ಗೋಶಾಲೆಗೆ ಮೀಸಲಿಟ್ಟ ಜಾಗದಲ್ಲಿ ತ್ಯಾಜ್ಯ ಘಟಕಕ್ಕೆ ವಿರೋಧ

KannadaprabhaNewsNetwork |  
Published : Feb 26, 2026, 02:30 AM IST
ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ತಾಲೂಕಿನ ಕಣಸಗಿರಿ ಗ್ರಾಮದ ಸರ್ವೆ ನಂ. 95ರಲ್ಲಿ ರಾಜ್ಯ ಸರ್ಕಾರ ಗೋಶಾಲೆಗಾಗಿ ಮೀಸಲಿಟ್ಟಿದ್ದ ಜಾಗದಲ್ಲಿ ಚಿತ್ತಾಕುಲ ಗ್ರಾಪಂಯು ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ಮುಂದಾಗಿದೆ.

ಕಣಸಗಿರಿ ಗ್ರಾಮಸ್ಥರಿಂದ ಹೋರಾಟದ ಎಚ್ಚರಿಕೆ, ಜಿಲ್ಲಾಡಳಿತಕ್ಕೆ ಮನವಿಕನ್ನಡಪ್ರಭ ವಾರ್ತೆ ಕಾರವಾರ

ತಾಲೂಕಿನ ಕಣಸಗಿರಿ ಗ್ರಾಮದ ಸರ್ವೆ ನಂ. 95ರಲ್ಲಿ ರಾಜ್ಯ ಸರ್ಕಾರ ಗೋಶಾಲೆಗಾಗಿ ಮೀಸಲಿಟ್ಟಿದ್ದ ಜಾಗದಲ್ಲಿ ಚಿತ್ತಾಕುಲ ಗ್ರಾಪಂಯು ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ಮುಂದಾಗಿರುವುದನ್ನು ಖಂಡಿಸಿ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಬುಧವಾರ ಮನವಿ ಸಲ್ಲಿಸಿದರು. ಗೋಶಾಲೆಗೆ ಮೀಸಲಾದ ಪವಿತ್ರ ಜಾಗವನ್ನು ಕಸದ ತೊಟ್ಟಿಯನ್ನಾಗಿ ಮಾಡಬಾರದು ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸದಾಶಿವಗಡದಿಂದ ಕೇವಲ 2 ಕಿಮೀ ದೂರದಲ್ಲಿರುವ, ಕಾಳಿ ನದಿ ದಡದ ಮೇಲಿರುವ ಕಣಸಗಿರಿ ಗ್ರಾಮವು ಪರಿಸರ ಸೂಕ್ಷ್ಮ ಪ್ರದೇಶವಾಗಿದೆ. ಇಲ್ಲಿನ ಸರ್ವೆ ನಂ. 95ರ 10 ಎಕರೆ ಜಮೀನಿನಲ್ಲಿ ಗೋಶಾಲೆ ನಿರ್ಮಾಣವಾಗಲಿ ಎಂಬುದು ಗ್ರಾಮಸ್ಥರ ಆಶಯವಾಗಿತ್ತು. ಆದರೆ, ಇದೇ ಜಾಗದಲ್ಲಿ ಕಸದ ಘಟಕ ಸ್ಥಾಪಿಸಿದರೆ ಅಂತರ್ಜಲ ಕಲುಷಿತವಾಗುವ ಜೊತೆಗೆ ವಾಯುಮಾಲಿನ್ಯ ಉಂಟಾಗಿ, ಸುಮಾರು 300 ಮನೆಗಳಲ್ಲಿ ವಾಸಿಸುತ್ತಿರುವ 1500ಕ್ಕೂ ಹೆಚ್ಚು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಘನತ್ಯಾಜ್ಯ ನಿರ್ವಹಣಾ ನಿಯಮಗಳ ಪ್ರಕಾರ ವಸತಿ ಪ್ರದೇಶದಿಂದ ಕನಿಷ್ಠ 1000 ಮೀಟರ್ ದೂರದಲ್ಲಿ ಕಸದ ಸಂಗ್ರಹಣಾ ಸ್ಥಳವಿರಬೇಕು. ಆದರೆ, ಉದ್ದೇಶಿತ ಜಾಗದಿಂದ ಕೇವಲ 100 ಮೀಟರ್ ವ್ಯಾಪ್ತಿಯಲ್ಲೇ ಮನೆಗಳಿರುವುದರಿಂದ ಇದು ಕಾನೂನುಬಾಹಿರವಾಗಿದೆ. ಒಂದು ನಿರ್ದಿಷ್ಟ ಉದ್ದೇಶಕ್ಕಾಗಿ ಮೀಸಲಿಟ್ಟ ಜಮೀನನ್ನು ಬೇರೆ ಉದ್ದೇಶಕ್ಕೆ ಬಳಸಬಾರದು ಎಂಬ ನ್ಯಾಯಾಲಯದ ತೀರ್ಪುಗಳನ್ನು ಉಲ್ಲೇಖಿಸಿರುವ ಗ್ರಾಮಸ್ಥರು, ತಕ್ಷಣವೇ ಈ ಯೋಜನೆಯನ್ನು ಕೈಬಿಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಸಂದೀಪ ರಾಣೆ, ಆನಂದ ನಾಯ್ಕ, ಧೀರಜ ಸಾವಂತ, ದೀಪದಾಸ್ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಾಜಿ ಜಯಂತಿ ವೇಳೆ ಗಲಾಟೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ
118ನೇ ದಿನದಲ್ಲಿ ಕಾರ್ಖಾನೆ ಅನಿರ್ದಿಷ್ಟಾವಧಿ ಧರಣಿ