ಆಂದೋಲನದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆಕನ್ನಡಪ್ರಭ ವಾರ್ತೆ ಗದಗ
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಪ್ರಜಾಸೇವಾ ಆಂದೋಲನದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಗಳ ನೇರ ಪ್ರಸಾರ (ಲೈವ್ ಸ್ಟ್ರೀಮಿಂಗ್) ವ್ಯವಸ್ಥೆಯನ್ನು ಮುಖ್ಯಮಂತ್ರಿಗಳ ಕಚೇರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ನಿರ್ದೇಶಿಸಿದರು.
ಪ್ರತಿ ಶನಿವಾರ ಬೆಳಗ್ಗೆ 10ರಿಂದ ಸಂಜೆಯವರೆಗೆ ಈ ಸಭೆಗಳು ನಡೆಯಲಿವೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳ 1ನೇ ಮತ್ತು 3 ನೇ ಶನಿವಾರ ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ 2ನೇ ಮತ್ತು 4ನೇ ಶನಿವಾರ ಸಭೆಗಳು ಜರುಗಲಿವೆ. ಸಾರ್ವಜನಿಕರು ಸಭೆಗೆ ಬರುವ ಮುನ್ನವೇ ಅರ್ಜಿ ಭರ್ತಿ ಮಾಡಿಕೊಂಡು ಬರಲು ಅನುಕೂಲವಾಗುವಂತೆ ನಿಗದಿತ ನಮೂನೆಗಳನ್ನು ಮನೆ-ಮನೆಗೆ ತಲುಪಿಸಬೇಕು. ಸಾರ್ವಜನಿಕರು ಗ್ರಾಮ ಒನ್ ಕೇಂದ್ರ, ಸಹಾಯವಾಣಿ (1902) ಹಾಗೂ ipgrs.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಸಭೆಯ ಸ್ಥಳದಲ್ಲೂ ಗ್ರಾಮ ಒನ್ ಮಳಿಗೆ ಸ್ಥಾಪಿಸಲಾಗುವುದು. ಪಿಂಚಣಿ, ಪಹಣಿ, ವಸತಿ, ಪಡಿತರ ಚೀಟಿ, ಸಾರಿಗೆ, ರಸ್ತೆ, ಕುಡಿಯುವ ನೀರು, ಶಾಲೆ, ಅಂಗನವಾಡಿ ಅಭಿವೃದ್ಧಿ, ಪೊಲೀಸ್ ಸೇವೆ, ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದರು.ಸ್ವೀಕೃತ ಅರ್ಜಿಗಳನ್ನು ಪ್ರತಿ ಬುಧವಾರ ಮೂರು ಹಂತಗಳಲ್ಲಿ ಪರಿಶೀಲಿಸಲಾಗುವುದು. ಬೆಳಗ್ಗೆ 9 ರಿಂದ 11ರವರೆಗೆ ತಾಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಎಸಿ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ. 15 ದಿನಕ್ಕೊಮ್ಮೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಲಿದ್ದು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದರು.