
ಕನ್ನಡಪ್ರಭ ವಾರ್ತೆ ರಾಯಚೂರು
ಈ ವೇಳೆ ಮಾತನಾಡಿದ ಅವರು, ಪೊಲೀಸರನ್ನು ಸಮಾಜದ ಭದ್ರತಾ ಪ್ರತಿನಿಧಿಗಳೆಂದು, ನಾಗರೀಕರ ಮೂಲಭೂತ ಹಕ್ಕುಗಳ ರಕ್ಷಕರೆಂದು ಸಂಬೋಧಿಸಲಾಗುತ್ತದೆ. ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು, ಅಪರಾಧಗಳ ತಡೆ ಹಾಗೂ ಪತ್ತೆ, ಸಮಾಜದಲ್ಲಿ ನಿರ್ಭಯ ವಾತಾವರಣವನ್ನು ಸೃಜಿಸುವ ಜೊತೆಗೆ ರಕ್ಷಣೆ ಮತ್ತು ಸುರಕ್ಷತೆ ಒದಗಿಸುವ ಕರ್ತವ್ಯ ಮತ್ತು ಗುರುತರ ಜವಾಬ್ದಾರಿಗಳು ಪೊಲೀಸ್ ಇಲಾಖೆಯ ಮೇಲಿವೆ ಎಂದರು.
ಪೊಲೀಸ್ ವ್ಯವಸ್ಥೆಯು ಸಮಾಜಸ್ನೇಹಿಯಾಗಿಸಿಕೊಳ್ಳುವುದರಿಂದ ಪೊಲೀಸ್ ಮೂಲಭೂತ ಕರ್ತವ್ಯದ ಪರಿಣಾಮಕತೆಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಪೊಲೀಸ್ ಸೇವೆಗಳ ಪ್ರತಿಯೊಂದು ಸ್ಥರದಲ್ಲೂ, ಸಾರ್ವಜನಿಕರ ಬೆಂಬಲ ಮತ್ತು ಸಹಭಾಗಿತ್ವವನ್ನು ಸಾಧಿಸಿಕೊಳ್ಳುವುದರಿಂದ ಮಾತ್ರವೇ ಸಾರ್ವಜನಿಕರಿಗೆ ಉತ್ಕೃಷ್ಟ ಸೇವೆಯನ್ನು ಒದಗಿಸಲು ಸಾಧ್ಯ. ಪೊಲೀಸರು ಸಮಾಜದ ಸೇವಕರು ಎಂಬುದನ್ನು ಎಂದಿಗೂ ಮರೆಯಕೂಡದು. ಜನರಿಗೆ ಅತ್ಯುತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ ಮತ್ತು ಮೂಲ ಧೈಯ ಎಂಬುದನ್ನು ಸದಾ ನೆನಪಿನಲ್ಲಿಡಬೇಕು ಎಂದರು.ಸಾರ್ವಜನಿಕ ಹಿತರಕ್ಷಣೆಗೆ ಪೊಲೀಸ್ ಇಲಾಖೆಯು ತುಂಬಾ ನಿಗಾವಹಿಸುತ್ತಿದೆ ಎಂದು ತಿಳಿಸಿದ ಅವರು, ಜನರು ಒಂದು ಮೊಬೈಲ್ ಫೋನ್ ಸಲುವಾಗಿ ಎಷ್ಟೆಲ್ಲಾ ಹಣ ಖರ್ಚು ಮಾಡುತ್ತಾರೆ. ಆದರೆ, ತಮ್ಮ ಹಿತರಕ್ಷಣೆ ಮಾಡುವ ಹೆಲ್ಮೆಟ್ಗೋಸ್ಕರ ಯಾಕೆ ಹಣವನ್ನು ಖರ್ಚು ಮಾಡುವುದಿಲ್ಲ ಎಂದು ನೆರದಿದ್ದ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಪ್ರಶ್ನಿಸಿ ಹೆಲ್ಮೆಟ್ನ ಮಹತ್ವ ತಿಳಿಸಿದರು.
ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ ಪೊಲೀಸ್ ಅಧಿಕಾರಿಗಳ ದೂರವಾಣಿ ಸಂಖ್ಯೆ, ನಿಯಂತ್ರಣ ಕೋಣೆ-112 ಸಂಖ್ಯೆ ಹಿರಿಯ ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನು ಹಂಚಿಕೊಳ್ಳುವುದು ಹಾಗೂ ಎಂತಹದ್ದೇ ಪರಿಸ್ಥಿತಿಯಲ್ಲಿ ಪೊಲೀಸ್ ಇಲಾಖೆಗೆ ಕರೆ ಮಾಡುವಂತೆ ಉತ್ತೇಜಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. ಡಿವೈಎಸ್ಪಿ ಶಾಂತವೀರ ಮಾತನಾಡಿದರು.
ವಿವಿಧ ಬಹುಮಾನ ವಿತರಣೆ