ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಫೆ.6ರಂದು ಎನ್ಟಿಪಿಸಿ ಸಂಸ್ಥೆಯ ನಿರ್ದೇಶನದಂತೆ ಸರ್ಕಾರದ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ವೀಡಿಯೋ ಕಾನೆರೆನ್ಸ್ ಮೂಲಕ ಐದು ಜಿಲ್ಲೆಗಳ ಜಿಲ್ಲಾಧಿಕಾರಿ ಸಭೆಯನ್ನು ಕರೆದು ಪರಮಾಣು ಸ್ಥಾವರನ್ನು ಸ್ಥಾಪಿಸಲು ಸಂಭಾವ್ಯ ಪ್ರದೇಶಗಳ ಸೂಕ್ತತೆ ಕುರಿತು ಪ್ರಾಥಮಿಕ ಅಧ್ಯಯನ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ ಎಂಬ ನಿಖರ ಮಾಹಿತಿ ಲಭ್ಯವಾಗಿದೆ ಎಂದರು.
ಬೇಸೂರಿನಲ್ಲಿ 3,190 ಎಕರೆ ಜಮೀನು ಲಭ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಅಣುಸ್ಥಾವರ ಯೋಜನೆಗೆ ರಾಯಚೂರು, ವಿಜಯನಗರ, ಕೊಪ್ಪಳ, ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ತಮ್ಮಲ್ಲಿ ಭೂಮಿ ಇಲ್ಲ. ಮಾಲಿನ್ಯ ಉಂಟು ಮಾಡುವ, ಅಣುಸ್ಥಾವರದ ಅಣು ವಿಕೇಂದ್ರೀಕರಣದಿಂದ ಆಗುವ ಹಾನಿ ಹಾಗೂ ಯಾವುದೇ ಕೈಗಾರಿಕೆಗಳನ್ನು ಸ್ಥಾಪಿಸಬಾರದೆಂದು ಸಾರ್ವಜನಿಕರು, ಪರಿಸರವಾದಿಗಳು, ಧರಣಿ, ಮುಷ್ಕರ ನಡೆಸುತ್ತಿದ್ದಾರೆ ಎಂದು ಸರ್ಕಾರಕ್ಕೆ ವರದಿ ಸಲ್ಲಿಸುತ್ತಿರುವಾಗ ನಮ್ಮ ಜಿಲ್ಲಾಧಿಕಾರಿಗೆ ಏನಾಗಿದೆ? ಜಾಗ ಇದೆ ಎಂದು ತಿಳಿಸುವುದರ ಮರ್ಮವೇನು? ಇಂತಹ ಮಾರಕ ಯೋಜನೆಗಳು ಬೇಡ ಎಂದು ಜಲ್ಲಾಧಿಕಾರಿ ಏಕೆ ಹೇಳುತ್ತಿಲ್ಲ. ಇಲ್ಲಿಯ ಜನ ಧಂಗೆ ಏಳುವುದನ್ನು ಜಿಲ್ಲಾಧಿಕಾರಿ ಇಷ್ಟಪಡುತ್ತಿದ್ದಾರೆಯೇ? ಎಂದು ಕಿಡಿಕಾರಿದರು.ಬೇಸೂರು ಅಣುಸ್ಥಾವರ ಸ್ಥಾಪನೆಯ ಕುರಿತಂತೆ ಇಲ್ಲಿಯವರೆಗೆ ಆದ ಸಭೆಗಳ ನಡಾವಳಿಗಳನ್ನು ತೆಗೆದುಕೊಳ್ಳುತ್ತೇನೆ. ಡಿಸಿಯವರು ರಜೆ ಮುಗಿಸಿ ಬಂದ ಬಳಿಕ ಅವರ ಜತೆ ಸಭೆ ಮಾಡುತ್ತೇನೆ. ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಸೋಲಾರ್, ಪವನ ವಿದ್ಯುತ್ಗಳಿಗೆ ತಾವು ಆದ್ಯತೆ ಕೊಡುವುದಾಗಿ ತಿಳಿಸಿದ್ದಾರೆ. ಅದನ್ನು ನಾನು ಸ್ವಾಗತಿಸುತ್ತೇನೆ. ಪರಿಸರಕ್ಕೆ ಮಾರಕವಲ್ಲದ ಯೋಜನೆಗಳನ್ನು ಜಾರಿಗೆ ತರಲು ಎಲ್ಲಾ ಜಿಲ್ಲಾಡಳಿತಗಳು ಮುಂದಾಗಬೇಕು ಎಂದು ಸಲಹೆ ನೀಡಿದರು.
ಬೇಸೂರಿನಲ್ಲಿ ಯಾವುದೇ ಅಣುಸ್ಥಾವರ ಸ್ಥಾಪಿಸುವ ಯೋಜನೆ ಸರ್ಕಾರಕ್ಕಿಲ್ಲ. ಯೋಜನೆ ಸ್ಥಾಪಿಸುವ ಕುರಿತು ಸರ್ಕಾರಕ್ಕೆ ತಾವು ಯಾವುದೇ ವರದಿ ಸಲ್ಲಿಸಿಲ್ಲ ಎಂದು ಸೋಮವಾರ ಪ್ರಭಾರ ಜಿಲ್ಲಾಧಿಕಾರಿ ಎನ್.ಹೇಮಂತ್ ನೀಡಿರುವ ಹೇಳಿಕೆ ಕೇವಲ ಜನರ ಮೂಗಿಗೆ ತುಪ್ಪ ಸುರಿಯುವ ಕೆಲಸವಾಗಿದೆ. ಅವರ ಹೇಳಿಕೆ ನಂಬಿಕೆಗೆ ಅರ್ಹವಲ್ಲ. ಅಣುವಿದ್ಯುತ್ ಉತ್ಪಾದನಾ ವೆಚ್ಚವನ್ನು ಎನ್.ಟಿ.ಪಿ.ಸಿ. ಮುಕ್ತವಾಗಿ ಹೇಳಬೇಕು. ವೆಚ್ಚದಾಯಕ ಈ ಯೋಜನೆಯ ಪ್ರಸ್ತಾಪವನ್ನು ಯಾವುದೇ ಕಾರಣಕ್ಕೂ ನಾವು ಸಹಿಸುವುದಿಲ್ಲ.
ಬೇಸೂರಿನಲ್ಲಿ ಅಣುಸ್ಥಾವರದಿಂದ ಪರಸರಕ್ಕೆ ಹಾನಿ