ಸಮಾಜದ ಅಭಿವೃದ್ಧಿಗೆ ಸಂಘಟಿತರಾಗಿ

KannadaprabhaNewsNetwork |  
Published : May 30, 2026, 02:15 AM IST
ಪೋಟೊ29ಕೆಎಸಟಿ2: ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ನಡೆದ ಬಣಜಿಗ ಸಮಾಜದ ಸಭೆಯಲ್ಲಿ ಬಣಜಿಗ ಸಮಾಜದ ತಾಲೂಕಾಧ್ಯಕ್ಷ ಶಶಿಧರ ಕವಲಿ ಮಾತನಾಡಿದರು. | Kannada Prabha

ಸಾರಾಂಶ

ಶಿಕ್ಷಣ,ಉದ್ಯೋಗ, ವ್ಯಾಪಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಬಣಜಿಗ ಸಮಾಜ ಮತ್ತಷ್ಟು ಪ್ರಗತಿ ಸಾಧಿಸಲು ಪರಸ್ಪರ ಸಹಕಾರ ಅಗತ್ಯ

ಕುಷ್ಟಗಿ: ಬಣಜಿಗ ಸಮಾಜ ರಾಜ್ಯಕ್ಕೆ ಅನೇಕ ಜನ ಮುಖ್ಯಮಂತ್ರಿಗಳನ್ನು ನೀಡಿದ ಬುದ್ಧಿವಂತ ಸಮಾಜವಾಗಿದ್ದು, ನಮ್ಮ ಸಮಾಜದಲ್ಲಿ ಸಂಘಟನೆ ಕೊರತೆ ಕಾಡುತ್ತಿದ್ದು ಪಕ್ಷಾತೀತವಾಗಿ ಸಮಾಜದ ಅಭಿವೃದ್ಧಿಗೆ ಎಲ್ಲರೂ ಒಂದಾಗಿ ಸಂಘಟಿತರಾಗಬೇಕು ಎಂದು ಬಣಜಿಗ ಸಮಾಜದ ತಾಲೂಕಾಧ್ಯಕ್ಷ ಶಶಿಧರ ಕವಲಿ ಹೇಳಿದರು.

ತಾಲೂಕಿನ ಕೇಸೂರು ಗ್ರಾಮದಲ್ಲಿ ಬಣಜಿಗ ಸಮಾಜದಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಶಿಕ್ಷಣ,ಉದ್ಯೋಗ, ವ್ಯಾಪಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಬಣಜಿಗ ಸಮಾಜ ಮತ್ತಷ್ಟು ಪ್ರಗತಿ ಸಾಧಿಸಲು ಪರಸ್ಪರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

ಯುವಕರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು.ಸಮಾಜದ ಪರಂಪರೆ, ಸಂಸ್ಕೃತಿ ಹಾಗೂ ಏಕತೆ ಉಳಿಸಿಕೊಂಡು ಮುಂದಿನ ಪೀಳಿಗೆಗೆ ಉತ್ತಮ ಮಾರ್ಗದರ್ಶನ ನೀಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಸಮಾಜದ ಬಡ ಹಾಗೂ ಹಿಂದುಳಿದ ಕುಟುಂಬಗಳಿಗೆ ಸಹಾಯ ಸಹಕಾರ ಮಾಡುವ ನಿಟ್ಟಿನಲ್ಲಿ ಸಂಘಟನೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಸಮಾಜದ ಎಲ್ಲ ವರ್ಗದ ಜನರು ಒಗ್ಗಟ್ಟಿನಿಂದ ಇದ್ದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಮುಂದಿನ ದಿನಗಳಲ್ಲಿ ಬಣಜಿಗ ಸಮಾಜದ ಜನಗಣತಿ ಮಾಡಲಾಗುತ್ತಿದ್ದು, ಎಲ್ಲ ಕುಟುಂಬಸ್ಥರು ಸರಿಯಾದ ಮಾಹಿತಿ ನೀಡುವ ಮೂಲಕ ಸಂಘದ ಸದಸ್ಯತ್ವ ಪಡೆಯಬೇಕು ಎಂದ ಅವರು, ಕುಷ್ಟಗಿ ತಾಲೂಕು ಕೇಂದ್ರದಲ್ಲಿ ಬಣಜಿಗ ಸಮಾಜದ ಸಭೆ ಸಮಾರಂಭಗಳಿಗಾಗಿ ಸಮುದಾಯ ಭವನದ ಅಗತ್ಯವಿದ್ದು, ಸಮಾಜದ ಸಹಕಾರದೊಂದಿಗೆ ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗುತ್ತೇನೆ ಇನ್ನೂ ಕೆಲ ದಿನಗಳಲ್ಲಿಯೆ ಬಣಜಿಗ ಸಮಾಜದ ಸಾಧಕರಿಗೆ ಸನ್ಮಾನ ಸಮಾರಂಭ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

ರಾಜಶೇಖರ ಹೊಕ್ರಾಣಿ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಬಣಜಿಗ ಸಮಾಜದಿಂದ ಸಮಾವೇಶದಂತಹ ಕಾರ್ಯಕ್ರಮ ಮಾಡಿರುವದಿಲ್ಲ, ನೂತನ ಅಧ್ಯಕ್ಷರು ಸಂಘಟನೆ ಜತೆಗೆ ಸಮಾಜದ ಸಮಾವೇಶ ಮಾಡಬೇಕು ಎಂದು ತಿಳಿಸಿದರು.

ವಿಷ್ಣು ಅಂಗಡಿ ಮಾತನಾಡಿ, ನಮ್ಮ ಸಮಾಜದಲ್ಲಿರುವ ಹಿರಿಯರು ಯುವಕರ ಅಭಿವೃದ್ಧಿಗೆ ಶ್ರಮಿಸಬೇಕಿದೆ, ಯುವಕರನ್ನು ಬೆಳೆಸುವ ಕಾರ್ಯ ಮಾಡಬೇಕಿದೆ ಅಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕುಷ್ಟಗಿ ತಾಲೂಕು ಬಣಜಿಗ ಸಮಾಜದ ಪ್ರಧಾನ ಕಾರ್ಯದರ್ಶಿ ರವೀಂದ್ರ ಪಾಟೀಲ, ವಿರೇಶ ಕರಡಿ, ರಾಚಪ್ಪ ಮಾಟಲದಿನ್ನಿ, ಈರಣ್ಣ ಕಲಕಬಂಡಿ, ಬಸವರಾಜ್‌ ಸೂಡಿ ಸೇರಿದಂತೆ ಕೇಸೂರು, ದೋಟಿಹಾಳ, ಹೆಸರೂರು, ಶಿರಗುಂಪಿ ಗ್ರಾಮದ ಬಣಜಿಗ ಸಮಾಜದ ಮುಖಂಡರು ಹಾಗೂ ಯುವಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಟೆ ಆಂಜನೇಯ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರ್ಪಡೆ ಬೇಡ
ಭೂ ಸಂತ್ರಸ್ತ ರೈತರಿಗೆ ನ್ಯಾಯ ಸಿಗುವವರೆಗೂ ಹೋರಾಟ ಬಿಡಲ್ಲ: ಮಾಳಮ್ಮ