ಸರ್ಕಾರಿ ಶಾಲೆಗಳನ್ನು ಉಳಿಸುವುದೇ ನಮ್ಮ ಉದ್ದೇಶ

KannadaprabhaNewsNetwork |  
Published : Jun 17, 2025, 12:24 AM ISTUpdated : Jun 17, 2025, 12:25 AM IST
ಮಾಗಡಿ ಪಟ್ಟಣದ ಅಂಬಣ್ಣನ ಪೇಟೆ ಸರ್ಕಾರಿ ಶಾಲೆಯಲ್ಲಿ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಕಲಿಕಾ ಸಾಮಗ್ರಿ ವಿತರಣೆಯನ್ನು ಟ್ರಸ್ಟ್ ನ ಅಧ್ಯಕ್ಷ ಕಿರಣ್ ಸಾಗರ್ ವಿತರಣೆ ಮಾಡಿದರು. | Kannada Prabha

ಸಾರಾಂಶ

ಮಾಗಡಿ: ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಆದರ್ಶದೊಂದಿಗೆ ಯುವ ಬೆಂಗಳೂರು ಟ್ರಸ್ಟ್ ಗ್ರಾಮೀಣ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಉಚಿತ ಕಲಿಕಾ ಸಾಮಗ್ರಿ ವಿತರಿಸುತ್ತಿದೆ ಎಂದು ಯುವ ಬೆಂಗಳೂರು ಟ್ರಸ್ಟ್‌ ಸಂಸ್ಥಾಪಕ ಅಧ್ಯಕ್ಷ ಕಿರಣ್ ಸಾಗರ್ ಹೇಳಿದರು.

ಮಾಗಡಿ: ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಆದರ್ಶದೊಂದಿಗೆ ಯುವ ಬೆಂಗಳೂರು ಟ್ರಸ್ಟ್ ಗ್ರಾಮೀಣ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಉಚಿತ ಕಲಿಕಾ ಸಾಮಗ್ರಿ ವಿತರಿಸುತ್ತಿದೆ ಎಂದು ಯುವ ಬೆಂಗಳೂರು ಟ್ರಸ್ಟ್‌ ಸಂಸ್ಥಾಪಕ ಅಧ್ಯಕ್ಷ ಕಿರಣ್ ಸಾಗರ್ ಹೇಳಿದರು.

ಪಟ್ಟಣದ ಹೊಂಬಾಳಮ್ಮನಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕಲಿಕಾ ಸಾಮಗ್ರಿ ವಿತರಿಸಿ ಮಾತನಾಡಿದ ಅವರು, 2008ರಲ್ಲಿ ತಾಲೂಕಿನಲ್ಲಿ ಇದೇ ಶಾಲೆಯಿಂದ ಆರಂಭವಾದ ಈ ಶೈಕ್ಷಣಿಕ ಚಟುವಟಿಕೆ 356ಕ್ಕೂ ಹೆಚ್ಚು ಶಾಲೆಗಳಿಗೆ ಬ್ಯಾಗ್, ಸ್ವೆಟರ್, ಕ್ರೀಡಾ ಸಾಮಗ್ರಿ ಸೇರಿದಂತೆ ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಯುವ ಬೆಂಗಳೂರು ಟ್ರಸ್ಟ್ ನೀಡುತ್ತಿದೆ. ರಾಜ್ಯಾದ್ಯಂತ 8 ಸಾವಿರಕ್ಕೂ ಹೆಚ್ಚು ಶಾಲೆಗಳಿಗೆ ಈ ಸೌಲಭ್ಯ ನೀಡಲಾಗುತ್ತಿದೆ. ಟ್ರಸ್ಟ್‌ನ 15 ಸಾವಿರಕ್ಕೂ ಹೆಚ್ಚು ಸ್ವಯಂಸೇವಕರ ದುಡಿಮೆ ಹಣದಿಂದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವುದೇ ಪ್ರಮುಖ ಉದ್ದೇಶ ಎಂದರು.

ಯುವ ಬೆಂಗಳೂರು ಟ್ರಸ್ಟ್ ಉಪಾಧ್ಯಕ್ಷ ಸುನೀಲ್ ಮಾತನಾಡಿ, ಸರ್ಕಾರಿ ಶಾಲೆಗಳು ಮುಂದಿನ ದಿನಗಳಲ್ಲಿ ಪೋಷಕರು ಮಕ್ಕಳನ್ನು ಸೇರಿಸಲು ಕ್ಯೂನಲ್ಲಿ ಬರುವಂತಹ ವಾತಾವರಣ ಕಲ್ಪಿಸಬೇಕು. ಖಾಸಗಿ ಶಾಲೆಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗೂ ಮೂಲ ಸೌಲಭ್ಯಗಳು ಕಲ್ಪಿಸಿ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಯುವ ಬೆಂಗಳೂರು ಟ್ರಸ್ಟ್ ಪ್ರತಿ ವರ್ಷವೂ ಕೂಡ ಕಲಿಕಾ ಸಾಮಗ್ರಿ ವಿಸ್ತರಿಸುತ್ತಿದೆ ಎಂದರು.

ರಾಮನಗರ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ ಮೈಸೂರು, ರಾಯಚೂರು ಜಿಲ್ಲೆಯವರೆಗೂ ಈ ಶೈಕ್ಷಣಿಕ ಚಟುವಟಿಕೆ ವಿಸ್ತರಿಸಿದೆ. ತಾವು ದುಡಿದ ಹಣದಿಂದ ಶಾಲೆ ಅಭಿವೃದ್ಧಿಪಡಿಸುತ್ತಿದ್ದು ಮಕ್ಕಳು ಇದರ ಪ್ರಯೋಜನ ಪಡೆದುಕೊಂಡಾಗ ಮಾತ್ರ ನಾವು ಮಾಡುತ್ತಿರುವ ಸೇವೆಗೆ ಸಾರ್ಥಕತೆ ಸಿಗಲಿದೆ ಎಂದರು.

ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಜಯರಾಂ, ಟ್ರಸ್ಟ್ ನ ಕಾರ್ಯದರ್ಶಿ ಶ್ವೇತಾ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಶಿವರಾಮ್, ವೆಂಕಟಾಚಲಯ್ಯ, ಬಸವರಾಜ್, ನರಸಿಂಹಮೂರ್ತಿ, ಯುವ ಬೆಂಗಳೂರು ಟ್ರಸ್ಟ್‌ನ ರಾಕೇಶ್, ರಾಹುಲ್, ತೇಜಸ್, ರೋಷನ್, ನಂದೀಶ್, ಭವ್ಯ, ರೋಹಿತ್, ಶ್ರೀನಿವಾಸ್, ಶಶಿಧರ್, ಸ್ವಯಂಸೇವಕರು ಇತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!