ಕನ್ನಡಪ್ರಭ ವಾರ್ತೆ ಚಿತ್ತಾಪುರ
ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ದಿ ಸಂಸ್ಥೆ ಕಲಬುರಗಿ ವತಿಯಿಂದ ೨೦೧೯-೨೦ ಸಾಲಿನ ಡಿಎಂಎಫ್ ಯೋಜನೆಯಡಿ ಚಿತ್ತಾಪುರ ತಾಲೂಕಿನ ಸಾವತಖೇಡ ಗ್ರಾಮದಿಂದ ಜೀವನ ಮಾರಡಗಿವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಅಡಿಗಲ್ಲು (ಅಂದಾಜು ಮೊತ್ತ ರು.೨೬೬.೫೫ ಲಕ್ಷ) ನೆರವೇರಿಸಿ ಮಾತನಾಡಿದರು.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಚುನಾವಣೆ ಸಮಯದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಕೊಟ್ಟ ಮಾತು ಉಳಿಸಿಕೊಂಡಿದೆ ಜೊತೆಗೆ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಅಗತ್ಯ ಕ್ರಮವಹಿಸಲಾಗುತ್ತಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಈ ಬಗ್ಗೆ ಬಿಜೆಪಿಯವರು ಏನೇ ಹೇಳಿದರೂ ಯಾರೂ ಗಂಭೀರವಾಗಿ ಪರಿಗಣಿಸಬಾರದು ಎಂದು ಮನವಿ ಮಾಡಿದರು.ರೇಲ್ವೆ ವಲಯ, ನಿಮ್ಝ್ ಸೇರಿದಂತೆ ಹಲವಾರು ಅಭಿವೃದ್ಧಿಪರವಾದ ಯೋಜನೆಗಳು ಮಂಜೂರಾಗಿದ್ದರೂ ಕೂಡಾ ಜಾರಿಗೆ ಬಂದಿಲ್ಲ. ಕಾರಣ, ಕೇಂದ್ರ ಸರ್ಕಾರದ ಹಾಗೂ ಕಲಬುರಗಿ ಸಂಸದರ ನಿರ್ಲಕ್ಷ್ಯತನ ಎಂದು ದೂರಿದರು. ಕೇಂದ್ರ ಸರ್ಕಾರದ ನಿರ್ಲಕ್ಷತನ ಎಷ್ಟು ಮುಂದುವರೆದಿದೆ ಎಂದರೆ ನಮ್ಮ ರಾಜ್ಯ ಸರ್ಕಾರಕ್ಕೆ ಬರಬೇಕಿದ್ದ ಅನುದಾನದ ಪಾಲು ಸರಿಯಾಗಿ ಕೊಡುತ್ತಿಲ್ಲ. ಈ ಬಗ್ಗೆ ನಾವು ಕೇಳಲು ದೆಹಲಿಗೆ ಹೋಗಿ ಪ್ರತಿಭಟನೆ ಮಾಡಿ ಬಂದೆವು ಎಂದು ಕೇಂದ್ರದ ವಿರುದ್ಧ ಹರಿಹಾಯ್ದರು.