ಕನ್ನಡಪ್ರಭ ವಾರ್ತೆ ಬೆಂಗಳೂರು
ಮೋಟಾರ್ ಟ್ರಾಲಿ ಮೂಲಕ ಮಾರ್ಗದಲ್ಲಿ ಸಂಚರಿಸಿದ ಸಿಎಂಆರ್ಎಸ್ ತಂಡದವರು ಪರಿಶೀಲನೆ ನಡೆಸಿದರು. ಮಾರ್ಗದ ತಿರುವು, ಪ್ರಾಯೋಗಿಕ ಸಂಚಾರದ ವೇಳೆಯಲ್ಲಿ ರೈಲಿನ ವೇಗ, ನಿಲ್ದಾಣಗಳಲ್ಲಿ ನಿಲ್ಲಬೇಕಾದಾಗ ನಿಧಾನಗತಿ, ಬ್ರೇಕ್ ಸಿಸ್ಟಂ, ವಿದ್ಯುತ್ ಪೂರೈಕೆ ಸೇರಿ ಇತರೆ ಅಂಕಿ ಅಂಶಗಳನ್ನು ಬೆಂಗಳೂರು ಮೆಟ್ರೋ ರೈಲು ನಿಗಮದ ಅಧಿಕಾರಿಗಳಿಂದ ಪಡೆದರು. ಜೊತೆಗೆ ಮಂಜುನಾಥನಗರ, ಚಿಕ್ಕಬಿದರಕಲ್ಲು ಹಾಗೂ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ ನಿಲ್ದಾಣಗಳನ್ನು ತಪಾಸಣೆ ಮಾಡಿದರು.
ಸಿಎಂಆರ್ಎಸ್ ತಂಡ ಹದಿನೈದು ದಿನಗಳಲ್ಲಿ ವರದಿ ನೀಡುವ ಸಾಧ್ಯತೆಯಿದೆ. ಅವರು ಸೂಚಿಸುವ ಕೆಲ ಬದಲಾವಣೆಗಳ ಅನ್ವಯ ರೈಲು ಸಂಚಾರ ಆರಂಭಿಸಲಾಗುವುದು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದರು.2017ರಲ್ಲಿ ಹಸಿರು ಮಾರ್ಗದ ವಿಸ್ತರಿತ ಕಾಮಗಾರಿ ಆರಂಭವಾಗಿದ್ದರೂ ಕೋವಿಡ್, ಭೂಸ್ವಾಧೀನ ಸೇರಿ ಹಲವು ಕಾರಣದಿಂದ ಏಳು ವರ್ಷ ವಿಳಂಬವಾಗಿದೆ. ಇದೀಗ ಮಾದವಾರದವರೆಗೆ ವಾಣಿಜ್ಯ ಸೇವೆ ಲಭ್ಯವಾಗಲಿದ್ದು, ಇದರಿಂದ ನೆಲಮಂಗಲ ಸೇರಿ ಸುತ್ತಮುತ್ತಲ ಜನತೆಗೆ ಅನುಕೂಲವಾಗಲಿದೆ.
-----
ಫೋಟೋನಮ್ಮ ಮೆಟ್ರೋ ಹಸಿರು ಕಾರಿಡಾರ್ ವಿಸ್ತರಿತ ನಾಗಸಂದ್ರ - ಮಾದವಾರ ಮಾರ್ಗದಲ್ಲಿ ಸಿಎಂಆರ್ಎಸ್ ತಂಡದಿಂದ ತಪಾಸಣೆ ನಡೆಯಿತು.