ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಆದಿಚುಂಚನಗಿರಿ ಮಹಾ ಸಂಸ್ಥಾನಮಠದ ಬಿಜಿಎಸ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ 81ನೇ ಜಯಂತ್ಯುತ್ಸವ, 13 ನೇ ವರ್ಷದ ಸಂಸ್ಮರಣಾ ಮಹೋತ್ಸವ ಮತ್ತು ಸಂತ ಭಕ್ತಸಂಗಮ ಕಾರ್ಯಕ್ರಮದ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.
ಮನುಷ್ಯ ಎಷ್ಟೇ ಒಳ್ಳೆಯವರಾಗಿದ್ದರೂ ಕೂಡ ಹಿಂದಿನ ಕೆಟ್ಟ ಕರ್ಮದ ಫಲಗಳು ಸಿಗುತ್ತಿದ್ದರೆ ಬದುಕು ತುಂಬಾ ದುಸ್ಥರವಾಗುತ್ತದೆ. ಅಂತಹ ಹೊತ್ತಿನಲ್ಲಿ ಒಬ್ಬ ಶ್ರೇಷ್ಠ ಗುರು ನಮ್ಮೊಂದಿಗಿದ್ದರೆ ಹಿಂದಿನ ಕೆಟ್ಟ ಕರ್ಮದ ಫಲಗಳನ್ನು ದಾಟಿ ಸನ್ಮಾರ್ಗದಲ್ಲಿ ಹೋಗಿ ಜ್ಞಾನವನ್ನು ಪಡೆಯಲು ಅವಕಾಶವಾಗುತ್ತದೆ ಎಂದರು.ಶ್ರೇಷ್ಠ ಗುರುಪರಂಪರೆ ಹೊಂದಿರುವ ದೇಶ ನಮ್ಮದು. ಭೈರವೈಕ್ಯ ಡಾ.ಬಾಲಗಂಗಾಧರನಾಥಶ್ರೀಗಳು ಮನುಷ್ಯ ರೂಪದಲ್ಲಿ ಅವತರಿಸಿ ಬಂದು ಇಡೀ ಸಮಾಜವನ್ನು ಉದ್ಧರಿಸಿದ್ದಾರೆ. ಇಂತಹ ಶ್ರೇಷ್ಠ ಗುರುಗಳನ್ನು ಪಡೆದಿರುವ ನಾವೆಲ್ಲರೂ ಅರಿವಿನ ಮಹಾಮನೆಯತ್ತ ಮುನ್ನಡೆಯಬೇಕಿದೆ ಎಂದರು.
ಭೈರವೈಕ್ಯ ಶ್ರೀಗಳ ಜೀವನವನ್ನು ನಾವು ಒಳಹೊಕ್ಕಿ ನೋಡಿದರೆ ಅವರು ಎಷ್ಟು ಅನುಭವಿ, ತತ್ವಜ್ಞಾನಿಗಳಾದ್ದರು ಎಂಬುದನ್ನು ತಿಳಿಯಬಹುದು. ಅಂತಹ ಮಹಾನ್ ಜ್ಞಾನಿಯ ದಿವ್ಯ ಸಂದೇಶ ಅವರು ಕೊಟ್ಟಿರುವ ಶಿಕ್ಷಣ, ಅವರು ನಡೆದಿರುವ ಮಾರ್ಗವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಭೈರವೈಕ್ಯ ಶ್ರೀಗಳು ಮಾಡಿರುವ ಸತ್ಕಾರ್ಯಗಳು ವಿಶ್ವಮಟ್ಟದಲ್ಲಿ ಬೆಳಗುತ್ತಿವೆ. ಶ್ರೀಗಳ ಕನಸನ್ನು ನನಸು ಮಾಡುತ್ತಿರುವ ನಿರ್ಮಲಾನಂದನಾಥ ಶ್ರೀಗಳು ಮಹಾಗುರುವಿಗೆ ಪ್ರಬುದ್ಧ ಶಿಷ್ಯರು ಎಂಬುದನ್ನು ಸಾಬೀತುಪಡಿಸಿದ್ದಾರೆ. ಇವರಿಂದ ಸಮಾಜೋದ್ಧಾರದ ಕಾರ್ಯಗಳು ನಿರಂತರವಾಗಿ ನಡೆಯಲಿ ಎಂದು ಆಶಿಸಿದರು.
ವಿಶೇಷ ಪೂಜೆ:
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ, ಚಿತ್ರದುರ್ಗದ ಕಬೀರಾನಂದ ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ, ಕುಂಬಳಗೂಡು ಶಾಖಾಮಠದ ಪ್ರಕಾಶನಾಥಸ್ವಾಮೀಜಿ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಎಚ್.ನಿಂಗಪ್ಪ, ಮಾಹಿತಿ ಹಕ್ಕು ಆಯೋಗದ ಆಯುಕ್ತ ರಾಜಶೇಖರ್, ಜಿಲ್ಲಾಧಿಕಾರಿ ಡಾ.ಕುಮಾರ, ಹಿರಿಯ ಪತ್ರಕರ್ತ ಸುದರ್ಶನ್ ಚನ್ನಂಗಿಹಳ್ಳಿ, ಶಂಭೂನಾಥಸ್ವಾಮೀಜಿ, ಸೋಮನಾಥಸ್ವಾಮೀಜಿ, ಚೈತನ್ಯನಾಥಸ್ವಾಮೀಜಿ, ಸಾಯಿಕೀರ್ತಿನಾಥಸ್ವಾಮೀಜಿ, ಸತ್ಕೀರ್ತಿನಾಥಸ್ವಾಮೀಜಿ, ಆದಿಚುಂಚನಗಿರಿ ಆಸ್ಪತ್ರೆಯ ಪ್ರಾಂಶುಪಾಲ ಡಾ.ಎಂ.ಜಿ.ಶಿವರಾಮು, ಶಿಕ್ಷಣ ಟ್ರಸ್ಟ್ನ ಆಡಳಿತಾಧಿಕಾರಿ ಡಾ.ಎ.ಟಿ.ಶಿವರಾಮು ಸೇರಿದಂತೆ ಸಹಸ್ರಾರು ಭಕ್ತರು ಇದ್ದರು.