ಕನ್ನಡಪ್ರಭ ವಾರ್ತೆ ಹಾಸನ
ನಗರದಲ್ಲಿ ಶನಿವಾರ ಮಾಧ್ಯಮದೊಂದಿಗೆ ಮಾತನಾಡಿ, ಯಾವುದೇ ಸಮಾಜಕ್ಕೂ ಅನ್ಯಾಯ ಮಾಡಲ್ಲ, ಯಾವುದೇ ಸಮುದಾಯವನ್ನು ಹೊಡೆದಾಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿಯವರು ರಾಜ್ಯ ಸರ್ಕಾರ ಬೀಳಿಸಲು ಹುನ್ನಾರ ಮಾಡಿದ್ದಾರೆ. ನೀವು ಹುಷಾರಾಗಿರಿ ಎಂಬ ಎಐಸಿಸಿ ಅಧ್ಯಕ್ಷರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ವಿಪಕ್ಷಗಳು ಆ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ. ಅವರ ಕೆಲಸವೇ ಅದು, ನಾವು ಜನ ಸೇವೆ ಮಾಡಲು ಅಧಿಕಾರ ಬಯಸುತ್ತೇವೆ, ಆದರೆ ಅವರು ದುರಾಸೆ, ಆದರೂ ನಾವು ಎಚ್ಚರಿಕೆಯಿಂದ ಇದ್ದೇವೆ ಎಂದರು. ನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಯಾವುದೇ ರೀತಿಯಲ್ಲೂ ಒಡಕಿಲ್ಲ ಎಂದರು.
ಸಿಇಟಿ ಪರೀಕ್ಷೆ ಬರೆಯುವಾಗ ಜನಿವಾರ ಬಿಚ್ಚಿಸಿದ ಪ್ರಕರಣವನ್ನು ಖಂಡಿಸಿದ ಸಂಸದರು, ಇದು ನಿಜಕ್ಕೂ ಅಪರಾಧ, ನಡೆಯಬಾರದಿತ್ತು. ಈ ಬಗ್ಗೆ ಪೂರ್ಣ ವಿಚಾರ ತಿಳಿದುಕೊಂಡು ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದರು.ಬೇಲೂರಿನಲ್ಲಿ ಪುರಸಭೆ ಅಧ್ಯಕ್ಷರ ವಿರುದ್ಧ ಭ್ರಷ್ಟಾಚಾರ ಆರೋಪ, ಪ್ರತಿಭಟನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಅದು ಎಲ್ಲ ಕಡೆಯಲ್ಲೂ ಇದ್ದೇ ಇರುತ್ತದೆ. ಬಿ.ಶಿವರಾಂ ಅವರು ಅಧ್ಯಕ್ಷರ ವಿರುದ್ಧ ಆಡಿರುವ ಮತು ನನ್ನ ಗಮನಕ್ಕೆ ಬಂದಿಲ್ಲ. ಈ ಕುರಿತು ನಮ್ಮೆಲ್ಲ ಸದಸ್ಯರ ಜೊತೆ ಸಭೆ ನಡೆಸಿ ಒಮ್ಮತದ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ಎತ್ತಿನಹೊಳೆ ಯೋಜನೆ ವಿಳಂಬದ ಬಗ್ಗೆ ಶೀಘ್ರವೇ ವೈಮಾನಿಕ ಸಮೀಕ್ಷೆ ನಡೆಯಲಿದೆ. ಎಲ್ಲೆಲ್ಲಿ ಕೆಲಸ ಆಗಿದೆ, ಎಲ್ಲೆಲ್ಲಿ ಅಡೆತಡೆಯಾಗಿದೆ ಎಂಬುದನ್ನು ಪರಿಶೀಲಿಸಿ ಶೀಘ್ರವೇ ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳಲಾಗುವುದು, ಕೆಲವು ಕಡೆ ಭೂಸ್ವಾಧೀನಕ್ಕೆ ಆಗಿರುವ ತಡೆ ಸಮಸ್ಯೆಯೂ ನಿವಾರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.