ಸಮಾನತೆಯಿಂದ ಬದುಕಲು ನಮ್ಮ ಸಂವಿಧಾನ ಕಾರಣ

KannadaprabhaNewsNetwork |  
Published : Jan 27, 2025, 12:47 AM IST
 ಸಮಾನತೆಯಿಂದ ಬದುಕಲು ನಮ್ಮ ಸಂವಿಧಾನ ಕಾರಣ | Kannada Prabha

ಸಾರಾಂಶ

ಹನೂರು ಪಟ್ಟಣದ ಮಲೆಮಾದೇಶ್ವರ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್.ಮಂಜುನಾಥ್ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮ ಸಡಗರದಿಂದ ಜರುಗಿತು.

ತಹಸೀಲ್ದಾರ್ ಗುರುಪ್ರಸಾದ್ ಪ್ರಾಸ್ತಾವಿಕವಾಗಿ 76 ನೇ ಗಣರಾಜ್ಯೋತ್ಸವದ ಶುಭ ಸಂದೇಶದ ನುಡಿಗಳನ್ನಾಡಿದರು. ನಿರ್ವಹಣಾಧಿಕಾರಿ ಉಮೇಶ್ ಸಂವಿಧಾನದ ಪೀಠಿಕೆಯ ಪ್ರತಿಜ್ಞಾವಿಧಿ ಬೋಧಿಸಿದರು

ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಕೊಳ್ಳೇಗಾಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಶಕಿ ಲತಾ ಮಣಿ ಸಂವಿಧಾನ ಮತ್ತು ಅದರ ಆಶಯಗಳು ಸಂವಿಧಾನ ರಚನೆಯಲ್ಲಿ ಡಾ.ಅಂಬೇಡ್ಕರ್ ಅವರ ಪಾತ್ರ ಹಾಗೂ ಕೊಡುಗೆ ಬಗ್ಗೆ ಮಾಹಿತಿ ನೀಡಿದರು. ಇತ್ತೀಚಿಗೆ ವಿಶೇಷ ಚೇತನರ ಕ್ರೀಡಾಕೂಟದಲ್ಲಿ ರಾಜ್ಯಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅನುಷ ಹಾಗೂ ಬಿಎಂಜಿ ಪ್ರೌಢಶಾಲೆಯ ನಾಗವೇಣಿ ಇಬ್ಬರು ವಿದ್ಯಾರ್ಥಿಗಳನ್ನು ಹಾಗೂ ನಿವೃತ್ತ ಸೈನಿಕರಾದ ಮಾಣಿಕ್ಯಂ ಹಾಗೂ ಬೆಂಜಮೀನ್ ಅವರನ್ನು ಸನ್ಮಾನಿಸಿ ಗೌರವಿಸಿದ್ದು ವಿಶೇಷವಾಗಿತ್ತು.

ವಿವಿಧ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಹಾಗೂ ಕರುನಾಡಿನ ಸಂಸ್ಕೃತಿ ಬಿಂಬಿಸುವ ಗೀತೆಗಳಿಗೆ ನೃತ್ಯ ಪ್ರದರ್ಶನ ಗಮನ ಸೆಳೆಯಿತು. ವಿವಿಧ ಶಾಲೆಯ ವಿದ್ಯಾರ್ಥಿಗಳು ನಡೆಸಿಕೊಟ್ಟ ಆಕರ್ಷಕ ಪಥಸಂಚಲನಕ್ಕೆ ಶಾಸಕ ಮಂಜುನಾಥ್ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕ ಮಂಜುನಾಥ್, ವಿವಿಧ ಜಾತಿ ಧರ್ಮ ಭಾಷೆ ಆಚಾರ ವಿಚಾರ ಭೌಗೋಳಿಕ ವಿಭಿನ್ನತೆಯನ್ನು ನಮ್ಮ ದೇಶದಲ್ಲಿ ಕಾಣಬಹುದಾಗಿದೆ.

ಇಂತಹ ವಿಭಿನ್ನ ಮತ್ತು ವಿಶಿಷ್ಟ ದೇಶದಲ್ಲಿ ಏಕತೆ ಮತ್ತು ಸಮಾನತೆಯಿಂದ ಬದುಕಲು ನಮ್ಮ ಸಂವಿಧಾನ ಕಾರಣವಾಗಿದೆ. ಇಂತಹ ಸುದಿನದಲ್ಲಿ ಮಹಾತ್ಮ ಗಾಂಧೀಜಿ ಡಾ.ಅಂಬೇಡ್ಕರ್ ಮುಂತಾದ ಮಹನೀಯರನ್ನು ಸ್ಮರಿಸಿ ಬಹಳಷ್ಟು ಚಿಂತನ ಮಂಥನ ನಡೆಸಬೇಕು. ವಿಶ್ವದ ಬೃಹತ್ ಸಂವಿಧಾನಕ್ಕೆ ಕಾರಣರಾದ ಡಾ.ಅಂಬೇಡ್ಕರ್ ಅವರಿಗೆ ವಿಶೇಷ ನಮನವನ್ನು ಸಲ್ಲಿಸುತ್ತೇನೆ ಎಂದರು.

ಇಂದು ಕ್ರಾಂತಿ ಇಲ್ಲದೆ ಶಾಂತಿಯಿಂದ ದೇಶ ಮುನ್ನಡೆಯುತ್ತಿದ್ದರೆ ಅದಕ್ಕೆ ಸಂವಿಧಾನ ಕಾರಣ. ಸದೃಢ ಸಮಾಜಕ್ಕೆ ಯುವಕರ ಕೊಡುಗೆ ಪ್ರಮುಖವಾದದ್ದು, ಯುವಜನತೆ ಮನಸ್ಸು ಮಾಡಿದರೆ ದೇಶದ ದಿಕ್ಕನ್ನೇ ಬದಲಾಯಿಸಬಹುದು. ಯುವ ಪೀಳಿಗೆ ಒಳ್ಳೆ ಪುಸ್ತಕ ಮತ್ತು ಪತ್ರಿಕೆಗಳನ್ನು ಓದುವತ್ತ ಗಮನ ಹರಿಸಬೇಕು. ಕ್ಷೇತ್ರದಲ್ಲಿ ಬಡತನ, ನಿರುದ್ಯೋಗ ತಾಂಡವವಾಡುತ್ತಿದೆ ಈ ನಿಟ್ಟಿನಲ್ಲಿ ಉದ್ಯೋಗ ಅವಕಾಶ ಕಲ್ಪಿಸಲು ಹಾಗೂ ಕ್ಷೇತ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಕ್ಯಾಬಿನೆಟ್ ಸಭೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವುದರಿಂದ ಸಂತಸ ತಂದಿದೆ. ಕ್ಷೇತ್ರ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ವರದಾನವಾಗಲಿದೆ ಎಂದರು.ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಮುಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್, ಸದಸ್ಯರಾದ ಹರೀಶ್ ಕುಮಾರ್, ಸೋಮಶೇಖರ್,ಸುದೇಶ್,ಮಹೇಶ್ ನಾಯಕ, ಮಂಜುಳಾ, ರೂಪ, ಪ್ರೇಮಲತಾ ನಾಮನಿರ್ದೇಶಿತ ಸದಸ್ಯರಾದ ಬಸವರಾಜು, ಮಹಾದೇಶ್, ನವೀನ್ ಕುಮಾರ್ ಮುಖ್ಯ ಅಧಿಕಾರಿ ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಇನ್ಸ್‌ಪೆಕ್ಟರ್ ಶಶಿಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ