ಬೆಳಗಾವಿ-ರಾಯಚೂರು ಹೆದ್ದಾರಿ ಬಂದ್‌ ಮಾಡಿ ಆಕ್ರೋಶ

KannadaprabhaNewsNetwork |  
Published : Nov 08, 2025, 03:00 AM IST
ಕಮತಗಿ : ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ಸರಿಯಾದ ಸಮಯಕ್ಕೆ ಕಬ್ಬಿನ ಬಿಲ್ ಪಾವತಿಯನ್ನು ಮಾಡುವಂತೆ ಆಗ್ರಹಿಸಿ ರೈತರು ಕಮತಗಿ ಕ್ರಾಸ್‌ದಲ್ಲಿನ ಬೆಳಗಾವಿ ರಾಯಚೂರು ರಾಜ್ಯ ಹೆದ್ದಾರಿಯನ್ನು ಸಂಪೂರ್ಣ ಬಂದ್‌ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ಸರಿಯಾದ ಸಮಯಕ್ಕೆ ಕಬ್ಬಿನ ಬಿಲ್ ಪಾವತಿಸುವಂತೆ ಆಗ್ರಹಿಸಿ ರೈತರು ಕಮತಗಿ ಕ್ರಾಸ್‌ನಲ್ಲಿ ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯನ್ನು ಬಂದ್‌ ಮಾಡಿ ಶುಕ್ರವಾರ ಪ್ರತಿಭಟಿಸಿದರು.

ಕನ್ನಡಪ್ರಭ ವಾರ್ತೆ ಕಮತಗಿ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ಸರಿಯಾದ ಸಮಯಕ್ಕೆ ಕಬ್ಬಿನ ಬಿಲ್ ಪಾವತಿಸುವಂತೆ ಆಗ್ರಹಿಸಿ ರೈತರು ಕಮತಗಿ ಕ್ರಾಸ್‌ನಲ್ಲಿ ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯನ್ನು ಬಂದ್‌ ಮಾಡಿ ಶುಕ್ರವಾರ ಪ್ರತಿಭಟಿಸಿದರು.

ರೈತರ ಹೋರಾಟಕ್ಕೆ ಸ್ವಾಮೀಜಿಗಳ ಬೆಂಬಲ: ಇಳಕಲ್ಲ ಗುರು ಮಹಾಂತ ಸ್ವಾಮೀಜಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ರೈತರು ಬೆಳೆಯುವ ಕಬ್ಬು ಸೇರಿದಂತೆ ವಿವಿಧ ರೀತಿಯ ಬೆಳೆ ಬೆಳೆಯುತ್ತಾರೆ. ಮಾರುಕಟ್ಟೆಯಲ್ಲಿ ಬೆಳೆಗೆ ಸೂಕ್ತ ಬೆಲೆ ನಿಗದಿಪಡಿಸಬೇಕು. ಸದ್ಯ ಕಬ್ಬಿಗೆ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಕಡಿಮೆ ಬೆಲೆ ನೀಡಲಾಗುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಹಾಗೂ ಕಾರ್ಖಾನೆ ಮಾಲೀಕರು ಸೂಕ್ತ ಬೆಲೆ ನೀಡುವ ಮೂಲಕ ಅವರ ಬೇಡಿಕೆ ಈಡೇರಿಸಬೇಕು ಎಂದು ರಾಜ್ಯ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಅಮೀನಗಡದ ಪ್ರಭು ಶಂಕರರಾಜೇಂದ್ರ ಶ್ರೀ, ಗುಳೇದಗುಡ್ಡ ಅಭಿನವ ಕಾಡಸಿದ್ದೇಶ್ವರ ಶ್ರೀಗಳು ಭಾಗವಹಿಸಿದ್ದರು.

ಪ್ರತಿಭಟನಾ ಸ್ಥಳಕ್ಕೆ ಎಸಿ ಭೇಟಿ: ಕಮತಗಿ ಕ್ರಾಸ್‌ನಲ್ಲಿ ಬೆಳಗ್ಗೆಯಿಂದ ರಸ್ತೆ ತಡೆಹಿಡಿದು ರೈತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಭೇಟಿ ನೀಡಿ ಮನವಿ ಸ್ವೀಕರಿಸಿ,ಆದಷ್ಟು ಬೇಗ ನಿಮ್ಮ ಬೇಡಿಕೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದರಿಂದ ರೈತರು ಪ್ರತಿಭಟನೆ ಹಿಂಪಡೆದರು.

ಈ ವೇಳೆ ಹುನಗುಂದ ತಹಸೀಲ್ದಾರ್‌ ಪ್ರದೀಪಕುಮಾರ ಹಿರೇಮಠ, ಉಪತಹಸೀಲ್ದಾರ್‌ ಎಂ.ಆರ್. ಹೆಬ್ಬಳ್ಳಿ, ಹುನಗುಂದ ಸಿಪಿಐ, ಕಂದಾಯ ನಿರೀಕ್ಷಕ ಡಿ.ಎಸ್. ಯತ್ನಟ್ಟಿ ಇದ್ದರು.

ಪ್ರಯಾಣಿಕರಿಗೆ ತಟ್ಟಿದ ಹೋರಾಟದ ಬಿಸಿ: ಕಮತಗಿ ಕ್ರಾಸ್‌ದಲ್ಲಿ ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯನ್ನು ಬೆಳಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆವರೆಗೆ ರೈತರು ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿಯಿತು. ವಾಹನಗಳು ಬೇರೆ ದಾರಿಯಿಲ್ಲದೆ ಪ್ರತಿಭಟನೆ ಮುಗಿಯುವರೆಗೆ ಸಾಲಾಗಿ ನಿಂತಿದ್ದವು. ಮಧ್ಯಾಹ್ನ 1 ಗಂಟೆ ನಂತರ ರೈತರು ಪ್ರತಿಭಟನೆ ಹಿಂಪಡೆದಿದ್ದರಿಂದ ಎಂದಿನಂತೆ ವಾಹನ ಸಂಚಾರ ಪ್ರಾರಂಭವಾಯಿತು.

ಪ್ರತಿಭಟನೆಯಲ್ಲಿ ಹುನಗುಂದ, ಇಳಕಲ್, ಗುಳೇದಗುಡ್ಡ, ರಾಯಚೂರು ಜಿಲ್ಲಾ ರೈತ ಸಂಘದ ಮುಖಂಡರು, ಕಮತಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು, ಕರ್ನಾಟಕ ರಕ್ಷಣಾ ವೇದಿಕೆಯ ಎಚ್ ಶಿವರಾಮೇಗೌಡ ಬಣದ ಮುಖಂಡರು, ಹಸಿರು ಕ್ರಾಂತಿ ಸಂಘಟನೆಯ ಮುಖಂಡರು ಭಾಗವಹಿಸಿದ್ದರು.

PREV

Recommended Stories

83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!