ಸರ್ಕಾರಿ ಶಾಲೆಗಳಲ್ಲಿ ನರ್ಸರಿ ತರಗತಿ ಆರಂಭಕ್ಕೆ ವಿರೋಧ

KannadaprabhaNewsNetwork |  
Published : Jun 20, 2024, 01:01 AM IST
ಫೋಟೋ- ಅಂಗನವಾಡಿ 1, 2, 3, 4, 5 | Kannada Prabha

ಸಾರಾಂಶ

ಅಂಗನವಾಡಿ ಸಾವಿರಾರು ನೌಕರರು ತಮ್ಮ ಮಕ್ಕಳ ಸಮೇತರಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್‌ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲರ ಕಲಬುರಗಿಯಲ್ಲಿರುವ ನಿವಾಸಗಳ ಮುಂದೆ ಇಡೀ ದಿನ ಧರಣಿ ನಡೆಸಿ ಗಮನ ಸೆಳೆದಿದ್ದಾರೆ.

ಕನ್ನಡಪ್ರಭಿ ವರ್ತೆ ಕಲಬುರಗಿ

ಸರ್ಕಾರಿ ಶಾಲೆಗಳಲ್ಲಿ ನರ್ಸರಿ ತರಗತಿ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿ ಅಂಗನವಾಡಿ ನೌಕರರ ಧರಣಿ ಜಿಲ್ಲೆಯಲ್ಲಿ ಮುಂದುವರಿದಿದೆ.

ಬುಧವಾರ ಅಂಗನವಾಡಿ ಸಾವಿರಾರು ನೌಕರರು ತಮ್ಮ ಮಕ್ಕಳ ಸಮೇತರಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್‌ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲರ ಕಲಬುರಗಿಯಲ್ಲಿರುವ ನಿವಾಸಗಳ ಮುಂದೆ ಇಡೀ ದಿನ ಧರಣಿ ನಡೆಸಿ ಗಮನ ಸೆಳೆದಿದ್ದಾರೆ.

ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಶಿಕ್ಷಣ ಇಲಾಖೆ ಮೂಲಕ ಜಾರಿಗೊಳಿಸುವ ಆದೇಶ ವಾಪಸ್ ಪಡೆದು ಐಸಿಡಿಎಸ್ ಯೋಜನೆಯ ಅಂಗನವಾಡಿ ಕೇಂದ್ರಗಳ ಮೂಲಕ ಜಾರಿಗೊಳಿಸಬೇಕು, ಸರಕಾರಿ ಶಾಲೆಗಳಲ್ಲಿ ನರ್ಸರಿ ತರಗಿ ಆರಂಭಿಸದೆ ಅಂಗನವಾಡಿಗಳಲ್ಲೇ ಶುರುಮಾಡುವಂತೆ ಕೋರಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಭಾರತ ಕಮ್ಯೂನಿಸ್ಟ್ ಪಕ್ಷ (ಎಂ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬುಧವಾರದ ಧರಣಿಗಳು ನಡೆದಿದ್ದವು. ಇದಾದ ನಂತರ ನಗರದ ಕನ್ನಡ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''