ಕನ್ನಡಪ್ರಭ ವಾರ್ತೆ ಮದ್ದೂರು
ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಶಂಕರ್ ಕಣ್ಣಿನ ಆಸ್ಪತ್ರೆ, ಸುಮುಖ ಸೇವಾ ಟ್ರಸ್ಟ್ನಿಂದ ಶಿಬಿರ ನಡೆಯಲಿದೆ. ವಿವಿಧ ಸಂಘ ಸಂಸ್ಥೆಗಳ ಬೆಂಬಲದೊಂದಿಗೆ ಸಮುಖ ಸೇವಾ ಟ್ರಸ್ಟ್ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಕೊಂಡು ಕೆಲಸ ಮಾಡುತ್ತಿದೆ. ಈ ಬಾರಿ ಕುಂದನಕುಪ್ಪೆ ಗ್ರಾಮದ ಶ್ರೀನಂಜುಂಡೇಶ್ವರ ಕಾಂಪ್ಲೆಕ್ಸ್ ಆವರಣದಲ್ಲಿ ನೇತ್ರ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.
ಬೆಂಗಳೂರಿನ ಶಂಕರ್ ಕಣ್ಣಿನ ಆಸ್ಪತ್ರೆ ತಜ್ಞ ವೈದ್ಯರ ತಂಡ ಶಿಬಿರದಲ್ಲಿ ಅಂದತ್ವ ಉಳ್ಳ ಜನರಿಗೆ ಸ್ಥಳದಲ್ಲಿಯೇ ತಪಾಸಣೆ ನಡೆಸಿದ ನಂತರ ಶಂಕರ್ ಕಣ್ಣಿನ ಆಸ್ಪತ್ರೆಗೆ ಕರೆದೊಯ್ದು ಉಚಿತವಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಸಿ.ಕೆ.ಸತೀಶ್, ಪೊಲೀಸ್ ಸಿದ್ದರಾಜು ಹಾಗೂ ಪದಾಧಿಕಾರಿಗಳು ಇದ್ದರು.ಜು.೨೦ಕ್ಕೆ ಜಿಲ್ಲಾ ಮಟ್ಟದ ಗಾಳಿಪಟ ಹಾರಾಟ ಸ್ಪರ್ಧೆಮಂಡ್ಯ:ಭಾರತ ಸೇವಾ ದಳ ಜಿಲ್ಲಾ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸೇಂಟ್ ಜಾನ್ ಅಂಬುಲೆನ್ಸ್ (ಇಂಡಿಯಾ) ಮತ್ತು ಚುಟುಕು ಸಾಹಿತ್ಯ ಪರಿಷತ್ತು ಇವರ ಸಂಯುಕ್ತಾಶ್ರಯದಲ್ಲಿ ೨೭ನೇ ವರ್ಷದ ಜಿಲ್ಲಾ ಮಟ್ಟದ ಗಾಳಿಪಟ ಹಾರಾಟ ಸ್ಪರ್ಧೆಯನ್ನು ಜು.೨೦ರಂದು ಬೆಳಗ್ಗೆ ೧೦.೩೦ಕ್ಕೆ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಪ್ರತಿಯೊಂದು ವಿಭಾಗಕ್ಕೂ ೩ ಬಹುಮಾನಗಳನ್ನು ವಿಶೇಷ ಪಟಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು. ಅನೇಕ ಸಮಾಧಾನಕರ ಬಹುಮಾನಗಳನ್ನು ಕೊಡಲಾಗುತ್ತದೆ ಎಂದು ಹೇಳಿದ್ದಾರೆ.ಹೆಚ್ಚಿನ ವಿವರಗಳಿಗೆ ಜಿ.ವಿ.ನಾಗರಾಜು, ಕಾರ್ಯದರ್ಶಿ, ಮೊ.:೦೪೪೮೧೦೬೫೬೧, ಸಿ.ಎಸ್.ಗಣೇಶ್, ಭಾರತ ಸೇವಾದಳ, ಜಿಲ್ಲಾ ಸಂಘಟಕರು ಮೊ: ೭೮೯೯೩೭೯೧೧೪ ಇವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಮಳವಳ್ಳಿ: ಪಟ್ಟಣದ ಕನಕಪುರ ರಸ್ತೆಯ ಸಿದ್ಧಿ ವಿನಾಯಕ ಹಾಗೂ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಜು.19ರಿಂದ ಆರಾಧ್ಯ ಜನಾಂಗದವರಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಆರಾಧ್ಯ ಜೋತಿಷ್ಯ ಮತ್ತು ಪುರೋಹಿತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಅಂಚೆದೊಡ್ಡಿ ಎಸ್.ನಾಗಭೂಷಣಾರಾಧ್ಯ ತಿಳಿಸಿದ್ದಾರೆ.ಜು.19ರಿಂದ ಪ್ರತಿ ಶನಿವಾರ ನಡೆಯಲಿರುವ ಕಾರ್ಯಾಗಾರದಲ್ಲಿ ಆರಾಧ್ಯ ಜನಾಂಗದವರಿಗೆ ಜೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ತಂಬೂಲಶಾಸ್ತ್ರ, ಪ್ರಶ್ನಶಾಸ್ತ್ರದ ತರಬೇತಿ ನೀಡಲಾಗುವುದು. ಕಾರ್ಯಾಗಾರವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.