ವಕ್ಫ್‌ ತಿದ್ದುಪಡಿಗೆ ವಿರೋಧ: ಮಾನವ ಸರಪಳಿ ನಿರ್ಮಿಸಿ ಮೌನ ಪ್ರತಿಭಟನೆ

KannadaprabhaNewsNetwork |  
Published : Jul 06, 2025, 01:48 AM IST
05ಕೆಪಿಆರ್‌ಸಿಆರ್‌ 02: | Kannada Prabha

ಸಾರಾಂಶ

ವಕ್ಫ್‌ ತಿದ್ದುಪಡಿ ಕಾನೂನು-2025ರ ವಿರುದ್ಧ ಎಲ್ಲಾ ಮಸ್ಜೀದ್‌ಗಳ ಮುಂದೆ ಮಾನವ ಸರಪಳಿ ನಿರ್ಮಿಸಿ ಮೌನ ಪ್ರತಿಭಟನೆ ನಡಸಲಾಯಿತು.

ಕನ್ನಡಪ್ರಭ ವಾರ್ತೆ ರಾಯಚೂರು

ವಕ್ಫ್‌ ತಿದ್ದುಪಡಿ ಕಾನೂನು-2025ರ ವಿರುದ್ಧ ಎಲ್ಲಾ ಮಸ್ಜೀದ್‌ಗಳ ಮುಂದೆ ಮಾನವ ಸರಪಳಿ ನಿರ್ಮಿಸಿ ಮೌನ ಪ್ರತಿಭಟನೆ ನಡಸಲಾಯಿತು.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನೀಡಿದ ಹೋರಾಟದ ಕರೆ ಹಿನ್ನೆಲೆಯಲ್ಲಿ ನಗರದ ಎಲ್ಲ ಮಸ್ಜೀದ್‌ಗಳ ಎದುರು ಪ್ರತಿಭಟಿಸಲಾಯಿತು. ಸರ್ಕಾರದ ವಕ್ಫ ಆಸ್ತಿಗಳನ್ನು ರಕ್ಷಣೆ ಮಾಡುವ ಬದಲಾಗಿ ಅಕ್ರಮ ಒತ್ತುವರಿದಾರರ ಪರವಾಗಿ ಕಾನೂನು ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ದೇಶದ ಎಲ್ಲಾ ಭಾಗಗಳಲ್ಲಿ ವಿವಿಧ ಹಂತದಲ್ಲಿ ಹೋರಾಟಗಳನ್ನು ಮಾಡಲಾಗುತ್ತಿದೆ ಎಂದು ಮುಖಂಡರು ತಿಳಿಸಿದರು.

ಒಂದು ಕಡೆ ಅಖಿಲಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕಾನೂನು ಹೋರಾಟ ನಡೆಸುತ್ತಿದೆ, ಸುಪ್ರೀಂಕೋರ್ಟ್ ನಲ್ಲಿ ದಾವೆ ಹಾಕಲಾಗಿದೆ, ಸುಪ್ರೀಂ ಕೋರ್ಟ್ ಸರಕಾರ ತಿದ್ದುಪಡಿ ಮಾಡಲಾದ ಅಂಶಗಳಲ್ಲಿ ಮೂರು ಅಂಶಗಳ ಜಾರಿಗೆ ತಡೆಯಾಜ್ಞೆ ನೀಡಿದೆ, ಇನ್ನುಳಿದ ಅಂಶಗಳ ಕುರಿತು ಚರ್ಚೆ ನಡೆಯುತ್ತಿದೆ.

ವಕ್ಫ್ ತಿದ್ದುಪಡಿ ಕಾಯ್ದೆ-2025 ಜಾರಿಯ ನಂತರ ದೇಶದಲ್ಲಿ ವಕ್ಫ್‌ ಆಸ್ತಿಗಳ ರಕ್ಷಣೆ ಕಷ್ಟವಾಗುತ್ತದೆ, ಕೇಂದ್ರ ಸರಕಾರ ವಕ್ಫ್ ಆಸ್ತಿಗಳನ್ನು ಬಳಸಿ ಅರಾಜಕತೆ ಸೃಷ್ಟಿಗೆ ದಾರಿ ಮಾಡಿಕೊಡಲು ಮುಂದಾಗಿರುವುದು ದುರದೃಷ್ಟಕರ ಎಂದು ಪ್ರತಿಭಟನಾನಿರತರು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಆಸೀಮುದ್ದೀನ ಅಕ್ತರ್, ಡಾ.ರಝಾಕ ಉಸ್ತಾದ, ಮೊಹಮ್ಮದ ಉಸ್ಮಾನ, ಏಜಾಜ್ ಅಲಿ, ಸೈಯದ ಅಮೀನುಲ್ ಹಸನ್, ಅಕ್ತರ್ ಹುಸೇನ, ಶೆಖ ಮಾಸೂಮ್, ಮೌಲಾನಾ ಜಮೀಲ್ ಸಿರಾಜಿ, ಜಹೀರುದ್ದೀನ ಸೇರಿದಂತೆ ಸಾವಿರಾರು ಜನ ಭಾಗವಹಿಸಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!