ಹಿರೇಬಿದನೂರು ಅಕ್ರಮ ಮೊಬೈಲ್‌ ಟವರ್ ನಿರ್ಮಾಣಕ್ಕೆ ವಿರೋಧ

KannadaprabhaNewsNetwork |  
Published : Apr 12, 2026, 02:15 AM IST
ಹಿರೇಬಿದನೂರು ನಿವಾಸಿಗಳು ನಗರಸಭೆ ಕಾರ್ಯಾಲಯದ ಮುಂಭಾಗ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರದೊಂದಿಗೆ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಸರ್ಕಾರಿ ನಿಬಂಧನೆಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ಹಿನ್ನೆಲೆ ಗ್ರಾಮಸ್ಥರು ನಗರಸಭೆ ಆಯುಕ್ತಾರದ ರಮೇಶ್ ಮೊಬೈಲ್ ಟವರ್‌ ಅನ್ನು ಸ್ಥಗಿತ ಮಾಡಲು ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ನಗರ ವ್ಯಾಪ್ತಿಗೆ ಬರುವ ಹಿರೇಬಿದನೂರು ಗ್ರಾಮದ ನಿವಾಸಿಗಳು ಗ್ರಾಮದ ಸರ್ಕಾರಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಮೊಬೈಲ್ ಟವರ್ ನಿರ್ಮಾಣ ಸ್ಥಗಿತಗೊಳಿಸುವಂತೆ ನಗರಸಭೆಯ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಹಿಡಿದು ಧರಣಿ ನಡೆಸಿದರು.

ಸರ್ಕಾರಿ ನಿಬಂಧನೆಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ಹಿನ್ನೆಲೆ ಗ್ರಾಮಸ್ಥರು ನಗರಸಭೆ ಆಯುಕ್ತಾರದ ರಮೇಶ್ ಮೊಬೈಲ್ ಟವರ್‌ ಅನ್ನು ಸ್ಥಗಿತ ಮಾಡಲು ಮನವಿ ಮಾಡಿದರು. ನಗರಸಭೆಯ ಅಧಿಕಾರಿಗಳು ಸಾರ್ವಜನಿಕರಿಗೆ ನಿಗದಿತ ಸಮಯದಲ್ಲಿ ಕೆಲಸ ಮಾಡಿಕೊಡಲು ವಿಳಂಬ ಮಾಡುತ್ತಿದ್ದಾರೆ. ಚರಂಡಿಗಳು ಸ್ವಚ್ಛತೆ ಮಾಡುತ್ತಿಲ್ಲ ಎಂದು ತಿಳಿಸಿದರು.ಮುಖಂಡರಾದ ಹರೀಶ್ ಕುಮಾರ್ ಮಾತನಾಡಿ, ಟವರ್ ಸ್ಥಗಿತಗೊಳಿಸಲು ಮೂರು ವರ್ಷಗಳಿಂದ ಅಲೆದಾಡುತ್ತಿದ್ದೇವೆ. ಟವರ್ ಸುತ್ತಮುತ್ತ ಮನೆಗಳು ಸಣ್ಣ ಪ್ಲಾಸ್ಟಿಕ್ ಫ್ಯಾಕ್ಟರಿ ಇದೆ. ನಗರಸಭೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಪುನರ್ ಸ್ಥಾಪಿಸಲು ಅವಕಾಶ ಕೊಡುವುದಿಲ್ಲ. ಪರವಾನಗಿಯನ್ನು ರದುಪಡಿಸಬೇಕು. ಮನವಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು. ಮೇಲ್ಮಟ್ಟದ ಅಧಿಕಾರಿಗಳಿಗೆ ದೂರು ಕೊಡುತ್ತೇವೆ ಎಂದರು.ಗೌರಿಬಿದನೂರು ನಗರಸಭೆಯ ಆಯುಕ್ತರಾದ ರಮೇಶ್ ಕೆ.ಜಿ. ಮಾತನಾಡಿ, ಸರ್ಕಾರದ ನಿಯಮಾವಳಿಯಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುತ್ತಾರೆ. ಅದರಂತೆಯೇ ಪರಿಸರ ಇಲಾಖೆ ಕೆಐಡಿಪಿ ಇಲಾಖೆ ವತಿಯಿಂದ ಅನುಮೋದನೆ ಆಗಿರುತ್ತದೆ. ಸಣ್ಣ ಕೈಗಾರಿಕೆ ಇಲಾಖೆ ಅನುಮತಿ ನೀಡಿರುತ್ತದೆ. ನಗರಸಭೆಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ಏಕಾಏಕಿಯಾಗಿ ಕೆಲಸ ಪ್ರಾರಂಭವಾಗುತ್ತಿದ್ದರೆ ತಕ್ಷಣ ನೋಟಿಸ್ ನೀಡಿ ಕೆಲಸ ನಿಲ್ಲಿಸುವಂತೆ ಮಾಡುತ್ತೇನೆ ಎಂದು ತಿಳಿಸಿದರು.ಪಿಎಸ್ಐ ಮಹಾಲಕ್ಷ್ಮೀ, ಹರೀಶ್ ಕುಮಾರ್, ಲೋಕೇಶ್, ಹಿರೇಬಿದನೂರು ಗ್ರಾಮದ ಗ್ರಾಮಸ್ಥರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿ, ಮಾಜಿ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾಲಕರ ವಿರೋಧದ ನಡುವೆ ಒಂದಾದ ಅಂತರ್‌ ಧರ್ಮೀಯ ಪ್ರೇಮಿಗಳು
ಮಂತ್ರಾಲಯ ಮಠಕ್ಕೂ ಯಲಬುರ್ಗಾ ಶ್ರೀಮಠಕ್ಕೂ ಅನನ್ಯ ಸಂಬಂಧ