ನವಲಗುಂದ:
ಪಟ್ಟಣದ ವೀರಶೈವ ಲಿಂಗಾಯತ ಸಮುದಾಯದ ಭವನದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ಗ್ರಾಮಮಟ್ಟದಲ್ಲೂ ಸಮಾಜ ಬಾಂಧವರು ಸಂಘಟಿತರಾಗಬೇಕು. ಈ ಮೂಲಕ ಸಮಾಜದ ಶ್ರೇಯೋಭಿವೃದ್ಧಿಗೆ ಕಟಿಬದ್ಧರಾಗಬೇಕು ಎಂದು ಸಲಹೆ ನೀಡಿದರು.
ಸೆ. 22ರಂದು ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ವಕೀಲರ ಮುಖಾಂತರ ಕರ ಸಂದೇಶ ಹೋರಾಟ ಮಾಡಲಾಗುತ್ತಿದೆ. ಸಮಾಜದ ವಿದ್ಯಾರ್ಥಿಗಳ ಮೂಲಕ ಮೀಸಲಾತಿ ಪತ್ರ ಚಳವಳಿ ನಡೆಸಲಾಗುವುದು ಎಂದು ಹೇಳಿದರು.ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಮಾತನಾಡಿ, ಪಂಚಮಸಾಲಿ ಪಂಗಡ ಬೆಳಕಿಗೆ ಬಂದಿದ್ದು ಸಂಘಟನೆಯಿಂದ. ಸಮಾಜ ಸಂಘಟನೆಗೆ ಯಾವುದೇ ಪಕ್ಷವಿಲ್ಲ. ಇಲ್ಲಿ ಸಮಾಜ ಮುಖ್ಯ. ಆರ್ಥಿಕ, ಔದ್ಯೋಗಿಕವಾಗಿ ಸದೃಢವಾಗಿರುವ ನಮ್ಮವರು ಸಮಾಜದ ಬಡ ವಿದ್ಯಾರ್ಥಿಗಳಿಗೆ ಸಹಾಯ ಹಸ್ತರಾಗಬೇಕು. ಸರ್ಕಾರದ ಉನ್ನತ ಹುದ್ದೆ ಪಡೆಯಲು ಸಹಕರಿಸಬೇಕು ಎಂದರು.
ಸಮಾಜದ ಮುಖಂಡರಾದ ವಿಜಯ ಕುಲಕರ್ಣಿ, ಬಾಬುಗೌಡ ಪಾಟೀಲ ಮಾತನಾಡಿದರು. ಶಂಕರಗೌಡ ಬಾಳನಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಾಜಿ ಶಾಸಕ ಆರ್.ಬಿ. ಶಿರಿಯಣ್ಣವರ, ಸುರೇಶ ಕಮ್ಮಾರ, ಸದುಗೌಡ ಪಾಟೀಲ, ನಿಂಗಣ್ಣ ಕರಿಕಟ್ಟಿ, ವಿಜಯಲಕ್ಷ್ಮಿ ಪಾಟೀಲ, ಮಲ್ಲಿಕಾರ್ಜುನ ಹಿರೇಕೊಪ್ಪ, ಎಲ್.ಬಿ. ಪಾಟೀಲ, ರಾಮನಗೌಡ ಪಾಟೀಲ, ಮಲ್ಲಪ್ಪ ಕಿರೇಸೂರ, ಕೆ.ಬಿ.ಮದ್ನೂರ ಉಪಸ್ಥಿತರಿದ್ದರು.