ಮೆಟ್ರೋ ಆಸ್ಪತ್ರೆಯಲ್ಲಿ ಆರ್‌ಬೈಟಲ್ಅ ಥೆರೆಕ್ಟಮಿ ಚಿಕಿತ್ಸೆ ಯಶಸ್ವಿ: ಡಾ.ಆಚಾರ್‌

KannadaprabhaNewsNetwork |  
Published : Oct 05, 2024, 01:31 AM IST
ಪೊಟೊ: 3ಎಸ್‌ಎಂಜಿಕೆಪಿ06ಶಿವಮೊಗ್ಗ ನಗರದ ಮೆಟ್ರೋ ಆಸ್ಪತ್ರೆಯಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮೆಟ್ರೋ ಆಸ್ಪತ್ರೆಯ ಅಧ್ಯಕ್ಷ ಡಾ. ಪಿ.ಲಕ್ಷ್ಮಿನಾರಾಯಣ ಆಚಾರ್ ಮಾತನಾಡಿದರು. | Kannada Prabha

ಸಾರಾಂಶ

ಮೆಟ್ರೋ ಆಸ್ಪತ್ರೆಯಲ್ಲಿ 76 ವರ್ಷದ ವಯೋವೃದ್ಧಗೆ ಡಾ.ಟಿ.ಎಚ್‌.ಶಿವಶಂಕರ್ ನೇತೃತ್ವದ ತಂಡದಿಂದ ‘ಆರ್‌ಬೈಟಲ್ ಅಥೆರೆಕ್ಟಮಿ’ ಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಮಧ್ಯಭಾಗ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಶಿವಮೊಗ್ಗ ನಗರದ ಮೆಟ್ರೋ ಆಸ್ಪತ್ರೆಯಲ್ಲಿ ರೋಗಿ ಒಬ್ಬರ ಹೃದಯಕ್ಕೆ ‘ಆರ್‌ಬೈಟಲ್ ಅಥೆರೆಕ್ಟಮಿ’ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಮೆಟ್ರೋ ಆಸ್ಪತ್ರೆಯ ಅಧ್ಯಕ್ಷ ಡಾ.ಪಿ.ಲಕ್ಷ್ಮಿನಾರಾಯಣ ಆಚಾರ್ ತಿಳಿಸಿದರು.

ನಗರದ ಮೆಟ್ರೋ ಆಸ್ಪತ್ರೆಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಆಸ್ಪತ್ರೆಯಲ್ಲಿ ‘ಆರ್‌ಬೈಟಲ್ ಅಥೆರೆಕ್ಟಮಿ’ ಚಿಕಿತ್ಸೆಗೆ ಒಳ ಗಾದ ಶಿವಮೊಗ್ಗ ನಗರದ 76 ವರ್ಷದ ಚಂದ್ರಪ್ಪಶೆಟ್ಟಿ ಅವರಿಗೆ ಆಸ್ಪತ್ರೆಯ ಹೃದಯರೋಗ ತಜ್ಞರಾದ ಡಾ.ಟಿ.ಎಚ್‌.ಶಿವಶಂಕರ್ ನೇತೃತ್ವದ ತಂಡ ಯಶಸ್ವಿ ಯಾಗಿ ಚಿಕಿತ್ಸೆಯನ್ನು ನಡೆಸಿದೆ ಎಂದರು.

ಮೆಟ್ರೋ ಆಸ್ಪತ್ರೆಯ ಹೃದಯ ರೋಗ ತಜ್ಞ ಡಾ.ಶಿವಶಂಕರ್ ಮಾತನಾಡಿ, ಹೃದಯದ ರಕ್ತನಾಳದಲ್ಲಿ ತುಂಬ ಕ್ಯಾಲ್ಸಿಯಮ್ ಇದ್ದರೆ. ಈ ಹಿಂದೆ ಓಪನ್ ಹಾರ್ಟ್ ಸರ್ಜರಿ ಮಾಡುತ್ತಿದ್ದೆವು. ಇದು ರಕ್ತನಾಳದ ಕ್ಯಾಲ್ಸಿಯಮ್ ಅನ್ನು ಪುಡಿ ಮಾಡಿ ಸ್ಟಂಟ್ ಹಾಕುವ ವಿಧಾನವಾಗಿದೆ. ಈ ವಿಧಾನದಿಂದ ರಕ್ತನಾಳಕ್ಕೆ ಅಪಾಯ ಕಡಿಮೆ. ’ಆರ್‌ಬೈಟಲ್ ಅಥೆರೆಕ್ಟಮಿ’ ಡೈಮಂಡ್ ಬ್ಲಾಕ್ 360 ಸಾಧನವನ್ನು ಉಪಯೋಗಿಸಿ ರಕ್ತನಾಳದಲ್ಲಿರುವ ಕ್ಯಾಲ್ಸಿಯಮ್ ಫ್ಯಾಟ್ ತೆಗೆದು ರಕ್ತನಾಳವನ್ನು ಶುದ್ಧೀಕರಿಸಲಾಯಿತು, ನಂತರ ಸ್ಟೆಂಟ್ ಅಳವಡಿಸಲಾಗಿದೆ ಎಂದು ತಿಳಿಸಿದರು.ಹೃದಯಕ್ಕೆ ’ಆರ್‌ಬೈಟಲ್ ಅಥೆರೆಕ್ಟಮಿ’ ಚಿಕಿತ್ಸೆಯನ್ನು ಮಾಡಲು ಡೈಮಂಡ್ ಬ್ಲಾಕ್ 360 ಸಾಧನಕ್ಕೆ ಸುಮಾರು 2 ಲಕ್ಷ ವೆಚ್ಚ ಆಗುತ್ತದೆ. ಸಾಮಾನ್ಯವಾಗಿ ಎಂಜಿಯೋ ಪ್ಲಾಸ್ಟಿ ಚಿಕಿತ್ಸೆ ಮಾಡುವುದಕ್ಕಿಂತ ಸುಮಾರು 1 ಗಂಟೆ ಹೆಚ್ಚಾಗಬಹುದು. ಇದರಿಂದ ರೋಗಿಗೆ ಯಾವುದೇ ತೊಂದರೆಯಾಗುವುದಿಲ್ಲ. ಶಸ್ತ್ರ ಚಿಕಿತ್ಸೆ ಆದ ನಂತರ 3 ದಿನದಲ್ಲಿ ರೋಗಿಯನ್ನು ಮನೆಗೆ ಕಳುಹಿಸಲಾಗುತ್ತದೆ ಎಂದರು.

ಆರ್‌ಬೈಟಲ್ ಅಥೆರೆಕ್ಟಮಿ ಚಿಕಿತ್ಸೆಯಿಂದ ಗುಣಮುಖರಾದ ನಿವೃತ್ತ ಪ್ರಾಂಶುಪಾಲ ಚಂದ್ರಪ್ಪ ಶೆಟ್ಟಿ ಮಾತನಾಡಿ, ಡಾ.ಶಿವಶಂಕರ್ ಅವರು ಭರವಸೆ ನೀಡಿ ಸೆ.28 ರಂದು ಬೆಂಗಳೂರಿನಿಂದ ತಜ್ಞರನ್ನು ಕರೆಸಿ ಯಾವುದೇ ರೀತಿಯ ತೊಂದರೆ ಆಗದಂತೆ ಮಾಡಿದ್ದಾರೆ. ಹೆಚ್ಚು ನಿಗಾ ವಹಿಸಿ ಸತತವಾಗಿ ಎರಡು ಮುಕ್ಕಾಲು ಗಂಟೆ ಚಿಕಿತ್ಸೆ ಮಾಡಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಡಾ.ಟಿ.ಎಸ್.ತೇಜಸ್ವಿ, ಡಾ. ಪ್ರವೀಣ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌