- ಪ್ರಾಥಮಿಕ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿಕೆ
ಪ್ರಸ್ತುತ ವರ್ಷದಿಂದ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡಲಾಗುತ್ತಿದ್ದು, ಅದನ್ನು ಶೌಚಾಲಯದ ಶುಚಿತ್ವ ಹಾಗೂ ನಿರ್ವಹಣೆಗೆ ಬಳಸಬೇಕೆಂದು ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚೆಗೆ ರಾಜ್ಯದಲ್ಲಿ ಮಕ್ಕಳು ಶೌಚಾಲಯ ಶುಚಿಗೊಳಿಸಿದ ಮೂರು ಪ್ರಕರಣಗಳು ನಡೆದಿವೆ. ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ. ಇದರ ನಿಯಂತ್ರಣಕ್ಕೆ ಎಸ್ಡಿಎಂಸಿ ಮತ್ತು ಶಾಲೆ ಜಂಟಿಯಾಗಿ ಕಾರ್ಯನಿರ್ವಹಿಸುವ ಕುರಿತು ಹೊಸ ಆದೇಶ ಹೊರಡಿಸಲಾಗುವುದು. ಯಾವುದೇ ಕಾರಣಕ್ಕೂ ಮಕ್ಕಳ ಕೈಯಲ್ಲಿ ಶೌಚಾಲಯ ಶುಚಿಗೊಳಿಸಬಾರದು. ಅದಕ್ಕೆ ಸಂಬಂಧಿಸಿ ಪ್ರಕರಣಗಳನ್ನು ಸಹ ದಾಖಲಿಸಿಕೊಳ್ಳುತ್ತಿದ್ದೇವೆ’ ಎಂದು ತಿಳಿಸಿದರು.ಶಿಕ್ಷಕರ ಕೊರತೆ
ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ಭ್ರಷ್ಟಾಚಾರದ ಗಂಭೀರ ಆರೋಪಗಳಿದ್ದಾಗ, ತನಿಖೆ ನಡೆಸಿ ಹೊರಗೆ ತರುವುದು ಒಳ್ಳೆಯದು. ಆದರೆ, ಅದು ಸರ್ಕಾರಕ್ಕೆ ಬಿಟ್ಟ ವಿಚಾರ’ ಎಂದರು.
ಸೆಟ್ಲ್ಮೆಂಟ್ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿರುವ ಕುರಿತು ಪ್ರತಿಕ್ರಿಯಿಸಿ, ನನ್ನ ಮೇಲೆ ಬಂದಿರುವುದು ಚೆಕ್ ಬೌನ್ಸ್ ಪ್ರಕರಣವಲ್ಲ. ನಾವೇ ಕೋರ್ಟ್ ನಲ್ಲಿ ಸೆಟ್ಲ್ಮೆಂಟ್ ಮಾಡಿಕೊಂಡಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಕಾರಜೋಳ ಅವರು ಚುನಾವಣೆಯಲ್ಲಿ ಏಕೆ ಸೋತರಂತೆ, ಈಗೇಕೆ ಅವರು ಈ ಸ್ಥಿತಿಯಲ್ಲಿದ್ದಾರೆ ಎನ್ನುವುದಕ್ಕೆ ಉತ್ತರ ಹುಡುಕಲಿ ಆಗ ಎಲ್ಲವೂ ಗೊತ್ತಾಗಲಿದೆ ಎಂದರು.