ಗುಣಮಟ್ಟದ ಶಿಕ್ಷಣಕ್ಕಾಗಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ

KannadaprabhaNewsNetwork |  
Published : Jul 08, 2026, 02:15 AM IST
ಹಾವೇರಿಯ ನಾಗೇಂದ್ರನಮಟ್ಟಿ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ದ್ವಿಭಾಷಾ ಪರಿವರ್ತನಾ ಅವಧಿಯ ಅವಲೋಕನ ಸಭೆಯನ್ನು ಡಿಡಿಪಿಐ ಮೋಹನ್ ದಂಡಿನ ಉದ್ಘಾಟಿಸಿದರು. | Kannada Prabha

ಸಾರಾಂಶ

ಸವಣೂರು ತಾಲೂಕಿನ ಮಾರುತಿಪುರ ಗ್ರಾಮದಲ್ಲಿ ನೂರಾರು ವರ್ಷಗಳಿಂದ ವಾಸಿಸುತ್ತಿದ್ದರೂ ಸಹಿತ ಇದುವರೆಗೆ ಪಟ್ಟಾ ವಿತರಿಸದಿರುವುದು ಹಾಗೂ ಸರ್ಕಾರದ ಯಾವುದೇ ಸೌಲಭ್ಯಗಳು ತಲುಪದಿರುವುದನ್ನು ಖಂಡಿಸಿ ಗ್ರಾಮಸ್ಥರು ಸೋಮವಾರ ಹಮ್ಮಿಕೊಂಡಿದ್ದ ಎಸ್‌ಐಆರ್‌ ಪ್ರಕ್ರಿಯೆಯನ್ನು ಬಹಿಷ್ಕಾರ ಕೈಗೊಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹಾವೇರಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಡಿಡಿಪಿಐ ಮೋಹನ್ ದಂಡಿನ್ ಹೇಳಿದರು.

ಇಲ್ಲಿಯ ನಾಗೇಂದ್ರನಮಟ್ಟಿ ಪಿಎಂಶ್ರೀ ಸರ್ಕಾರಿ ಉರ್ದು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 1ರಿಂದ 5ನೇ ತರಗತಿ ವಿದ್ಯಾರ್ಥಿಗಳ ದ್ವಿಭಾಷಾ ಪರಿವರ್ತನಾ ಅವಧಿಯ ಅವಲೋಕನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಿಎಂಶ್ರೀ ಶಾಲೆಯಲ್ಲಿ ಟಿಇಟಿ, ಸಿಇಟಿ ಮುಗಿಸಿದ ಶಿಕ್ಷಕರೆ ಇದ್ದು, 20 ಜನ ಸಿಬ್ಬಂದಿಗಳು ಇದ್ದಾರೆ. ಈ ಶಾಲೆಯಲ್ಲಿ ಕಲಿಯುವ ಮಗು ಉರ್ದು ಜತೆಗೆ ಆಂಗ್ಲ ಭಾಷೆಯನ್ನು ಕಲಿಯುತ್ತದೆ. ಸರ್ಕಾರಿ ಶಾಲೆಯಲ್ಲಿ ಉಚಿತ ಶಿಕ್ಷಣ ಕೊಡುತ್ತೇವೆ. ಜತೆಗೆ ಹಾಲು, ಮೊಟ್ಟೆ, ಪುಸ್ತಕ, ಸಮವಸ್ತ್ರ, ಶೂ ಸಾಕ್ಸ್, ಶಿಷ್ಯವೇತನ ಎಲ್ಲ ಸೌಲಭ್ಯ ಒದಗಿಸುತ್ತೇವೆ. ದ್ವಿಭಾಷಾ ಕಲಿಕೆ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದರು.

ತಾಯಂದಿರು ಮಕ್ಕಳ ಅಭ್ಯಾಸದ ಬಗ್ಗೆ ಕಾಳಜಿ ವಹಿಸಬೇಕು. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಮಕ್ಕಳು ಹಾದಿ ತಪ್ಪುತ್ತಿದ್ದಾರೆ. ಹಿಂಸಾತ್ಮಕ ಪ್ರವೃತ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಪೋಷಕರು ಮಕ್ಕಳ ಬೆಳವಣಿಗೆ ಬಗ್ಗೆ ಗಮನ ಹರಿಸಬೇಕು. ಮಕ್ಕಳ ಕೈಗೆ ಮೊಬೈಲ್ ಕೊಡುವಾಗ ನೂರು ಸಲ ಯೋಚಿಸಬೇಕು. ಚಿಕ್ಕ ವಯಸ್ಸಿನಲ್ಲಿ ಮಕ್ಕಳ ಮದುವೆ ಮಾಡದೆ ಶಿಕ್ಷಣ ಕೊಡಿಸಬೇಕು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಕಾರಿ ಶ್ರೀನಿವಾಸ ಬಿ.ಮಾತನಾಡಿ, ಸರ್ಕಾರ ರಾಜ್ಯದ 15 ಜಿಲ್ಲೆಗಳಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸುತ್ತಿದೆ. 490 ಮಕ್ಕಳು ಈ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಐಎಎಸ್, ಐಪಿಎಸ್, ವೈದ್ಯರು, ಎಂಜಿನಿಯರ್, ಜನನಾಯಕರನ್ನಾಗಿ ಮಾಡುವ ಶಕ್ತಿ ತಾಯಂದಿರಿಗೆ ಇದೆ. ಮಕ್ಕಳನ್ನು ಯಾವುದೇ ಕಾರಣಕ್ಕೂ ಶಾಲೆ ಬಿಡಿಸಬಾರದು. ದೊಡ್ಡ ವ್ಯಕ್ತಿಯಾಗಿ ಬೆಳೆಸಬೇಕು. ಕ್ರಿಯಾಶೀಲ ಶಿಕ್ಷಕ ವರ್ಗ ಇದ್ದು, ಶಿಕ್ಷಕರ ಸದುಪಯೋಗ ಮಕ್ಕಳು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಡಯೆಟ್ ಪ್ರಾಚಾರ್ಯ ಝೆಡ್.ಎಂ. ಖಾಜಿ, ಕ್ಷೇತ್ರ ಸಮನ್ವಯ ಅಧಿಕಾರಿ ಎಂ.ಜಿ. ಮಾದರ ಮಾತನಾಡಿದರು. ಉರ್ದು ಶಿಕ್ಷಣ ಸಂಯೋಜಕ ಅಮೀರ್ ಭಾಷಾ, ಜಹಾಂಗೀರ್ ಶಿಕಾರಿಪುರ ಪ್ರಾಸ್ತಾವಿಕ ಮಾತನಾಡಿದರು. ಉರ್ದು ಸಿಆರ್‌ಪಿ ಇಸ್ಮಾಯಿಲ್ ತಡಕನಹಳ್ಳಿ, ಎಸ್‌ಡಿಎಂಸಿ ಅಧ್ಯಕ್ಷ ಅಲ್ಲಾಉದ್ದೀನ್‌ಸಾಬ್ ಚಿತ್ತೆಖಾನ್, ಪ್ರೌಢ ಶಾಲೆ ಅಧ್ಯಕ್ಷ ಸಮೀವುಲ್ಲಾ ಮಾಣಿಕ್, ಮುಖ್ಯಶಿಕ್ಷಕರಾದ ಎಸ್.ಎ. ತಟಗಾರ, ಮಾಲತೇಶ ಅರಮನಿ, ಶಿಕ್ಷಕರಾದ ಇಬ್ರಾಹಿಂ ಖವಾಸ್, ಎಂ.ಐ. ಕೋಟಿ, ಸೈಯದ್ ಫಾಜಿಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಶಿಕ್ಷಕ ಅಜ್ಜು ನದಾಫ ನಿರೂಪಿಸಿದರು. ಸಲೀಂವುಲ್ಲಾ ಮುಲ್ಲಾ ಸ್ವಾಗತಿಸಿದರು.ದ್ವಿಭಾಷಾ ಕಲಿಕಾ ನೀತಿ ಮಕ್ಕಳ ಭವಿಷ್ಯವನ್ನು ಬದಲಾಯಿಸುತ್ತಿದೆ. ಮಕ್ಕಳ ಕಲಿಕೆಯನ್ನು ಸಹ ತಾಯಂದಿರು ಮನೆಯಲ್ಲಿ ವಿಚಾರಿಸಬೇಕು. ಮಕ್ಕಳ ಬೆಳವಣಿಗೆ ಜತೆಗೆ ಒಳ್ಳೆಯ ಸಂಸ್ಕಾರ, ಮೌಲ್ಯಯುತ ಶಿಕ್ಷಣವನ್ನು ನೀಡಬೇಕಾಗಿದೆ. ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣವು ಬಹಳ ಮುಖ್ಯವಾಗಿದೆ ಎಂದು ಶಿಕ್ಷಣ ಚಿಂತಕ ನಿಜಲಿಂಗಪ್ಪ ಬಸೇಗಣ್ಣಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಪಿಟಿಸಿಎಲ್ ಗ್ರಿಡ್ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಲು ಆಗ್ರಹ
ಎಸ್ಸಿ, ಎಸ್ಟಿ ಅಭಿವೃದ್ಧಿ ಅನುದಾನ ಸದ್ಬಳಕೆಯಾಗಲಿ: ಶ್ರೀಧರ್ ಚಿನಗುಂಡಿ