಸ ನಡೆಯಲಿ ಎಂಬ ಆಸೆಯಿದೆ. ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗಳು ನಡೆದಿಲ್ಲ ಎಂದು ದೂರಿದರು.

ನಾನು ೨೫ ಕೋಟಿ ರುಪಾಯಿ ವೆಚ್ಚದಲ್ಲಿ ಮುಸ್ಲಿಂ ಪ್ರದೇಶದಲ್ಲಿ ರಸ್ತೆ ನಿರ್ಮಿಸಿದ್ದೇನೆ. ಅದನ್ನು ಮತಗಳಿಗಾಗಿ ಮಾಡಲಿಲ್ಲ. ೪೦ ವರ್ಷಗಳಿಂದ ಕಾಂಗ್ರೆಸ್ ಏಕೆ ಆ ಕೆಲಸ ಮಾಡಲಿಲ್ಲ? ಶಾಸಕರಾಗಿ ಅದು ನನ್ನ ಜವಾಬ್ದಾರಿ. ಯಾರೇ ಮತ ಕೊಟ್ಟರೂ ಅಥವಾ ಕೊಡದಿದ್ದರೂ, ನನ್ನ ಜೀವಮಾನವಿರುವವರೆಗೂ ಜಿಲ್ಲೆಯ ಜನರನ್ನು ಮರೆತೇ ಬಿಡುವುದಿಲ್ಲ ಎಂದು ತಿಳಿಸಿದರು. ರಾಜಕೀಯದಲ್ಲಿ ಏಳುಬೀಳು ಇರುತ್ತವೆ. ಆದರೆ, ಜಿಲ್ಲೆಯ ಮಹಿಳೆಗೆ ಒಂದು ಅವಕಾಶ ನೀಡಲಾಗಿದೆ. ಬಾನು ಮುಷ್ತಾಕ್ ಅವರು ದೇವೇಗೌಡರ ಕಾಲದಿಂದಲೇ ಹೋರಾಟ ಮಾಡುತ್ತಿರುವವರು. ಇದರಲ್ಲಿ ರಾಜಕೀಯವನ್ನು ಬಿಟ್ಟು ನೋಡಬೇಕು. ಅಬ್ದುಲ್ ಕಲಾಂ ರಾಷ್ಟ್ರಪತಿಯಾಗಿರಲಿಲ್ಲವೇ? ಆಗ ದೇವೇಗೌಡರು ಅವರನ್ನು ಹೇಗೆ ನಡೆಸಿಕೊಂಡರು ನೋಡಿ ಎಂದು ಪ್ರಶ್ನಿಸಿದರು.

ಧರ್ಮಸ್ಥಳದ ವಿಚಾರ ಕೇಳಿದಾಗ, “ಅದರ ಬಗ್ಗೆ ನಾನು ಈಗ ಹೇಳುವುದಿಲ್ಲ. ರಾಜ್ಯ ಸರ್ಕಾರ ತನಿಖೆ ನಡೆಸುತ್ತಿದೆ. ಎರಡು ಸರ್ಕಾರಗಳು ಪರಸ್ಪರ ಆರೋಪ- ಪ್ರತ್ಯಾರೋಪ ಮಾಡಿಕೊಳ್ಳುತ್ತಿವೆ. ಧರ್ಮಸ್ಥಳದ ಬಗ್ಗೆ ನಮಗಿರುವ ಗೌರವ ಅಸಾಧಾರಣ. ಆದರೆ, ಕೆಲವರು ಅದನ್ನು ಹಾಳುಮಾಡಲು ಪ್ರಯತ್ನಿಸಿದ್ದಾರೆ. ಸರ್ಕಾರ ಅದಕ್ಕೆ ಅವಕಾಶ ಕೊಡಬಾರದಿತ್ತು. ಡಾ. ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳವನ್ನು ಸದಾ ಸಮನಾಗಿ, ರಾಜಕೀಯವಿಲ್ಲದೆ ನಡೆಸಿಕೊಂಡು ಬಂದಿದ್ದಾರೆ. ತಪ್ಪು ಮಾಡಿದವರು ಧರ್ಮಸ್ಥಳಕ್ಕೆ ಬಂದು ಸತ್ಯಪ್ರಮಾಣ ಮಾಡುತ್ತಾರೆ. ನಾನೂ ಅದನ್ನೂ ನೋಡಿದ್ದೇನೆ. ಮಂಜುನಾಥಸ್ವಾಮಿಯ ಶಕ್ತಿ ಅಪಾರ. ಆ ದೇವರ ಶಕ್ತಿಯ ಬಗ್ಗೆ ನಾನು ಮಾತಾಡಲಾರೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ