ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಪಂಚಾಯತಿ, ತಾಲೂಕು ಸ್ವೀಪ್ ಸಮಿತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಆರೋಗ್ಯ ಇಲಾಖೆ ಪುರಸಭೆ ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಮತದಾನ ಜಾಗೃತಿಯ ಸ್ವೀಪ್ ಚಟುವಟಿಕೆಯ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮವನ್ನು ತಹಸೀಲ್ದಾರ್ ಚಿದಂಬರ ಕುಲಕರ್ಣಿ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.
ಸಿಡಿಪಿಒ ಭಾರತಿ ಕಾಂಬಳೆ, ಸಹಾಯಕ ನಿರ್ದೇಶಕರು(ಗ್ರಾಉ) ಶಿವಾನಂದ ಶಿರಗಾಂವೆ, ವ್ಯವಸ್ಥಾಪಕ ಉದಯಗೌಡ ಪಾಟೀಲ, ಸಹಾಯಕ ನಿರ್ದೇಶಕ (ಪಂ.ರಾ) ಎಸ್.ಎಸ್.ಮಠದ, ಐ.ಇ.ಸಿ ಸಂಯೋಜಕ ರಂಜಿತ ಕಾರ್ಣಿಕ, ಎಂ.ಐ.ಎಸ್ ಸಂಯೋಜಕ ಚೇತನ ಶಿರಹಟ್ಟಿ, ಆಡಳಿತ ಸಹಾಯಕ ಅಕ್ಷಯ ಠಕ್ಕಪ್ಪಗೋಳ, ಸ್ವೀಪ್ ವಿಷಯ ನಿರ್ವಾಹಕಿ ಶ್ರೀದೇವಿ ನಡುವಿನಕೇರಿ, ಸೂಪರವೈಸರ್ ಬಸವರಾಜ, ಅಂಗನವಾಡಿ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.