ಮೇ 1ರಿಂದ ನಮ್ಮ ನಡೆ ಸರ್ವೋದಯದ ಕಡೆ ಕಾರ್ಯಕ್ರಮ

KannadaprabhaNewsNetwork |  
Published : Mar 13, 2026, 02:00 AM IST
ತಾಲೂಕಿನ ಪಾಂಡೋಮಟ್ಟಿ ಗ್ರಾಮದ ವಿರಕ್ತ ಮಠದ ಸಭಾಂಗಣದಲ್ಲಿ ನಮ್ಮನಡೆ ಸರ್ವೋದಯದ ಕಡೆಗೆ ಎಂಬ ಜನ ಜಾಗೃತಿ ಅಂದೋಲದ ಪೂರ್ವ ಭಾವಿ ಸಮಾಲೋಚನಾ ಸಭೆಯ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡುತ್ತೀರುವ ಶ್ರೀಮಠದ ಗುರುಬಸವ ಮಹಾಸ್ವಾಮಿಗಳು ಸಾಣೇಹಳ್ಳಿಯ ಶ್ರೀಗಳು ಸೇರಿದಂತೆ ವಿವಿಧ ಮಠಗಳ ಮಠಾಧೀಶರುಗಳು ಇದ್ದಾರೆ | Kannada Prabha

ಸಾರಾಂಶ

ರಾಜ್ಯದ ಜನತೆಯಲ್ಲಿ ಶಿಕ್ಷಣ, ಆರೋಗ್ಯ, ಪರಿಸರ, ಕೃಷಿ ಮತ್ತು ಆಡಳಿತದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ನಮ್ಮನಡೆ ಸರ್ವೋದಯದ ಕಡೆ ಕಾರ್ಯಕ್ರಮವನ್ನು ಮೇ1 ರಿಂದ 15ರವರೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಡಾ. ಶ್ರೀ ಗುರುಬಸವ ಮಹಾಸ್ವಾಮೀಜಿ ನುಡಿದಿದ್ದಾರೆ.

- ಪಾಂಡೋಮಟ್ಟಿ ವಿರಕ್ತ ಮಠದ ಡಾ. ಶ್ರೀ ಗುರುಬಸವ ಮಹಾಸ್ವಾಮೀಜಿ ಮಾಹಿತಿ

- - -

ಕನ್ನಡಪ್ರಭ ವಾರ್ತೆ ಚನ್ನಗಿರಿ

ರಾಜ್ಯದ ಜನತೆಯಲ್ಲಿ ಶಿಕ್ಷಣ, ಆರೋಗ್ಯ, ಪರಿಸರ, ಕೃಷಿ ಮತ್ತು ಆಡಳಿತದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ನಮ್ಮನಡೆ ಸರ್ವೋದಯದ ಕಡೆ ಕಾರ್ಯಕ್ರಮವನ್ನು ಮೇ1 ರಿಂದ 15ರವರೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಡಾ. ಶ್ರೀ ಗುರುಬಸವ ಮಹಾಸ್ವಾಮೀಜಿ ನುಡಿದರು.

ಮಂಗಳವಾರ ತಾಲೂಕಿನ ಪಾಂಡೋಮಟ್ಟಿ ಗ್ರಾಮದ ವಿರಕ್ತ ಮಠದ ಸಭಾಂಗಣದಲ್ಲಿ ನಮ್ಮನಡೆ ಸರ್ವೋದಯದ ಕಡೆಗೆ ಎಂಬ ಜನಜಾಗೃತಿ ಅಂದೋಲದ ಪೂರ್ವಭಾವಿ ಸಮಾಲೋಚನಾ ಸಭೆ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಶ್ರೀಗಳು ರಾಜ್ಯದ 31 ಜಿಲ್ಲೆಗಳಲ್ಲಿ ಪ್ರತಿದಿನ 2 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಗುಣಮಟ್ಟದ ಶಿಕ್ಷಣ, ಸರ್ವರಿಗೂ ಗುಣಮಟ್ಟದ ಆರೋಗ್ಯ ಸೇವೆ, ಉತ್ತಮ ಪರಿಸರ ನಿರ್ಮಾಣ ಮಾಡಲು ಪ್ರತಿಯೊಬ್ಬರ ಪಾತ್ರ, ಸಾವಯವ ಕೃಷಿ, ಭ್ರಷ್ಟಾಚಾರರಹಿತ ಆಡಳಿತದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕ ಎಂದರು.

ಈ ಜಾಗೃತಿ ಕಾರ್ಯಕ್ರಮವು ಜಾತ್ಯತೀತ, ಧರ್ಮಾತೀತ ಕಾರ್ಯಕ್ರಮ ಇದಾಗಿದೆ. ಮಹಾತ್ಮಗಾಂಧೀಜಿ ಅವರ ಗ್ರಾಮ ಅಭಿವೃದ್ಧಿ ಕನಸುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಾಗಿದೆ ಎಂದರು.

ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ, ಸಮಾಜವನ್ನು ಸನ್ಮಾರ್ಗದೆಡೆಗೆ ಕೊಂಡ್ಯೊಯ್ಯುವ ಜವಾಬ್ದಾರಿ ಮಠಗಳ ಮೇಲಿದೆ. ಶಿಕ್ಷಣ, ಆರೋಗ್ಯ, ಪರಿಸರ, ಕೃಷಿ ಮತ್ತು ಆಡಳಿತ ಈ ಐದು ಕ್ಷೇತ್ರಗಳಲ್ಲಿ ಸುಧಾರಣೆ ತರುವುದು ಅವಶ್ಯಕವಾಗಿದೆ. ಆ ನಿಟ್ಟಿನಲ್ಲಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಈ ಕಾರ್ಯಕ್ರಮ ರೂಪುಗೊಂಡಿರುವುದು ಶ್ಲಾಘನೀಯ ಎಂದರು.

ಸಭೆಯಲ್ಲಿ ಗವಿ ಮಠದ ಶ್ರೀ ಚಂದ್ರಶೇಖರ ಮಹಾಸ್ವಾಮೀಜಿ, ಚನ್ನಗಿರಿ ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ, ಬಸವತಪೋ ವನದ ಜಯಬಸವಾನಂದ ಮಹಾಸ್ವಾಮೀಜಿ, ಹೊಳಲ್ಕೆರೆ ಒಂಟಿ ಕಲ್ಮಠದ ತಿಪ್ಪೇರುದ್ರ ಮಹಾಸ್ವಾಮೀಜಿ, ರುದ್ರಮುನಿ ಮಹಾಸ್ವಾಮೀಜಿ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್, ಜೀವವೈವಿಧ್ಯ ನಿಗಮದ ಅಧ್ಯಕ್ಷ ವಡ್ನಾಳ್ ಜಗದೀಶ್, ನಿವೃತ್ತ ಶಿಕ್ಷಕ ಎಂ.ಯು. ಚನ್ನಬಸಪ್ಪ ಸೇರಿದಂತೆ ಮಠದ ಭಕ್ತರು, ಆಸಕ್ತ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು.

- - -

-10ಕೆಸಿಎನ್‌ಜಿ3:

ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ವಿರಕ್ತ ಮಠದ ಸಭಾಂಗಣದಲ್ಲಿ ನಮ್ಮನಡೆ ಸರ್ವೋದಯದ ಕಡೆಗೆ ಜನಜಾಗೃತಿ ಆಂದೋಲದ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು. ಶ್ರೀಮಠದ ಗುರುಬಸವ ಮಹಾಸ್ವಾಮೀಜಿ, ಸಾಣೇಹಳ್ಳಿಯ ಶ್ರೀ ಮತ್ತಿತರ ಮಠಾಧೀಶರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಂಸ್ಕೃತಿಕ ಜೀವನದ ಮೇಲೆ ಪ್ರಭಾವ ಬೀರಿದ ದಾಸ ಸಾಹಿತ್ಯ
ನಾಳೆ ಜಿಲ್ಲಾದ್ಯಂತ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್