ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬೆಂಗಳೂರಿನ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಾಲನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015, ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಪೋಕ್ಸ ಕಾಯ್ದೆ-2012 ಹಾಗೂ ದತ್ತು ನಿಯಮಾವಳಿಗಳು-2022ರ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳ ಹಕ್ಕುಗಳನ್ನು ಸುಲಭವಾಗಿ ಅನುಷ್ಠಾನಗೊಳಿಸಲು ಕಾಯ್ದೆಗಳನ್ನು ಅರಿತುಕೊಳ್ಳಬೇಕು. ಇದರಿಂದ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಿ ಕೊಡಬಹುದಾಗಿದೆ ಎಂದ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳುವಂತೆ ಕಾನೂನುಗಳ ಸಮರ್ಪಕ ಅನುಷ್ಠಾನವು ನಮ್ಮಲ್ಲಿನ ಇಚ್ಛಾಶಕ್ತಿಯ ಮೇಲೆ ನಿಂತಿದೆ ಎಂದು ತಿಳಿಸಿದರು.
ಬೆಂಗಳೂರಿನ ಸಿಐಡಿ ಕಚೇರಿಯ ಪೊಲೀಸ್ ತರಬೇತುದಾರರಾದ ರೋಹಿತ್ ಸಿ.ಜೆ. ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಆಯೋಗದ ಜಿಲ್ಲಾ ಸದಸ್ಯೆ ಜಯ ಸುಧಾರಾಣಿ, 1ನೇ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ. ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಯು. ನವೀನ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ, ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಅಧಿಕಾರಿ, ಸಿಬ್ಬಂದಿ ಇದ್ದರು.ಪ್ರತಿಜ್ಞಾ ವಿಧಿ ಬೋಧನೆ
ಪೋಸ್ಟರ್ ಬಿಡುಗಡೆ
ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಇವರ ವತಿಯಿಂದ ದತ್ತು ಪ್ರಕ್ರಿಯೆ ಹಾಗೂ 1098 ಮಕ್ಕಳ ಸಹಾಯವಾಣಿ ಪೋಸ್ಟರ್ಗಳನ್ನು ವಿವಿಧ ಗಣ್ಯರಿಂದ ಬಿಡುಗಡೆ ಮಾಡಲಾಯಿತು.